ಬಿ ಆರ್ ಪಾಟೀಲ್ ಪತ್ರಕ್ಕೆ ಉತ್ತರಿಸಲಾರೆ, ಮುಖ್ಯಮಂತ್ರಿಗಳು ತೀರ್ಮಾನಿಸುತ್ತಾರೆ: ಕೃಷ್ಣಬೈರೇಗೌಡ

Date:

Advertisements
  • ಅನಗತ್ಯವಾಗಿ ವಿವಾದ ಸೃಷ್ಟಿಸಲು ನಾನು ಇಲ್ಲಿಗೆ ಬಂದಿಲ್ಲ
  • ಇಷ್ಟಕ್ಕೂ ಸದರಿ ಇಲಾಖೆ ನನಗೆ ಬರುವುದೇ ಇಲ್ಲ: ಬೈರೇಗೌಡ

ಸಚಿವರ ಹೇಳಿಕೆಯಿಂದ ನನಗೆ ಅಪಮಾನವಾಗಿದೆ. ನನ್ನ ಮೇಲಿನ ಆರೋಪದ ಕುರಿತು ತನಿಖೆಯಾಗಿ, ಆರೋಪ
ಮುಕ್ತವಾಗುವವರೆಗೂ ಸದನಕ್ಕೆ ಬರುವುದಿಲ್ಲ ಎಂದು ಕಾಂಗ್ರೆಸ್ ಹಿರಿಯ ಶಾಸಕ ಬಿ ಆರ್ ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಕುರಿತು ಮುಖ್ಯಮಂತ್ರಿಗಳೇ ಮುಂದಿನ
ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

ವಿಜಯಪುರದಲ್ಲಿ ಬುಧವಾರ ಜಿಲ್ಲೆಯ ಬರ ಪರಿಸ್ಥಿತಿ ಹಾಗೂ ಪ್ರಗತಿ ಪರಿಶೀಲನೆ ಸಭೆಗೆ ಆಗಮಿಸಿದಾಗ ಪತ್ರಕರ್ತರೊಂದಿಗೆ ಮಾತನಾಡಿದ ಅವರು, “ಸದ್ಯ ವಿಜಯಪುರ ಜಿಲ್ಲೆಯ ಜನರ ಸಮಸ್ಯೆ ಇದ್ದರೆ ಮಾತ್ರ ತಮ್ಮೊಂದಿಗೆ ಚರ್ಚಿಸುತ್ತೇನೆ. ಅನಗತ್ಯವಾಗಿ ವಿವಾದ ಸೃಷ್ಟಿಸಲು ನಾನು ಇಲ್ಲಿಗೆ ಬಂದಿಲ್ಲ” ಎಂದರು.

“ಈ ಕುರಿತು ನಾನು ಸದನದಲ್ಲಿ ಉತ್ತರಿಸಿರುವ ವಿಷಯದ ಕುರಿತು ಮಾಹಿತಿ ನೀಡುತ್ತೇನೆ. ಸದನದಲ್ಲಿ ಏನು ಹೇಳಿದ್ದೇನೆ, ಏನು ಬಿಟ್ಟಿದ್ದೇನೆ ಎಂಬುದನ್ನು ನೀವೇ ತೀರ್ಮಾನಿಸಿ” ಎಂದು ಹೇಳಿದರು.

Advertisements

”ಸಚಿವರ ಹೇಳಿಕೆಯಿಂದ ನನಗೆ ಅವಮಾನವಾಗಿದೆ ಎಂದು ಶಾಸಕ ಬಿ ಆರ್ ಪಾಟೀಲ್ ಹೇಳಿರುವ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಲಾರೆ. ಸದ್ಯ ವಿಜಯಪುರ ಜಿಲ್ಲೆಯ ಪ್ರಗತಿ ಪರಿಶೀಲನಾ ಪ್ರವಾಸದಲ್ಲಿರುವ ನಾನು, ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತ್ರ ಗಮನ ಹರಿಸುತ್ತೇನೆ” ಎಂದರು.

ಈ ಸುದ್ದಿ ಓದಿದ್ದೀರಾ? ತನಿಖೆ ಆಗುವವರೆಗೂ ಸದನಕ್ಕೆ ಹೋಗಲ್ಲ; ತಮ್ಮದೇ ಸರ್ಕಾರದ ವಿರುದ್ಧ ಬಿ.ಆರ್ ಪಾಟೀಲ್ ಕಿಡಿ

“ಭೂ ಸೇನಾ ನಿಗಮದಲ್ಲಿ ಹಣ ಇಲ್ಲ ಎಂಬ ವಿಚಾರದ ಕುರಿತಾಗಿ ಸದನದಲ್ಲಿನ ಮಾಹಿತಿಯ ಪ್ರತಿಯನ್ನೇ ಪತ್ರಕರ್ತರಿಗೆ ನೀಡುತ್ತೇನೆ, ನೀವೆ ನೋಡಿ ತಿಳಿಯಿರಿ” ಎಂದರು.

”ಇಷ್ಟಕ್ಕೂ ಸದರಿ ಇಲಾಖೆ ನನಗೆ ಬರುವುದೇ ಇಲ್ಲ. ಶಾಸಕ ಬಿ ಆರ್ ಪಾಟೀಲ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ತನಿಖೆ ಮಾಡುವುದು ಬಿಡುವುದು ಆ ಇಲಾಖೆಗೆ ಮತ್ತು ಮುಖ್ಯಮಂತ್ರಿಗಳಿಗೆ ಬಿಟ್ಟದ್ದು. ನನಗೆ ಸಂಬಂಧ ಇಲ್ಲದ ಇಲಾಖೆ ತನಿಖೆ ಕುರಿತು ನಾನು ಹೇಳಿಕೆ ನೀಡುವುದು ಸರಿಯಲ್ಲ” ಎಂದು ಹೇಳಿದರು.

“ರಾಜ್ಯದಲ್ಲಿ ಮಳೆ ಇಲ್ಲದೇ ಭೀಕರ ಬರ ಆವರಿಸಿದೆ. ಕಂದಾಯ ಇಲಾಖೆಯಲ್ಲಿ‌ ಜನರ ಹತ್ತು ಹಲವು ಸಮಸ್ಯೆಗಳಿವೆ. ಪ್ರತಿ ಜಿಲ್ಲೆಗೂ ಹೋಗಿ ಆಯಾ ಜಿಲ್ಲೆಯ ಸಮಸ್ಯೆ ಆಲಿಸಿ, ಪರಿಹಾರ ಕಾರ್ಯಕ್ಕೆ ಮುಂದಾಗಬೇಕಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X