ಬೆಂಗಳೂರು | ನ್ಯಾಯಾಂಗ ಬಡಾವಣೆಯಲ್ಲಿ ಬೀದಿ ಬದಿ ವ್ಯಾಪಾರಿಯ ಎಳನೀರು ಕಳ್ಳತನ

Date:

Advertisements

ಬಡ ವ್ಯಾಪಾರಿಯೊಬ್ಬರು ಮಾರಾಟ ಮಾಡಲು ತಂದಿರಿಸಿದ್ದ ಸುಮಾರು 800 ಎಳನೀರು ರಾತ್ರೋರಾತ್ರಿ ಕಳ್ಳತನವಾಗಿರುವ ಘಟನೆ ಬೆಂಗಳೂರಿನ ನ್ಯಾಯಾಂಗ ಬಡಾವಣೆಯಲ್ಲಿ ನಡೆದಿದೆ.

“ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪುನೀತ್ ಎಳನೀರು ಕಳೆದುಕೊಂಡ ವ್ಯಾಪಾರಿ. ಇವರು ನ್ಯಾಯಾಂಗ ಬಡಾವಣೆಯಲ್ಲಿ ಸುಮಾರು 12 ವರ್ಷಗಳಿಂದ ಎಳನೀರು ವ್ಯಾಪಾರ ಮಾಡುತ್ತಿದ್ದಾರೆ. ಇವರ ತಾಯಿ ಮಧುಮೇಹ ಮತ್ತು ಗ್ಯಾಂಗ್ರಿನ್ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇದರ ಜತೆಗೆ ಅವರು ಮನೆ ಕೆಲಸ ಸಹ ಮಾಡಬೇಕು. ಇವರ ಕುಟುಂಬ ಈಗ ಆರ್ಥಿಕವಾಗಿ ಸಂಕಷ್ಟದಲ್ಲಿದೆ. ಇದರ ಜತೆಗೆ ಇದೀಗ ಎಳನೀರು ಕಳ್ಳತನವಾಗಿರುವುದು ಅವರಿಗೆ ಬರಸಿಡಿಲು ಬಡಿದಂತಾಗಿದೆ” ಎಂದು ಸಾಮಾಜಿಕ ಹೋರಾಟಗಾರ ಹೆಚ್ ಎಂ ವೆಂಕಟೇಶ್ ಹೇಳಿದ್ದಾರೆ.

“ಈ ಬಗ್ಗೆ ಯಲಹಂಕ ಪೊಲೀಸ್ ಠಾಣೆಗೆ ಸಂತ್ರಸ್ತ ಪುನೀತ್ ಅವರು ದೂರು ನೀಡಿದ್ದಾರೆ. ಆದರೆ, ಈ ಕೃತ್ಯ ನಡೆದು ಒಂದು ವಾರ ಕಳೆದರೂ ಕಳ್ಳರ ಬಗ್ಗೆ ಇನ್ನು ಸುಳಿವು ಸಿಕ್ಕಿಲ್ಲ. ಇತ್ತೀಚೆಗೆ ಪೊಲೀಸರು ನ್ಯಾಯಾಂಗ ಬಡಾವಣೆಯ 8ನೇ ಅಡ್ಡರಸ್ತೆ ಮತ್ತು 3ನೇ ಅಡ್ಡರಸ್ತೆ ಸೇರುವ ವೃತ್ತದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದ್ದರು. ಆದರೂ ಈ ಕೃತ್ಯ ಬಯಲಿಗೆಳೆಯುವುದು ಪೊಲೀಸರಿಗೆ ಸವಾಲು ಎಸೆಯುವಂತೆ ಇದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಪಿಂಚಣಿದಾರರ ಮನೆ ಬಾಗಿಲಿನಲ್ಲಿ ಡಿಜಿಟಲ್ ಲೈಫ್ ಪ್ರಮಾಣಪತ್ರ ಸಲ್ಲಿಸಲು ವ್ಯವಸ್ಥೆ

“ಇನ್ನು ಸಂತ್ರಸ್ತ ಪುನೀತ್ ಎಳನೀರು ಕಳೆದುಕೊಂಡು ಆರ್ಥಿಕ ಮುಗ್ಗಟ್ಟಿನಲ್ಲಿ ಬಿದ್ದಿದ್ದಾನೆ. ಪುನೀತ್ ಪಕ್ಕದ ಮನೆಯವರು ಹಾಕಿದ ಸಿಸಿ ಕ್ಯಾಮೆರಾದ ಫುಟೇಜ್‌ಗಳನ್ನು ಪೆನ್ ಡ್ರೈವ್‌ನಲ್ಲಿ ಹಾಕಿ ಪೊಲೀಸರಿಗೆ ಕೊಟ್ಟಿದ್ದಾರೆ. ಆದರೆ, ಪೊಲೀಸರು ಸಂತ್ರಸ್ತನಿಗೆ ಯಾವುದೇ ಮಾಹಿತಿಯನ್ನು ನೀಡುತ್ತಿಲ್ಲ. ಇತ್ತ ಜೀವನ ನಿರ್ವಹಣೆಯ ನಡುವೆ ಪೊಲೀಸ್ ಠಾಣೆಗೆ ಪದೇಪದೇ ಅಲೆದು ಸುಸ್ತಾಗಿದ್ದೇನೆ ಎಂದು ಸಂತ್ರಸ್ತ ಹೇಳಿದ್ದಾನೆ ಎಂದು ಹೇಳಿದರು.

ನಗರ ಪೊಲೀಸ್ ಆಯುಕ್ತರು ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಬಡ ಕುಟುಂಬಕ್ಕೆ ಸಹಾಯ ಮಾಡುತ್ತಾರೆ ಎಂಬ ಭರವಸೆ ಇದೆ ಎಂಬುದು ಸಾಮಾಜಿಕ ಹೋರಾಟಗಾರ ಹೆಚ್ ಎಂ ವೆಂಕಟೇಶ್ ಅವರ ಅಭಿಪ್ರಾಯವಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

Download Eedina App Android / iOS

X