ಗುತ್ತಿಗೆದಾರರ ಬಾಕಿ ಹಣ ಪಾವತಿ ವಿಚಾರ: ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್‌ ಕಿಡಿ

Date:

Advertisements
  • ‘ಇನ್ನೆಷ್ಟು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಬೇಕು?’ ಹೈಕೋರ್ಟ್‌ ಕಿಡಿ
  • ಬಾಕಿ ಪಾವತಿಯಲ್ಲೂ ಹಿರಿತನ ಎಂದರೆ ಏನು? ಎಂದು ಪ್ರಶ್ನಿಸಿದ ನ್ಯಾಯಾಧೀಶರು

ಗುತ್ತಿಗೆದಾರರ ಬಾಕಿ ಹಣ ಪಾವತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಡೆಯನ್ನು ಹೈಕೋರ್ಟ್‌ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವುದಾಗಿ ‘ಬಾರ್ & ಬೆಂಚ್‘ ವರದಿ ಮಾಡಿದೆ.

ಬಾಕಿ ಪಾವತಿ ಸಂಬಂಧ ನ್ಯಾಯಾಲಯದ ಆದೇಶ ಪಾಲಿಸದ ಬಿಬಿಎಂಪಿ ವಿರುದ್ಧ ಮೆಸರ್ಸ್ ನಿಕ್ಷೇಪ್ ಇನಾಫ್ರಾ ಪ್ರಾಜೆಕ್ಟ್ ಹೂಡಿರುವ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠ ಬುಧವಾರ ವಿಚಾರಣೆ ನಡೆಸಿತು.

ಅರ್ಜಿಯ ವಿಚಾರಣೆಯ ವೇಳೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌ ನ್ಯಾಯಾಧೀಶರು, “ಸರ್ಕಾರವೇ ಹೇಳಿರುವಂತೆ ಈಗಾಗಲೇ ಇಬ್ಬರು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಇನ್ನು ಎಷ್ಟು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಬೇಕು, ಬಾಕಿ ಪಾವತಿಯಲ್ಲೂ ಹಿರಿತನವೇ?’’ ಎಂದು ಖಾರವಾಗಿ ಮೌಖಿಕವಾಗಿ ಪ್ರಶ್ನಿಸಿದೆ.

Advertisements

“ನೀವು (ಸರ್ಕಾರ) ನಿಮ್ಮ ದಾಖಲೆಗಳನ್ನೇ ಒಮ್ಮೆ ನೋಡಿ, ಇಬ್ಬರು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೀಗಾಗಿ, ನಿಮ್ಮ ದಾಖಲೆ ಪರಿಶೀಲಿಸಿ, ಗುತ್ತಿಗೆದಾರರನ್ನು ಮೂಲೆಗುಂಪು ಮಾಡಬೇಡಿ. ಬಾಕಿ ಪಾವತಿಗೆ ಬಿಬಿಎಂಪಿ ಅನುಸರಿಸುತ್ತಿರುವ ವಿಧಾನವೇ ತಿಳಿಯುತ್ತಿಲ್ಲ. ಕಲ್ಯಾಣ ರಾಜ್ಯವೊಂದರಲ್ಲಿ ಕಾಮಗಾರಿಗಳಿಗೆ ಸ್ಥಳೀಯ ಸಂಸ್ಥೆಗಳು ಟೆಂಡರ್ ಕರೆದು, ಆ ಕಾಮಗಾರಿಗಳನ್ನು ಪೂರ್ಣಗೊಳಿಸಿದ ಬಳಿಕ ಮೊತ್ತ ಪಾವತಿಗೆ ಷರತ್ತುಗಳನ್ನು ಹಾಕುವುದು, ಅನಗತ್ಯ ವಿಳಂಬ ಮಾಡುವುದು ಎಷ್ಟರಮಟ್ಟಿಗೆ ಸರಿ?” ಎಂದು ಪ್ರಶ್ನಿಸಿತು.

“ನಾವು 2023ರ ಅಕ್ಟೋಬರ್‌ 30ರ ಮಧ್ಯಂತರ ಆದೇಶದಲ್ಲಿ ಸ್ಪಷ್ಟವಾಗಿ ಹೇಳಿದ್ದೇವೆ. ಆದರೂ ಬಾಕಿ ಪಾವತಿಗೆ ಮೀನಮೇಷ ಎಣಿಸಲಾಗುತ್ತಿದೆ. ಕಾಮಗಾರಿ ಪೂರ್ಣಗೊಳಿಸಿದ ಗುತ್ತಿಗೆದಾರರಿಗೆ ಹಣ ಪಾವತಿಸದೆ ಕಚೇರಿಯಿಂದ ಕಚೇರಿಗೆ ಅಲೆದಾಡಿಸುವುದು ಸರಿಯೇ? ಗುತ್ತಿಗೆದಾರರು ಕಾಮಗಾರಿ ಪೂರ್ಣಗೊಳಿಸಿರುವ ಬಗ್ಗೆ ಯಾವುದೇ ವಿವಾದವಿಲ್ಲ. ಕಾಮಗಾರಿ ಸ್ಥಗಿತಗೊಳಿಸಿ ಅದು ಅರ್ಧಕ್ಕೆ ನಿಂತಿರುವ ಪರಿಸ್ಥಿತಿಯೂ ಇಲ್ಲ. ಕಾಮಗಾರಿ ಪೂರ್ಣಗೊಳಿಸಿದ ನಂತರ ನೀವು ಕಾಯಿಸುತ್ತೀರಿ ಎಂದರೆ ಹೇಗೆ? ಎಂದು ಪ್ರಶ್ನಿಸುವ ಮೂಲಕ ಬಾಕಿ ಹಣ ಪಾವತಿಗೆ ಸರ್ಕಾರದ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಯನ್ನು ಪ್ರಶ್ನಿಸಿದ ಪೀಠವು, ‘ನಿಮ್ಮಲ್ಲಿ ಹಣ ಇಲ್ಲವೇ?’ ಎಂದು ಕೇಳಿತು. ನ್ಯಾ. ಕೃಷ್ಣ ದೀಕ್ಷಿತ್ ಅವರು, ”ನಿಮ್ಮ ಬಳಿ ಹಣ ಇಲ್ಲವೇ? ಇಲ್ಲವಾದರೆ ಹೇಳಿ ಬಿಡಿ, ಬಾಕಿ ಪಾವತಿಯಲ್ಲೂ ಹಿರಿತನ ಎಂದರೆ ಏನು? ನಿಮ್ಮ ಬಳಿ ಮಾರ್ಗಸೂಚಿ ಇದೆಯೇ, ಸರಿಯಾಗಿ ಹೇಳಿ” ಎಂದು ಸರ್ಕಾರದ ವಕೀಲರನ್ನು ಖಾರವಾಗಿ ಪ್ರಶ್ನಿಸಿದರು.

ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ವಿಕ್ರಮ್‌ ಹುಯಿಲಗೋಳ ಅವರು ಕೆಲವು ನಕಲಿ ಬಿಲ್‌ಗಳ ವಿಚಾರ ಪ್ರಸ್ತಾಪಿಸಿದಾಗ ನ್ಯಾಯಾಲಯವು, ‘ಆದಕ್ಕೂ ಈ ಅರ್ಜಿದಾರರಿಗೂ ಸಂಬಂಧ ಇಲ್ಲ, ಒಂದು ವೇಳೆ ನೀವು ಸ್ವಚ್ಛಗೊಳಿಸುವ (ಕ್ಲೀನ್ ಅಪ್) ಕಾರ್ಯಾಚರಣೆ ಆರಂಭಿಸಿದರೆ ಅದನ್ನು ಮೊದಲು ನಿಮ್ಮ ಮನೆಯಿಂದ ಆರಂಭಿಸಿ. ನೀವು ನಿಮ್ಮ ಅಧಿಕಾರಿಗಳ ವಿರುದ್ಧ ಏನಾದರೂ ಕ್ರಮ ಕೈಗೊಂಡಿದ್ದೀರಾ, ಹಾಗಿದ್ದರೆ ಹೇಳಿ? ನಾವು ನಮ್ಮ ಆದೇಶದಲ್ಲಿ ಅತ್ಯಂತ ಸ್ಪಷ್ಟವಾಗಿ ಹೇಳಿದ್ದೇವೆ. ರಾಜ್ಯ ಸರ್ಕಾರ ಸ್ವಲ್ಪ ವಿವೇಚನೆಯಿಂದ ಕಾರ್ಯನಿರ್ವಹಿಸಬೇಕು” ಎಂದು ಪೀಠ ತಿಳಿಸಿತು.

ಇದನ್ನು ಓದಿದ್ದೀರಾ? ಕಡ್ಲೇಪುರಿಯಂತೆ ಸೇಲ್ ಆಗುವ ಪ್ರಶಸ್ತಿ ಪುರಸ್ಕಾರಗಳು ಮತ್ತು ಸಾಂಸ್ಕೃತಿಕ ರಾಜಕಾರಣ

ಬಿಬಿಎಂಪಿ ಪರ ವಕೀಲರು ಕೆಲವು ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದ್ದಕ್ಕೆ, ಪೀಠವು ನಾವು ಹಿಂದಿನ ಆದೇಶದಲ್ಲಿ ಉಲ್ಲೇಖಿಸಿದಂತೆ ರಾಜ್ಯ ಸರ್ಕಾರವೇ ಇಂತಹ ಪರಿಸ್ಥಿತಿಗಳನ್ನು ತಪ್ಪಿಸಲು ಸೂಕ್ತ ಮಾರ್ಗಸೂಚಿಗಳನ್ನು ಹೊರಡಿಸಬೇಕಾಗಿದೆ ಎಂದು ಆದೇಶಿಸಿ, ವಿಚಾರಣೆಯನ್ನು ಡಿಸೆಂಬರ್‌ 13ಕ್ಕೆ ಮುಂದೂಡಿತು.

ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ, ಅರ್ಜಿದಾರರು ನಗರಾಭಿವೃದ್ಧಿ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಬಿಎಂಪಿ ಮುಖ್ಯ ಲೆಕ್ಕಾಧಿಕಾರಿ ವಾಣಿ, ಬಿಬಿಎಂಪಿ ಮಲ್ಲೇಶ್ವರಂ ವಿಭಾಗದ ಕಾರ್ಯಕಾರಿ ಎಂಜಿನಿಯರ್ ಜೈಶಂಕರ್ ಮತ್ತಿತರರನ್ನು ಪ್ರತಿವಾದಿಗಳನ್ನಾಗಿ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X