ಗುತ್ತಿಗೆದಾರ ಅಂಬಿಕಾಪತಿ ಸಾವು | ಕೆಂಪಣ್ಣ ಹೇಳಿಕೆ ಸರ್ಕಾರ ಗಂಭೀರವಾಗಿ ಪರಿಗಣಿಸಲಿ: ಯತ್ನಾಳ ಆಗ್ರಹ

Date:

Advertisements
  • ಅಂಬಿಕಾಪತಿ ಸಾವು ಸಹಜವಲ್ಲವೆಂದಿರುವ ಕೆಂಪಣ್ಣ
  • ಅಂಬಿಕಾಪತಿ ಮನೆಯಲ್ಲಿ 40 ಕೋಟಿ ಹಣ ಸಿಕ್ಕಿತ್ತು

ಗುತ್ತಿಗೆದಾರ ಅಂಬಿಕಾಪತಿ ಸಾವು ಸಹಜವಲ್ಲವೆಂದಿರುವ ಕೆಂಪಣ್ಣನವರ ಹೇಳಿಕೆಯನ್ನು ಸರ್ಕಾರ ಹಾಗು ಮಾಧ್ಯಮಗಳು ಗಂಭೀರವಾಗಿ ಪರಿಗಣಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, “ಅಂಬಿಕಾಪತಿ ಮನೆಯಲ್ಲಿ 40 ಕೋಟಿ ಹಣ ಆದಾಯ ತೆರಿಗೆ ದಾಳಿಯ ವೇಳೆ ಸಿಕ್ಕಿತ್ತು. ಈ ಹಣ ಸರ್ಕಾರ ಪ್ರಭಾವಿ ಮಂತ್ರಿ ಹಾಗು ಒಬ್ಬ ಪ್ರಭಾವಿ ರಾಜಕಾರಣಿಯ ಮಗನಿಗೆ ಸೇರಿದ್ದು ಎಂಬ ಸುದ್ದಿಯೂ ಇದೆ. ಇದಕ್ಕೆ ಸಾಕ್ಷಿಯಾಗಿ ಆ ಪ್ರಭಾವಿ ರಾಜಕಾರಣಿ ಮಗನ ಆಪ್ತ ಸಹಾಯಕನನ್ನು ಆದಾಯ ತೆರಿಗೆ ಇಲಾಖೆ ವಿಚಾರಣೆಗೆ ಒಳಪಡಿಸಿತ್ತು” ಎಂದಿದ್ದಾರೆ.

“ಆದಾಯ ತೆರಿಗೆ ಇಲಾಖೆಗೆ ಪ್ರಕರಣದ ಕುರಿತು ಹೇಳಿಕೆ ನೀಡಿದ್ದ ಅಂಬಿಕಾಪತಿ ಯಾರ ಹೆಸರುಗಳನ್ನು ಹೇಳಿದ್ದಾರೋ, ಆ ಹಣ ಯಾರದ್ದು ಎಂದು ಹೇಳಿದ್ದಾರೋ ಎಂಬ ಅಂಶವು ತನಿಖೆಯಲ್ಲಿ ಬಯಲಾಗಬೇಕಿದೆ. ಅಂಬಿಕಾಪತಿಯ ಸಾವಿನ ಬಗ್ಗೆಯೂ ಕೂಲಂಕಷವಾಗಿ ತನಿಖೆಯಾಗಬೇಕು” ಎಂದು ಒತ್ತಾಯಿಸಿದ್ದಾರೆ.

Advertisements

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X