ಚಾಮರಾಜನಗರ | ನಂದಿನಿ – ಅಮೂಲ್‌ ವಿಲೀನ ವಿರೋಧಿಸಿ ರಸ್ತೆ ತಡೆದು ಪ್ರತಿಭಟನೆ

Date:

Advertisements
  • ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ, ರಸ್ತೆ ತಡೆ
  • ನಂದಿನಿ ಹಾಲು, ಉತ್ಪನ್ನಗಳು ಕನ್ನಡಿಗರ ಅಸ್ಮಿತೆ

ಕೆಎಂಎಫ್‌ನ ನಂದಿನಿಯೊಂದಿಗೆ ಅಮುಲ್‌ ವಿಲೀನಗೊಳಿಸಬಾರದು ಎಂದು ಒತ್ತಾಯಿಸಿ ಕರ್ನಾಟಕ ಸೇನಾ ಪಡೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಕರ್ನಾಟಕ ಸೇನಾಪಡೆಯ ಅಧ್ಯಕ್ಷ ಚಾ ರಂ ಶ್ರೀನಿವಾಸಗೌಡ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, “ಕರ್ನಾಟಕದ ನಂದಿನಿ ಹಾಲು ಮತ್ತು ಉತ್ಪನ್ನಗಳು ಕನ್ನಡಿಗರ ಅಸ್ಮಿತೆ. ನಮ್ಮ ಸ್ವಾಭಿಮಾನದ ಸಂಕೇತ ಇದು. ಈ ನಂದಿನಿ ಹಾಲಿನ ಉತ್ಪನ್ನಗಳ ಮೇಲೆ ರಾಜ್ಯದಲ್ಲಿ ಲಕ್ಷಾಂತರ ರೈತರು, ಅವರು ಕುಟುಂಬ ಅವಲಂಬಿತರಾಗಿದ್ದಾರೆ” ಎಂದಿದ್ದಾರೆ.

“ನಂದಿನಿಯನ್ನು ಗುಜರಾತಿನ ಅಮುಲ್‌ನೊಂದಿಗೆ ವಿಲೀನ ಮಾಡಿದರೆ ಲಕ್ಷಾಂತರ ಜನರು ಬೀದಿಪಾಲಾಗುತ್ತಾರೆ. ಆದ್ದರಿಂದ ಯಾವುದೇ ಕಾರಣಕ್ಕೂ ವಿಲೀನ ಮಾಡಬಾರದು. ಒಂದು ವೇಳೆ ಮಾಡಿದರೆ ರಾಜ್ಯದಾದ್ಯಂತ ತೀವ್ರ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಮೋದಿಯವರೇ, ಒಮ್ಮೆ ನಂದಿನಿ ಬ್ರ್ಯಾಂಡ್‌ನ ರುಚಿ ನೋಡಿ: ಗೌರವ್ ವಲ್ಲಭ್‌

ಚಾಮರಾಜನಗರದ ಚಾಮರಾಜೇಶ್ವರ ಉದ್ಯಾನದಿಂದ ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ರಸ್ತೆ ತಡೆ ನಡೆಸಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ಶಾ ಮರುಳಿ, ಚಾ ವೆಂ ರಾಜ್‌ಗೋಪಾಲ್, ಪಣ್ಯದಹುಂಡಿ ರಾಜು, ಚಾ ರಾ ಕುಮಾರ್, ಗು ಪುರುಷೋತ್ತಮ್, ಮೂರ್ತಿ, ಶಿವರುದ್ರಸ್ವಾಮಿ, ಬಸವಣ್ಣ, ನಂಜಂಡಸ್ವಾಮಿ, ರವಿಚಂದ್ರ ಪ್ರಸಾದ್‌ಕಹಳೆ, ಅಭಿಷೇಕ್, ಸಂಜಯ್, ಶಿವಣ್ಣ, ತಾಂಡವಮೂರ್ತಿ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X