ಚಳಿಗಾಲ ಅಧಿವೇಶನ | ಪ್ರತಿಭಟನೆಗೆ ಬಳಸಲಾಗುವ ರೈತರ ಜಮೀನು ಬಾಡಿಗೆ ದರ ಹೆಚ್ಚಳ  

Date:

Advertisements
  • ಕಳೆದ ವರ್ಷ ರೈತರ ಜಮೀನಿಗೆ ಪ್ರತಿ ಗುಂಟೆಗೆ ರೂ. 1200 ನೀಡಲಾಗಿತ್ತು
  • ಈ ಭಾರಿ ಪ್ರತಿ ಗುಂಟೆಗೆ ರೂ. 3,000 ನೀಡುವಂತೆ ಹೆಬ್ಬಾಳಕರ್ ಸೂಚನೆ 

ವಿಧಾನ ಮಂಡಲದ ಚಳಿಗಾಲ ಅಧಿವೇಶನದ ಸಂದರ್ಭದಲ್ಲಿ ನಡೆಯಲಿರುವ ವಿವಿಧ ಪ್ರತಿಭಟನೆಗಳಿಗೆ ಬಳಸಲಾಗುವ ರೈತರ ಜಮೀನಿನ ಬಾಡಿಗೆಯನ್ನು ಹೆಚ್ಚಳ ಮಾಡಲಾಗಿದೆ.

ರೈತರ ಮನವಿಯ ಮೇರೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಈ ಕುರಿತು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದರು. ಕಳೆದ ವರ್ಷ ಪ್ರತಿಭಟನೆಯ ಟೆಂಟ್ ನಿರ್ಮಾಣಕ್ಕೆ ಬಳಸಲಾಗಿದ್ದ ರೈತರ ಜಮೀನಿಗೆ ಪ್ರತಿ ಗುಂಟೆಗೆ ರೂ. 1200 ನೀಡಲಾಗಿತ್ತು. ಆ ಜಮೀನಿನಲ್ಲಿ ಯಾವುದೇ ಫಸಲು ಬೆಳೆದಿರಲಿಲ್ಲ.

ಈ ಬಾರಿ ಹಲಗಾ ಗ್ರಾಮದ ರೈತರ 3.28 ಎಕರೆ ಜಮೀನನ್ನು ಪ್ರತಿಭಟನಾ ಟೆಂಟ್‌ಗಾಗಿ ಬಳಸಲಾಗುತ್ತಿದೆ. ಈ ಜಮೀನಿನಲ್ಲಿ ರೈತರು ಫಸಲು ಬೆಳೆದಿದ್ದರಿಂದ ಪ್ರತಿ ಗುಂಟೆಗೆ ರೂ. 3,000 ನೀಡುವಂತೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದ್ದರು.

Advertisements

ಸಚಿವರ ಸೂಚನೆಯಂತೆ ರೈತರಿಗೆ ಪ್ರತಿ ಗುಂಟೆಗೆ ರೂ. 3,000 ನೀಡಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಉಪ ವಿಭಾಗಾಧಿಕಾರಿಗಳು ತಿಳಿಸಿದ್ದಾರೆ. ಇದಕ್ಕೂ ಮೊದಲು ರೈತರು ಜಮೀನಿನ ಬಾಡಿಗೆ ಹೆಚ್ಚಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಲ್ಲಿ ಮನವಿ ಮಾಡಿದ್ದರು. ಸಚಿವರು ರೈತರ ಮನವಿಗೆ ಸ್ಪಂದಿಸಿದಂತಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X