ಏರ್ ಇಂಡಿಯಾ ವಿಮಾನದಲ್ಲಿ ಸೋರಿದ ನೀರು: ವೈರಲ್ ಆದ ವಿಡಿಯೋ

Date:

Advertisements

ಪ್ರಯಾಣಿಸುವ ಸಂದರ್ಭದಲ್ಲಿ ಏರ್‌ ಇಂಡಿಯಾ ವಿಮಾನದಲ್ಲಿ ಮೇಲಿನಿಂದ ನೀರು ಸೋರುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ.

ಬಾಲ್ಡ್‌ವೈನರ್‌ ಎಂಬ ಖಾತೆದಾರರು ಟ್ವಟರ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದು, ದೃಶ್ಯದಲ್ಲಿರುವಂತೆ ವಿಮಾನದಲ್ಲಿ ಪ್ರಯಾಣಿಕರು ನಿದ್ರಿಸುತ್ತಿರುವಾಗ ವಸ್ತುಗಳನ್ನು ಇಡುವ ಲಗೇಜ್‌ ಸ್ಥಳದಿಂದ ಪ್ರಯಾಣಿಕರ ಸೀಟಿಗೆ ನೀರು ಸೋರುತ್ತಿತ್ತು.

“ನಮ್ಮೊಂದಿಗೆ ಪ್ರಯಾಣಿಸಿ ಎನ್ನುವ ಏರ್‌ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಿದರೆ ಮುಳುಗುವ ಅನುಭವವಾಗುವುದು ಖಂಡಿತಾ” ಎಂಬ ಶೀರ್ಷಿಕೆ ನೀಡಿ ಬಳಕೆದಾರರು ಪೋಸ್ಟ್ ಮಾಡಿದ್ದಾರೆ.

Advertisements

ದೃಶ್ಯ ಯಾವ ವಿಮಾನದ್ದು ಎಂಬುದು ಖಚಿತವಾಗದಿದ್ದರೂ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿರುವ ಬಳಕೆದಾರರು ಏರ್‌ ಇಂಡಿಯಾ ವಿಮಾನದಲ್ಲಿ ಈ ಘಟನೆ ಸಂಭವಿಸಿದೆ ಎಂದು ತಿಳಿಸಿದ್ದಾರೆ.

ಯಾವ ಕಾರಣಕ್ಕಾಗಿ ನೀರು ಸೋರಿಕೆಯಾಗಿದೆ ಎಂಬುದು ಸರಿಯಾಗಿ ತಿಳಿದಿಲ್ಲ. ಟ್ವಿಟರ್‌ನಲ್ಲಿ ಈ ಪೋಸ್ಟ್‌ಗೆ ಕೆಲವರು ತಾಂತ್ರಿಕ ದೋಷ ಎಂದು ಪ್ರತಿಕ್ರಿಯೆ ನೀಡಿದರೆ ಮತ್ತು ಹಲವರು ಏರ್‌ ಇಂಡಿಯಾದ ಕಳಪೆ ಸೇವೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪ್ರೊ. ಅರ್ನಾಲ್ಡ್ ಡಿಕ್ಸ್ : ಉತ್ತರಾಖಂಡ ಸುರಂಗ ರಕ್ಷಣಾ ಕಾರ್ಯಾಚರಣೆಯ ಹಿಂದಿನ ಶಕ್ತಿ

“ಇದು ಏರ್‌ ಇಂಡಿಯಾದ ಬೇಜವಾಬ್ದಾರಿಯಾಗಿದೆ. ನೀರು ಸೋರಿಕೆಯಿಂದ ವಿಮಾನದಲ್ಲಿ ತಾಂತ್ರಿಕ ದೋಷವುಂಟಾಗಿ ತೊಂದರೆಯುಂಟಾಗುವ ಸಾಧ್ಯತೆಯಿದೆ. ಅಪಾಯದ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ” ಎಂದು ಬಳಕೆದಾರರೊಬ್ಬರು ಉತ್ತರ ನೀಡಿದ್ದಾರೆ.

“ಇದು ನೀರು, ಇಂಧನವಲ್ಲ, ಹಾನಿಕಾರಕ ದ್ರವವಲ್ಲ. ಓವರ್‌ ಹೆಡ್‌ ಟ್ಯಾಂಕ್‌ ಅಂತೂ ಅಲ್ಲವೇ ಅಲ್ಲ” ಎಂದು ಮತ್ತೊಬ್ಬ ನೆಟ್ಟಿಗರು ಅಭಿಪ್ರಾಯ ಪಟ್ಟಿದ್ದಾರೆ.

ಘಟನೆ ಬಗ್ಗೆ ಏರ್‌ಇಂಡಿಯಾ ಸಮಸ್ಥೆ ಇಲ್ಲಿಯವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X