ಕೋಲಾರ | ಏ.13ಕ್ಕೆ ಜಾನುವಾರುಗಳೊಂದಿಗೆ ಸಂಸದರ ಕಚೇರಿಗೆ ರೈತರಿಂದ ಮುತ್ತಿಗೆ

Date:

Advertisements
  • ಅಮುಲ್‌ – ನಂದಿನಿ ವಿಲೀನ ವಿರೋಧಿಸಿ ಪ್ರಭಟನೆ
  • ಎಪಿಎಂಸಿ ಆವರಣದಲ್ಲಿ ನಡೆದ ರೈತ ಸಂಘದ ಸಭೆ

ಕೆಎಂಎಫ್‌ನ ನಂದಿನಿ ಮತ್ತು ಅಮುಲ್‌ ವಿಲೀನ ವಿರೋಧಿಸಿ ‘ಗೋ ಬ್ಯಾಕ್‌ ಅಮುಲ್‌’ ಎಂಬ ಘೋಷಣೆಯೊಂದಿಗೆ ಏಪ್ರಿಲ್‌ 13ರಂದು ಜಾನುವಾರುಗಳೊಂದಿಗೆ ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ರೈತಸಂಘದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಕೋಲಾರ ನಗರದ ಎಪಿಎಂಸಿ ಆವರಣದಲ್ಲಿ ನಡೆದ ರೈತಸಂಘದ ಸಭೆಯಲ್ಲಿ ತಾಲೂಕು ಅಧ್ಯಕ್ಷ ಯಲುವಳ್ಳಿ ಪ್ರಭಾಕರ್‌ ಮಾತನಾಡಿ, “ಗೋ ಬ್ಯಾಕ್‌ ಅಮುಲ್‌ ಎಂಬ ಘೋಷಣೆಯೊಂದಿಗೆ ಕನ್ನಡಿಗರ ಆಸ್ತಿ, ರೈತ ಕೂಲಿ ಕಾರ್ಮಿಕರ ಸ್ವಾಭಿಮಾನದ ಬದುಕು ಕಲ್ಪಿಸಿ ಕೊಟ್ಟಿರುವ ನಂದಿನಿ ಹಾಲಿಗೆ ಪರ್ಯಾಯವಾಗಿ, ಗುಜರಾತಿನ ಅಮುಲ್‌ ಹಾಲಿನ ಉತ್ಪನ್ನಗಳ ಮಾರಾಟಕ್ಕೆ ಮಾರುಕಟ್ಟೆ ಒದಗಿಸಲು ಹೊರಟಿರುವ ಆದೇಶ ವಾಪಸ್‌ ಪಡೆಯದೇ ಇದ್ದರೆ, ಮತ ಕೇಳಲು ಬರುವ ಬಿಜೆಪಿ ನಾಯಕರಿಗೆ ಗ್ರಾಮೀಣ ಪ್ರದೇಶಗಳಲ್ಲಿ ಪೊರಕೆ ಚಳುವಳಿ ಮಾಡಬೇಕಾಗುತ್ತದೆ” ಎಂದು ಜನಪ್ರತಿನಿಧಿಗಳಿಗೆ ಎಚ್ಚರಿಕೆ ನೀಡಿದರು.

ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ ನಾರಾಯಣಗೌಡ ಮಾತನಾಡಿ, “ಕೋಟ್ಯಾಂತರ ಗ್ರಾಮೀಣ ಪ್ರದೇಶದ ರೈತಾಪಿ ಕುಟುಂಬಗಳಿಗೆ ಸಾಂಕ್ರಾಮಿಕ ರೋಗಗಳು ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಆರ್ಥಿಕವಾಗಿ ಸಂಸಾರದ ಕೈ ಹಿಡಿದ ಏಕೈಕ ಉದ್ಯಮ ಹೈನುಗಾರಿಕೆ. ಅಂತಹ ಉದ್ಯಮವನ್ನೇ ಹೊರ ರಾಜ್ಯದವರು ಕಿತ್ತುಕೊಳ್ಳಲು ಹೊರಟಿರುವುದು ದುರಾದೃಷ್ಟಕರ” ಎಂದು ಬೇಸರ ವ್ಯಕ್ತಪಡಿಸಿದರು.

Advertisements

“ಕೇಂದ್ರ ಸರ್ಕಾರದ ಆದೇಶವನ್ನು ತಿರಸ್ಕರಿಸದೆ ಅವರ ಮಾತಿಗೆ ಬೆನ್ನೆಲುಬಾಗಿ ರಾಜ್ಯದ ರೈತರೇ ಅಮುಲ್‌ ಉತ್ಪನ್ನಗಳನ್ನು ಬಯಸಿದ್ದಾರೆಂದು ಹೇಳಿಕೆ ನೀಡುತ್ತಿರುವುದು ನೋಡಿದರೆ, ಮುಂದಿನ ದಿನಗಳಲ್ಲಿ ಕರ್ನಾಟಕವನ್ನೇ ಮಹಾರಾಷ್ಟ್ರಕ್ಕೆ ಮಾರಾಟ ಮಾಡುವ ಕಾಲ ದೂರವಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಭಾಷೆಯಿಂದ ಹಿಡಿದು ಆಹಾರದವರೆಗೂ ಕರ್ನಾಟಕವನ್ನೇ ಗುರಿಯಾಗಿಸಿಕೊಂಡಿರುವುದಕ್ಕೆ ಕಾರಣವಾದರೂ ಏನು? ಹಿರಿಯರು ಕಟ್ಟಿ ಬೆಳೆಸಿದಂತಹ ನಂದಿನಿಯನ್ನೇ ಉಳಿಸಿಕೊಳ್ಳಲಾಗದ ಜನಪ್ರತಿನಿಧಿಗಳಿಗೆ ಮಾನ ಮರ್ಯಾದೆ ಇದೆಯೇ? ಇದ್ದರೆ ಕೂಡಲೇ ಅಮುಲ್‌ ತಿರಸ್ಕರಿಸಿ, ರೈತಾಪಿ ವರ್ಗದ ಜೀವನ ಉಳಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ನಂದಿನಿ – ಅಮೂಲ್‌ ವಿಲೀನ ವಿರೋಧಿಸಿ ರಸ್ತೆ ತಡೆದು ಪ್ರತಿಭಟನೆ

“24 ಗಂಟೆಯಲ್ಲಿ ಕನ್ನಡಿಗರ ನಂದಿನಿಯನ್ನು ನಿರ್ಲಕ್ಷ್ಯ ಮಾಡಿ ಅಮುಲ್‌ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ನೀಡಿರುವ ಆದೇಶವನ್ನು ವಾಪಸ್‌ ಪಡೆಯದೇ ಇದ್ದರೆ, ಜಾನುವಾರುಗಳ ಸಮೇತ ಸಂಸದ ಕಚೇರಿ ಏಪ್ರೀಲ್‌ 13ರಂದು ಮುತ್ತಿಗೆ ಹಾಕಿ ನ್ಯಾಯ ಪಡೆದುಕೊಳ್ಳುತ್ತೇವೆ. ನಮ್ಮ ಹೋರಾಟ ನಮ್ಮ ಕನ್ನಡಿಗರ ಆಸ್ತಿಯಾದ ನಂದಿನಿಯ ಉಳಿವಿಗಾಗಿ” ಎಂದು ಹೇಳಿದರು.

ಈ ವೇಳೆ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಫಾರೂಖ್‌ ಪಾಷ, ರಾಜ್ಯ ಕಾರ್ಯಾಧ್ಯಕ್ಷ ಬಂಗಾರಿ ಮಂಜು, ಕೋಲಾರ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್‌, ಹೆಬ್ಬಣಿ ಆನಂದರೆಡ್ಡಿ, ಭಾಸ್ಕರ್‌, ರಾಜೇಶ್‌, ಆದಿಲ್‌ ಪಾಷ, ವಿಜಯ್‌ ಪಾಲ್‌, ಜುಬೇರ್‌ ಪಾಷ, ಪದ್ಮಘಟ್ಟ ಧರ್ಮ, ನಂಗಲಿ ನಾಗೇಶ್‌, ಗಿರೀಶ್‌, ರಾಮಸಾಗರ ವೇಣು, ಮಾಸ್ತಿ ವೆಂಕಟೇಶ್‌, ಯಲ್ಲಣ್ಣ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X