ಕೊಡಗು | ಭಾವನಾತ್ಮಕ ವಿಚಾರದಲ್ಲಿ ರಾಜಕೀಯ ಮಾಡುವ ಬದಲಿಗೆ ಅಭಿವೃದ್ಧಿ ರಾಜಕಾರಣ ಮಾಡಲಿ: ಶಾಸಕ ಎ ಎಸ್ ಪೊನ್ನಣ್ಣ 

Date:

Advertisements

ವಿಧಾನಸಭಾ ಚುನಾವಣೆಗೆ 15 ದಿನಗಳು ಇದ್ದ ಸಂದರ್ಭ ಹಿಂದಿನ ಬಿಜೆಪಿ ಸರ್ಕಾರ ಮತಗಳಿಕೆಯ ಉದ್ದೇಶದಿಂದ ಕೊಡವ ಅಭಿವೃದ್ಧಿ ನಿಗಮ ಘೋಷಣೆ ಮಾಡಿತ್ತು. ಆದರೆ ಇಂದಿಗೂ ಕೊಡವ ಅಭಿವೃದ್ಧಿ ನಿಗಮ ಕಂಪನಿ ಕಾಯಿದೆ ನಡಿ ನೋಂದಣಿ ಆಗಿಲ್ಲ. ನಿಗಮ ನೋಂದಣಿ ಆಗದಿರುವ ಬಗ್ಗೆ ಸಂಸದ ಪ್ರತಾಪ್ ಸಿಂಹ ಅವರೇ ಸ್ವತಃ ಹೇಳಿದ್ದಾರೆ. ಸತ್ಯ ಏನೆಂಬುದು ಅವರ ಬಾಯಿಂದಲೇ ಬಂದಿದೆ ಎಂದು ಶಾಸಕ ಎ ಎಸ್ ಪೊನ್ನಣ್ಣ ಹೇಳಿದರು.

ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ನಿಗಮ ಘೋಷಣೆ ಆದಲ್ಲಿ ನಿಗಮಕ್ಕೆ ಮುಖ್ಯಸ್ಥರು, ನಿರ್ದೇಶಕರು, ಸಿಬ್ಬಂದಿಗಳು ಇರುತ್ತಾರೆ. ಆರ್ಥಿಕ ಇಲಾಖೆಯಿಂದ ಅನುಮೋದನೆ ದೊರೆತು ನಿಗಮಕ್ಕೆ ಅನುದಾನ ಬಿಡುಗಡೆಯಾಗುತ್ತದೆ. ಆದರೆ ಸಂಸದರು ಹೇಳುವಂತೆ ಜಿಲ್ಲಾಧಿಕಾರಿ ಖಾತೆಯಲ್ಲಿ ಹಣವಿದೆ ಎಂದಾದರೇ ಅದು ನಿಗಮಕ್ಕೆ ಸೇರಿದ್ದಲ್ಲ ಎಂದಾಯಿತಲ್ಲ” ಎಂದು ಎ ಎಸ್ ಪೊನ್ನಣ್ಣ ಹೇಳಿದರು.

“ಜಿಲ್ಲಾಧಿಕಾರಿ ಖಾತೆಯಲ್ಲಿರುವ ಹಣ 2018ರಲ್ಲಿ ಜಿಲ್ಲೆಯ ಅಭಿವೃದ್ದಿಗೆಂದು ಬಿಡುಗಡೆಯಾದ ಹಣ. ಇದರಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳದ ಹಿನ್ನೆಲೆಯಲ್ಲಿ ಹಣ ಡಿಸಿ ಖಾತೆಯಲ್ಲಿ ಹಾಗೇ ಉಳಿದಿದೆ. ಸುಳ್ಳು ಯಾರು ಹೇಳುತ್ತಿದ್ದಾರೆಂದು ಜನರು ತೀರ್ಮಾನ ಮಾಡುತ್ತಾರೆ” ಎಂದರು.

Advertisements

“ಪೊಲೀಸರು ಅವರ ಕೆಲಸವನ್ನು ಮಾಡಲು ಬಿಡಬೇಕು. ಪೊಲೀಸ್ ಠಾಣೆಗೆ ಹೋಗಿ ಪೊಲೀಸರ ಮೇಲೆ ದರ್ಪ ತೋರುವುದಲ್ಲ. ಈ ಹಿಂದೆ ನಡೆದ ಮೊಟ್ಟೆ ಪ್ರಕರಣದಲ್ಲಿ ನಾನು ಸ್ಥಳದಲ್ಲಿ ಇರದಿದ್ದರೂ ನನ್ನ ಮೇಲೆ ಎಫ್ಐಆರ್ ದಾಖಲಿಸಲಾಗಿತ್ತು, ನಾನಾಗ ಪೊಲೀಸ್ ಠಾಣೆಗೆ ಹೋಗಿದ್ದೇನಾ? ಈ ಕೇಸಿನಲ್ಲಿ ನನ್ನ ವಿರುದ್ಧ ದೂರು ನೀಡಿದ್ದವರಿಗೆ ಕೋರ್ಟ್ ಛೀಮಾರಿ ಹಾಕಿತ್ತು. ಪೇಸಿಎಂ ಪೋಸ್ಟರ್ ಅಂಟಿಸಿದ ವಿಚಾರಕ್ಕೆ ಕೇಸು ದಾಖಲಿಸಿ ನಮ್ಮನ್ನು ಬಂಧಿಸಿದ್ದಾಗ ನಾವು ಪೊಲೀಸ್ ಠಾಣೆಗೆ ಹೋಗಿರಲಿಲ್ಲ. ಪೊಲೀಸರು ಅವರ ಕೆಲಸ ಅವರು ಮಾಡುತ್ತಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಜನಪ್ರತಿನಿಧಿಗಳ ಮೇಲಿದೆ” ಎಂದು ಸಂಸದ ಪ್ರತಾಪ್‌ ಸಿಂಹಗೆ ತಿರುಗೇಟು ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ಹಣ ಮಂಜೂರಾತಿಗೆ ಅಧಿಕಾರಿಗಳಿಂದ ಲಂಚ; ಗ್ರಾ.ಪಂ ಕಚೇರಿಯಲ್ಲಿ ದನ ಕಟ್ಟಿ ಪ್ರತಿಭಟನೆ

“ಕೊಡಗು ವಿಶ್ವವಿದ್ಯಾಲಯ ಸ್ಥಾಪಿಸಲಾಗಿದ್ದು, 20 ಕಾಲೇಜುಗಳ ಉಪನ್ಯಾಸಕರಿಗೆ ಕೊಡಲು ಸಂಬಳವೇ ಇಲ್ಲ. ಕೇವಲ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುವ ಬದಲಿಗೆ ಅಭಿವೃದ್ಧಿ ರಾಜಕಾರಣ ಮಾಡಲಿ” ಎಂದು ಶಾಸಕ ಎ ಎಸ್ ಪೊನ್ನಣ್ಣ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X