ರಾಯಚೂರು | ದೇವದಾಸಿಯರ ಧರಣಿಗೆ ಅಧಿಕಾರಿಗಳಿಂದ ಸ್ಪಂದನೆ; ಕಾರ್ಯರೂಪಕ್ಕೆ ತರುವಂತೆ ಧರಣಿನಿರತರ ಪಟ್ಟು

Date:

Advertisements

ಮಾಜಿ ದೇವದಾಸಿ ಮಹಿಳೆಯರ ಮಾಸಾಶನ ಮತ್ತು ಸಮೀಕ್ಷೆಯಿಂದ ಬಿಟ್ಟು ಹೋದ ದೇವದಾಸಿಯರನ್ನು ಪಟ್ಟಿಗೆ ಸೇರಿಸುವುದಾಗಿ ಕರ್ನಾಟಕ ಮಹಿಳಾ ಅಭಿವೃದ್ಧಿ ನಿಗಮದಿಂದ ಭರವಸೆಯ ಪತ್ರ ನೀಡಿದ್ದು, ರಾಯಚೂರು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದ್ದಾರೆ.

ದೇವದಾಸಿ ಮಹಿಳೆಯರಿಗೆ ಬಾಕಿ ಪಿಂಚಣಿ ನೀಡುವುದು ಹಾಗೂ ಮಕ್ಕಳಿಗೆ ಶಿಷ್ಯವೇತನ ನೀಡುವುದು ಸೇರಿದಂತೆ ಹಲವು ಬೇಡಿಕೆಗೆ ಆಗ್ರಹಿಸಿ ರಾಜ್ಯ ಮಹಿಳಾ ಒಕ್ಕೂಟ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿಗೆ ಸ್ಪಂದಿಸಿದ್ದು, ಕರ್ನಾಟಕ ಮಹಿಳಾ ಅಭಿವೃದ್ಧಿ ನಿಗಮದಿಂದ ನೀಡಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ

“ಮಾಜಿ ದೇವದಾಸಿ ಮಹಿಳೆಯರ ಮಾಸಾಶನವನ್ನು ಪ್ರತಿ ಮಾಹೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಡಿಇಟಿ ಮೂಲಕ ಪಾವತಿಸುತ್ತಿದ್ದು, ಸೆಪ್ಟೆಂಬರ್ ಮತ್ತು ಅಕ್ಟೋಬರ್ ಮಾಹೆಯ ಮಾಸಾಶನವನ್ನು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ನಿರ್ದೇಶನಾಲಯಕ್ಕೆ ಬಿಲ್ಲನ್ನು ಸೃಜಿಸಿ ಖಜಾನೆ-2ಕ್ಕೆ ಪಾವತಿಗಾಗಿ ಕಳುಹಿಸಿದ್ದು, ಖಜಾನೆ-2ರಲ್ಲಿ ತಾಂತ್ರಿಕ ತೊಂದರೆಯಿಂದಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಮಾಸಾಶನ ಜಮೆ ಆಗಿಲ್ಲದಿರುವುದು ಕಂಡುಬಂದಿದೆ. ಸಮಸ್ಯೆಯನ್ನು ಪರಿಹರಿಸಲು ಖಜಾನೆ -2ರವರಿಗೆ ತಿಳಿಸಲಾಗಿದ್ದು, ಎರಡ್ಮೂರು ದಿನಗಳಲ್ಲಿ ಸಮಸ್ಯೆಯನ್ನು ಬಗೆಹರಿಸಲಾಗುವುದು” ಎಂದು ಭರವಸೆ ನೀಡಿದ್ದಾರೆ.

Advertisements

“ಸಮೀಕ್ಷಾ ಪಟ್ಟಿಯಿಂದ ಹೊರಗುಳಿದ ಮಾಜಿ ದೇವದಾಸಿ ಮಹಿಳೆಯರಿಗೆ ಮರು ಸಮೀಕ್ಷೆಯನ್ನು ನಡೆಸಲು ಸರ್ಕಾರಕ್ಕೆ ಏಕ ಕಡತವನ್ನು ಸಲ್ಲಿಸಿದ್ದು ಸರ್ಕಾರದಿಂದ ಅನುಮೋದನೆ ದೊರೆತ ನಂತರ ಮರು ಸಮೀಕ್ಷೆ ಕೈಗೊಂಡು ಅರ್ಹತಾ ಮಾನದಂಡಗಳಂತೆ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ಧರಣಿ

ದೇವದಾಸಿ ಮಹಿಳೆಯರ ಮಕ್ಕಳಿಗೆ ವಸತಿ ನಿಲಯ, ಪರಿಶಿಷ್ಟ ಜಾತಿಯ ವಿದ್ಯಾರ್ಥಿ ವೇತನ ಹೊರತುಪಡಿಸಿ ಹೆಚ್ಚುವರಿಯಾಗಿ ವಿದ್ಯಾರ್ಥಿ ವೇತನ ನೀಡಬೇಕು ಹಾಗೂ ಸ್ವಯಂ ಉದ್ಯೋಗ ಮಾಡಿಕೊಳ್ಳಲು ಸಬ್ಸಿಡಿ ಸಾಲ ನೀಡಬೇಕೆಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದು, “ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಮಾಜಿ ದೇವದಾಸಿ ಮಹಿಳೆಯರ ಜೀವನೋಪಾಯಕ್ಕಾಗಿ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ದೇವದಾಸಿ ಪುನರ್ವಸತಿ ಯೋಜನೆಯಡಿ ಆದಾಯೋತ್ಪನ್ನಕರ ಚಟುವಟಿಕೆಯನ್ನು ಕೈಗೊಳ್ಳಲು ₹30,000 ಸಹಾಯಧನ ನೀಡಲಾಗುತ್ತಿದೆ” ಎಂದು ಉತ್ತರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ರಾಜ್ಯ ಮಹಿಳಾ ಒಕ್ಕೂಟದಿಂದ ಅನಿರ್ದಿಷ್ಟಾವಧಿ ಧರಣಿ; ಅಹವಾಲು ಆಲಿಸಿದ ಅಧಿಕಾರಿಗಳು

ಈ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು, “ಕೇವಲ ಆಶ್ವಾಸನೆಗಳ ಪತ್ರಗಳನ್ನು ನೀಡಿದರೆ ಸಾಲದು. ನಮ್ಮ ಬೇಡಿಕೆಗಳು ಸೂಕ್ತ ಕಾರ್ಯ ರೂಪಕ್ಕೆ ಬರಬೇಕು ಅಲ್ಲಿಯವರೆಗೆ ಧರಣಿ ನಿರಂತರವಾಗಿ ಮುಂದುವರೆಯುತ್ತದೆ” ಎಂದು ಪ್ರತಿಭಟನಾಕಾರರು ಪಟ್ಟುಹಿಡಿದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X