ದಕ್ಷಿಣ ಕನ್ನಡ | ಗ್ರಾಮ ಪಂಚಾಯತಿ ಮುಖ್ಯ ಪುಸ್ತಕ ಬರಹಗಾರರ ಪ್ರತಿಭಟನೆ

Date:

Advertisements

ಗ್ರಾಮ ಪಂಚಾಯತಿ ಮಟ್ಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲಾ ಗ್ರಾಮ ಪಂಚಾಯತಿ ಮಟ್ಟದ ಮುಖ್ಯ ಪುಸ್ತಕ ಬರಹಗಾರರ ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮಹಾ ಒಕ್ಕೂಟವು ಪ್ರತಿಭಟನೆ ನಡೆಸಿದೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸುನಿಲ್ ಕುಮಾರ್ ಬಜಾಲ್, “ಸರ್ಕಾರದ ಎಲ್ಲ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ಹಾಗೂ ಸರ್ಕಾರದ ಪರವಾಗಿ ಬಹಳ ನಿಷ್ಠೆಯಿಂದ ದುಡಿಯುವ ಗ್ರಾಮ ಪಂಚಾಯತಿ ಮಟ್ಟದ ಮುಖ್ಯ ಪುಸ್ತಕ ಬರಹಗಾರರ ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಕಳೆದ 5 ವರ್ಷಗಳಿಂದ ಪ್ರಾಮಾಣಿಕವಾಗಿ ದುಡಿಯುತ್ತಿದ್ದಾರೆ. ಆದರೂ, ಸರ್ಕಾರ ಅವರ ಬಗ್ಗೆ ಎಳ್ಳಷ್ಟೂ ಕಾಳಜಿ ವಹಿಸುತ್ತಿಲ್ಲ. ಗೌರವಧನದ ಹೆಸರಿನಲ್ಲಿ 5000, 2500 ರೂ. ನೀಡಿ ದುಡಿಯುವ ಜನತೆಗೆ ಅಗೌರವ ತೋರಿಸುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

Advertisements

“ವಿವಿಧ ರೀತಿಯ ಗ್ಯಾರಂಟಿಗಳನ್ನು ನೀಡುವ ರಾಜ್ಯ ಸರ್ಕಾರ, ದುಡಿಯುವ ಜನತೆಗೆ ಬದುಕುವ ಗ್ಯಾರಂಟಿಯನ್ನು ನೀಡದಿರುವುದು ವಿಪರ್ಯಾಸ. ಎಲ್ಲ ನಮೂನೆಯ ಕೆಲಸಗಳನ್ನು ಮಾಡಿಸುವ ಈ ಸರ್ಕಾರಗಳು ಯಾಕೆ ಇಂತಹ ನೌಕರರನ್ನು ಖಾಯಂಗೊಳಿಸುತ್ತಿಲ್ಲ. ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿಲ್ಲ. ಇವರ ಬೇಡಿಕೆಗಳನ್ನು ಈಡೇರಿಸಲು ಸರಕಾರ ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ರಸ್ತೆ ತಡೆ,ಜಿಲ್ಲಾ ಉಸ್ತುವಾರಿ ಸಚಿವರಿಗೆ ಘೆರಾವ್,ಮುತ್ತಿಗೆ ಚಳವಳಿಯಂತಹ ತೀವ್ರ ಹೋರಾಟಗಳನ್ನು ನಡೆಸಬೇಕಾದಿತು” ಎಂದು ಎಚ್ಚರಿಕೆ ನೀಡಿದರು.

ಒಕ್ಕೂಟದ ಜಿಲ್ಲಾಧ್ಯಕ್ಷೆ ಸೌಮ್ಯ ಯಶವಂತ ಮಾತನಾಡಿ, “ಸರ್ಕಾರದ ಎಲ್ಲ ಕೆಲಸಗಳನ್ನು ಮಾಡಿಸುವ ಸರ್ಕಾರ ನಮ್ಮ ಹುದ್ದೆಗಳನ್ನು ಖಾಯಂಗೊಳಿಸಬೇಕು. ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು. ಮುಖ್ಯ ಪುಸ್ತಕ ಬರಹಗಾರರಿಗೆ ಮಾಸಿಕ ರೂ.20,000 ಹಾಗೂ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ ಮಾಸಿಕ ರೂ.15,000 ವೇತನ ನೀಡಬೇಕು.ಅದರ ಜೊತೆಗೆ ESI, PF, ಸಮವಸ್ತ್ರ, ಗುರುತುಚೀಟಿಗಳನ್ನು ನೀಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟು ರಾಜ್ಯಾದ್ಯಂತ ನಡೆಸುವ ಈ ಹೋರಾಟಕ್ಕೆ ರಾಜ್ಯ ಸರಕಾರದ ಕೂಡಲೇ ಸ್ಪಂದಿಸುವಂತಾಗಬೇಕು” ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಸಂಧ್ಯಾ ಪುತ್ತೂರು, ಗೀತಾ ಸುಳ್ಯ, ಶೋಭಾ, ಇಂದಿರಾ, ಜಯಂತಿ, ಗೀತಾಂಜಲಿ ಮೂಡಬಿದ್ರೆ, ನಳಿನಾಕ್ಷಿ ಮುನ್ನೂರು ಮುಂತಾದವರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X