ನಾರಾಯಣಮೂರ್ತಿಯನ್ನು ಹೀಯಾಳಿಸುವುದು ಮೂರ್ಖತನ: ಯತ್ನಾಳ್‌ ಕಿಡಿ

Date:

Advertisements
  • ‘ರಾಜಕೀಯ ಅಜೆಂಡಾವನ್ನು ವಿಸ್ತರಿಸಲು ತೆಗಳುವುದು ಸರಿಯಲ್ಲ’
  • ‘ಇನ್ಫೋಸಿಸ್ ಕೋಟ್ಯಂತರ ರೂಪಾಯಿ ತೆರಿಗೆ ಪಾವತಿ ಮಾಡುತ್ತದೆ’

ಜನರಿಗೆ ಉಚಿತಗಳನ್ನು ಸುಮ್ಮನೆ ಕೊಟ್ಟರೆ ಸಮಾಜಕ್ಕೆ ಮಾರಕ ಎಂದು ಹೇಳಿಕೆ ನೀಡಿ ಪರೋಕ್ಷವಾಗಿ ‘ಗ್ಯಾರಂಟಿ’ ಯೋಜನೆಗಳನ್ನು ಟೀಕಿಸಿದ್ದ ಇನ್ಫೋಸಿಸ್​​ ಮುಖ್ಯಸ್ಥ ನಾರಾಯಣಮೂರ್ತಿ ಮಾತಿಗೆ ಪರ-ವಿರೋಧದ ಚರ್ಚೆ ನಡೆಯುತ್ತಿದೆ.

ಕಾಂಗ್ರೆಸ್‌ನ ಕೆಲವು ಸಚಿವರಿಂದ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ನಾರಾಯಣಮೂರ್ತಿ ಮಾತುಗಳನ್ನು ಕಟುವಾಗಿ ಟೀಕಿಸಲಾಗುತ್ತಿದೆ. ಈ ನಡುವೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನಾರಾಯಣಮೂರ್ತಿ ಪರ ನಿಂತು ಹೇಳಿಕೆ ನೀಡಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಯತ್ನಾಳ, “ಸೈದ್ಧಾಂತಿಕ, ವೈಚಾರಿಕ ಭಿನ್ನಾಭಿಪ್ರಾಯಗಳನ್ನು ಬಿಟ್ಟು ದೇಶವನ್ನು ಕಟ್ಟುವಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತಿರುವ ನಾರಾಯಣಮೂರ್ತಿಗಳನ್ನು ನಿಮ್ಮ ರಾಜಕೀಯ ಅಜೆಂಡಾವನ್ನು ವಿಸ್ತರಿಸಲು ತೆಗಳುವುದು, ಹೀಯಾಳಿಸುವುದು ಮೂರ್ಖತನ” ಎಂದು ಟೀಕಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಆತಂಕವಿದೆಯೇ?

“ಇನ್ಫೋಸಿಸ್ ದೇಶಕ್ಕೆ ಕೋಟ್ಯಂತರ ರೂಪಾಯಿ ತೆರಿಗೆ ಪಾವತಿ ಮಾಡುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯ ಕೇವಲ ರಾಜಕಾರಣಿಗಳಿಗೆ ಸೀಮಿತವಲ್ಲ, ಅದು ಎಲ್ಲರಿಗೂ ಇರುವ ಹಕ್ಕು” ಎಂದು ಹೇಳಿದ್ದಾರೆ.

“ನಾರಾಯಣಮೂರ್ತಿಗಳು ದೇಶದ ಹಾಗೂ ಕರ್ನಾಟಕದ ಹೆಮ್ಮೆ. ಸಾವಿರಾರು ಉದ್ಯೋಗಗಳನ್ನು ಸೃಷ್ಟಿಸಿದ ದಿಗ್ಗಜರು. ಐಟಿ ಕ್ಷೇತ್ರದಲ್ಲಿ ಆತ್ಮನಿರ್ಭರತೆಯನ್ನು ಸಾಧಿಸಲು 80 ರ ದಶಕದಲ್ಲೇ ಯಾವುದೇ ಸರ್ಕಾರದ ಯೋಜನೆಯ ಸಹಾಯ ಪಡೆಯದೇ, ಸ್ವತಂತ್ರವಾಗಿ ಇನ್ಫೋಸಿಸ್ ಎಂಬ ದೈತ್ಯ ಸಂಸ್ಥೆಯನ್ನು ಪ್ರಾರಂಭಿಸಿದ ಅದ್ಭುತ ಸಾಹಸಿ” ಎಂದು ಬಣ್ಣಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X