ವಿಜಯಪುರ | ಅಂಚೆ ಜನ ಸಂಪರ್ಕ ಅಭಿಯಾನ

Date:

Advertisements

ಅಂಚೆ ಇಲಾಖೆ ಜನರ ಜೀವನಾಡಿಯಾಗಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಂದೇಶವನ್ನು ರವಾನಿಸುವ ಕೊಂಡಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಇಂದು ಕೇಂದ್ರ ಸರ್ಕಾರ ಅಂಚೆ ಕಚೇರಿಯ ಮೂಲಕ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಜನರಿಗೆ ತಲುಪಿಸುವಂತಹ ಕಾರ್ಯ ನಡೆಸುತ್ತಿದೆ. ಸಾರ್ವಜನಿಕರು ಇದರ ಲಾಭವನ್ನು ಪಡೆಯಬೇಕು ಎಂದು ವಿಜಯಪುರದ ಅಂಚೆ ಅಧಿಕಾರಿ ಜಿ ಬಿ ನಾಯಕ್ ಹೇಳಿದರು.

ವಿಜಯಪುರ ಪಟ್ಟಣದ ಅಳ್ಳಳ್ಳಿ ಮಠದಲ್ಲಿ ಶುಕ್ರವಾರ ಅಂಚೆ ಇಲಾಖೆ ವಿಜಯಪುರ ವಿಭಾಗ ಹಾಗೂ ಸಿಂದಗಿ ಉಪವಿಭಾಗದ ಸಹಯೋಗದಲ್ಲಿ ಏರ್ಪಡಿಸಿದ್ದ ಅಂಚೆ ಜನ ಸಂಪರ್ಕ ಅಭಿಯಾನ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು.

“ಕೇಂದ್ರ ಸರ್ಕಾರ ಉತ್ತಮ ಯೋಜನೆಗಳನ್ನು ಹಮ್ಮಿಕೊಂಡಿದ್ದು, ಪಂಚ ಸೇವೆಯನ್ನು ಮನೆಯ ಬಾಗಿಲಿಗೆ ಕೊಂಡೊಯ್ಯುವುದರ ಜೊತೆಗೆ ಉಳಿತಾಯ ಖಾತೆ ತೆರೆಯುವಿಕೆ, ಐಪಿಬಿಪಿ ಖಾತೆ ತೆರೆಯುವಿಕೆ, ಆಧಾರ್ ನೋಂದಣಿ ತಿದ್ದುಪಡಿ, ಜೋಡಣೆ, ಮೈ ಸ್ಟಾಂಪ್ ಮೈಲ್ಸ್, ಅಂಚೆ ಜೀವನ ವಿಮೆ ಹಾಗೂ ಹೆಣ್ಣು ಮಕ್ಕಳಿಗಾಗಿ ಸುಕನ್ಯಾ ಸಮೃದ್ಧಿ ಯೋಜನೆಗಳಂತಹ ಅನೇಕ ಯೋಜನೆಗಳನ್ನು ಜಾರಿಗೆ ತಂದಿರುವ ಕಾರಣ ಸಾರ್ವಜನಿಕರು ಅಂಚೆ ಇಲಾಖೆಯೊಂದಿಗೆ ಕೈಜೋಡಿಸಿ ಭವಿಷ್ಯದ ಜೀವನಕ್ಕೆ ಬಲ ತುಂಬಿಕೊಳ್ಳಬೇಕು” ಎಂದರು.

Advertisements

ಎ ಕೆ ನಂದಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಎನ್‌ ಎಸ್ ದೇವರುಮನಿ ಮಾತನಾಡಿ, “ರಾಷ್ಟ್ರದಲ್ಲಿ ಅಂಚೆ ಇಲಾಖೆ ಈ ಮೊದಲು ಸಂಪರ್ಕ ಸಾಧನೆಗೆ ಮಾತ್ರ ಸೀಮಿತವಾಗಿತ್ತು. ಇದೀಗ ನೂರಕ್ಕೂ ಹೆಚ್ಚು ಸೇವೆಗಳನ್ನು ಒದಗಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿ ಕೊಡುತ್ತಿರುವುದು ಬಹಳ ಹೆಮ್ಮೆಯ ವಿಷಯ, ಸಾರ್ವಜನಿಕರು ಅಂಚೆ ಇಲಾಖೆಯ ಲಾಭ ಪಡೆದುಕೊಳ್ಳಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರಿಂಗ್‌ ರೋಡ್‌ಗಾಗಿ ಮನೆಗಳ ತೆರವು ಕಾರ್ಯಾಚರಣೆ; ನಿಷೇಧಾಜ್ಞೆ ಜಾರಿ

ಅಳ್ಳಳ್ಳಿ ಮಠದ ಶ್ರೀಶೈಲಯ್ಯ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಪಟ್ಟಣ ಪಂಚಾಯಿತಿ ಸದಸ್ಯ ಭಾಗ್ಯವಂತ ಆಲ್ಮೇಲ್ಕರ್, ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕ ಘಟಕದ ಅಧ್ಯಕ್ಷ ಸೈಯದ್ ದೇವರಮನಿ, ಸಿಂದಗಿ ಅಂಚೆ ಉಪವಿಭಾಗದ ನಿರೀಕ್ಷಕ ಮಹಾಂತೇಶ ಕುಕರ್ಣಿ, ಆಲಮೆಲ ಸಾಕಾ ಅಂಚೆ ಪಾಲಕ ವಿಐ ಪಾಟೀಲ್, ಮೇಲ್ವಿಚಾರಕ ಮನೋಹರ್ ಪೊಳ್ಳೆ, ಅಂಗನವಾಡಿ ಶಿಕ್ಷಕಿ ಲಕ್ಷ್ಮಿ ಸೇರಿದಂತೆ ಇತರ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X