ಶಿವಮೊಗ್ಗ | ನ್ಯಾ. ಎ ಜೆ ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹ

Date:

Advertisements

ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗದ ವರದಿಯನ್ನು ಬಿಡುಗಡೆ ಮಾಡಿ, ಕೇಂದ್ರ ಸರ್ಕಾರದ ಅನುಮೋದನೆ ಪಡೆದು ಜಾರಿಗೊಳಿಸುವುದು ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಶಿವಮೊಗ್ಗ ಜಿಲ್ಲಾ ಹೊಲೆಯ-ಮಾದಿಗ ಜಾತಿಗಳ ಹಿತರಕ್ಷಣಾ ಸಮಿತಿ ಒತ್ತಾಯಿಸಿದೆ.

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಒತ್ತಾಯಿಸಿದರು.

“ಪರಿಶಿಷ್ಟ ಜಾತಿ ಅನ್ಯ ಸಮುದಾಯದವರಿಗೆ ಕೈಗಾರಿಕೋದ್ಯಮಕ್ಕೆ ಹೆಚ್ಚು ಪ್ರೋತ್ಸಾಹ ನೀಡಿ ಸಾಲ
ಸೌಲಭ್ಯದಲ್ಲಿ ಶೇ. 80ರಷ್ಟು ಸಹಾಯಧನ ನೀಡಬೇಕು. ಸ್ಥಾಪನೆಗೆ ಇರುವ ಕಠಿಣ ನಿರ್ಬಂಧ ಕೈಬಿಡಬೇಕು. ಪರಿಶಿಷ್ಟ ಜಾತಿ ಉಪಯೋಜನೆ ಅನುದಾನ ಪ್ರಸ್ತುತ ಸಾಲಿನಲ್ಲಿ ಖರ್ಚಾಗದೆ ಉಳಿದರೆ ಮುಂದಿನ ಸಾಲಿನ ಆಯ-ವ್ಯಯದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಗೆ ಸೇರಿಸಲು ಕಾಯ್ದೆ ರೂಪಿಸಬೇಕು” ಎಂದು ಆಗ್ರಹಿಸಿದರು.

Advertisements

“ಪರಿಶಿಷ್ಟ ಜಾತಿ, ಅಸ್ಪೃಶ್ಯ ಜಾತಿಗಳಿಗೆ ಸೇರಿದ ಸಮುದಾಯಗಳು, ಮಲ ಹೊರುವುದು, ಶೌಚಾಲಯ ಶುಚಿಗೊಳಿಸುವುದು, ಸತ್ತ ಜಾನುವಾರುಗಳನ್ನು ಊರ ಹೊರಗೆ ಸಾಗಿಸುವುದು, ಚಪ್ಪಲಿ ಹೊಲಿಯುವುದು ಮುಂತಾದ ಹೀನ ಕಸುಬುಗಳನ್ನು ಮಾಡಿಕೊಂಡು ಬಂದಿರುವ ನೈಜ ಅಸ್ಪೃಶ್ಯ ಜಾತಿಗಳಾಗಿವೆ” ಎಂದರು.

“ಹೊಲಯ, ಛಲವಾದಿ, ಮಾದಿಗ, ಸಮಗಾರ, ಮಚ್ಚಿಗಾರ, ದೋಹರ, ದಕ್ಕಲ ಮುಂತಾದ ಜನಾಂಗಗಳಿಗೆ ಸಂವಿಧಾನಾತ್ಮಕವಾಗಿ ಸಿಗಬೇಕಾದ ರಾಜಕೀಯ, ಶಿಕ್ಷಣ, ಉದ್ಯೋಗ ಮುಂತಾದ ಸೌಲಭ್ಯಗಳನ್ನು ಇತ್ತೀಚಿನ ದಿನಗಳಲ್ಲಿ ಇದರ ಪಾಲನ್ನು ಪರಿಶಿಷ್ಟರಲ್ಲೇ ಸ್ಪೃಶ್ಯರಾಗಿರುವ ಸಮುದಾಯಗಳು ಕಸಿಯತೊಡಗಿವೆ. ಇದರಿಂದ ನಮ್ಮ ಜೀವನ ಹಾಳಾಗುತ್ತಿದೆ. ಹಾಗಾಗಿ ಒಳಮೀಸಲಾತಿಗೆ ಎ ಜೆ ಸದಾಶಿವ ವರದಿ ಜಾರಿ ಮಾಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ತುಂಗಾ ನದಿ ಮಲಿನಗೊಳ್ಳುತ್ತಿದ್ದರೂ ಪಾಲಿಕೆ ನಿರ್ಲಕ್ಷ್ಯ; ಎಎಪಿ ಆರೋಪ

ಈ ಸಂದರ್ಭದಲ್ಲಿ ಅಧ್ಯಕ್ಷ ಸಾವಕ್ಕನವರ್, ಉಪಾಧ್ಯಕ್ಷ ಚಂದ್ರಪ್ಪ ಎಚ್ ಎ, ಪ್ರಧಾನ ಕಾರ್ಯದರ್ಶಿ ಭಾನುಪ್ರಸಾದ್ ಬಿ ಎ, ಕಾರ್ಯದರ್ಶಿ ನಾಗಪ್ಪ ಎಂ ಕೆ, ಸಂಘಟನಾ ಕಾರ್ಯದರ್ಶಿ ಶಿವಕುಮಾರ್ ಮತ್ತು ಕೆ ಎನ್ ಅಶೋಕ್ ಕುಮಾರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X