ಜಲ ಜೀವನ್ ಮಿಷನ್ ಯೋಜನೆ | ಅಕ್ರಮದಲ್ಲಿ ನಾನೂ ಕೂಡ ಭಾಗಿ ಎಂದ ಬಿಜೆಪಿ ಸಂಸದ ಸಂಗಣ್ಣ ಕರಡಿ

Date:

Advertisements
  • ಕಾಮಗಾರಿಯಲ್ಲಿ ಅನೇಕ ಜನಪ್ರತಿನಿಧಿಗಳು ಭ್ರಷ್ಟಾಚಾರದಲ್ಲಿ ಭಾಗಿ
  • ಯೋಜನೆಗೆ ಮತ್ತೆ 123 ಕೋಟಿ ರೂ. ಪುನಃ ಅನುದಾನ ಕೇಳಲಾಗಿದೆ

ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿಯಲ್ಲಿ ಹಣದ ಲೂಟಿಯೇ ನಡೆಯುತ್ತಿದೆ. ಕಾಮಗಾರಿಯಲ್ಲಿ ನಾನೂ ಸೇರಿ ಅನೇಕ ಜನಪ್ರತಿನಿಧಿಗಳು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಸಂಸದ ಸಂಗಣ್ಣ ಕರಡಿ ಅವರು ತಮ್ಮ ಭ್ರಷ್ಟಾಚಾರವನ್ನು ಬಹಿರಂಗವಾಗಿ ಒಪ್ಪಿಕೊಂಡು ಹೇಳಿಕೆ ನೀಡಿದ್ದಾರೆ.

ಯಾವೊಬ್ಬ ರಾಜಕಾರಣಿಯೂ ತಾನು ಎಷ್ಟೇ ಹಣ ಲೂಟಿ ಹೊಡೆದರೂ, ಎಲ್ಲಿಯೂ ಈ ಬಗ್ಗೆ ಹೇಳಿಕೊಳ್ಳುವುದಿಲ್ಲ. ನಿಷ್ಠಾವಂತ, ಪ್ರಾಮಾಣಿಕ, ಜನರಿಗಾಗಿ ದುಡಿಯುವ ರಾಜಕಾರಣಿಗಳನ್ನು ಇತ್ತೀಚಿನ ದಿನಗಳಲ್ಲಿ ನೋಡುವುದೇ ಅಪರೂಪ. ಆದರೂ ತಾವೊಬ್ಬ ಪ್ರಾಮಾಣಿಕ ರಾಜಕಾರಣಿ ಎಂಬಂತೆ ಮುಖವಾಡ ಪ್ರದರ್ಶಿಸುವ ರಾಜಕಾರಣಿಗಳ ನಡುವೆ ನಾನೊಬ್ಬ ಭ್ರಷ್ಟ ಎಂಬುದನ್ನು ಸಂಗಣ್ಣ ಕರಡಿ ಒಪ್ಪಿಕೊಂಡಿದ್ದಾರೆ.

ಕಾರಟಗಿ ಪಟ್ಟಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿಯಲ್ಲಿ ನಡೆದ ಭ್ರಷ್ಟಾಚಾರದಲ್ಲಿ ನಾನು ಭಾಗಿಯಾಗಿದ್ದೇನೆ” ಎಂದಿದ್ದಾರೆ.‌

Advertisements

“ಜೆಜೆಎಂ ಕಾಮಗಾರಿಯಲ್ಲಿ ಹಣವನ್ನು ಲೂಟಿ ಹೊಡೆಯಲಾಗುತ್ತಿದೆ. ಜೆಜೆಎಂ ಯೋಜನೆಯ ಕಾಮಗಾರಿಯಲ್ಲಿ ರಿವೈಸ್ ಎಸ್ಟಿಮೇಟ್​​​​ನಿಂದ ಹೊಸ ಡಿಪಿಆರ್ ಮಾಡಿಸುವವರೆಗೂ ಹಣ ಲೂಟಿ ಮಾಡಲಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ 123 ಕೋಟಿ ರೂ. ಯೋಜನೆಗೆ ಮತ್ತೆ 6 ತಿಂಗಳಲ್ಲಿ 123 ಕೋಟಿ ರೂ. ಪುನಃ ಅನುದಾನ ಕೇಳಲಾಗಿದೆ. ಅಕ್ರಮದಲ್ಲಿ ಸಂಸದರಿಂದ ಹಿಡಿದು ಎಲ್ಲರೂ ಹಣ ದೋಚಿದ್ದಾರೆ. ಇದರಲ್ಲಿ ನಾನೂ ಕೂಡ ಭಾಗಿಯಾಗಿದ್ದೇನೆ” ಎಂದರು.

“ನಾವೇನೂ ಹರಿಶ್ಚಂದ್ರನಲ್ಲ, ನ್ಯಾಯ ಅನ್ಯಾಯವನ್ನು ನೋಡಬೇಕು. ಅನ್ಯಾಯದಿಂದ ಹಣ ಗಳಿಸಿದವರು ನೆಮ್ಮದಿಯಿಂದ ನಿದ್ದೆ ಮಾಡಲ್ಲ. ದುಡಿದು ತಿನ್ನೋರು ನೆಮ್ಮದಿಯಿಂದ ನಿದ್ದೆ ಮಾಡುತ್ತಾರೆ. ನಾನು ಮಾಡಿದ ತಪ್ಪಿನ ಅರಿವು ನನಗಿದೆ” ಎಂದು ಹೇಳಿಕೊಂಡಿದ್ದಾರೆ.

 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X