ಪ್ರಧಾನಿ ಮೋದಿ ಫೋಟೋ ಇರುವ ‘ಸೆಲ್ಫಿ ಪಾಯಿಂಟ್’ ಸ್ಥಾಪನೆಗೆ ವಿವಿ, ಕಾಲೇಜುಗಳಿಗೆ ಸೂಚಿಸಿದ ಯುಜಿಸಿ: ವ್ಯಾಪಕ ಟೀಕೆ

Date:

Advertisements

ವಿಶ್ವವಿದ್ಯಾಲಯ ಧನಸಹಾಯ ಆಯೋಗ(ಯುಜಿಸಿ)ವು ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ಹಿನ್ನೆಲೆಯಲ್ಲಿ ಕಾಣುವಂತೆ ‘ಸೆಲ್ಫಿ ಪಾಯಿಂಟ್’ ರಚಿಸಲು ದೇಶದಲ್ಲಿಯ ಎಲ್ಲ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಿಗೆ ಸೂಚನೆ ನೀಡಿದ್ದು, ವ್ಯಾಪಕ ಟೀಕೆಗೆ ಕಾರಣವಾಗಿದೆ.

ನರೇಂದ್ರ ಮೋದಿಯವರ ಚಿತ್ರಗಳ ಹಿನ್ನೆಲೆಯಲ್ಲಿ ‘ಸೆಲ್ಫಿ ಪಾಯಿಂಟ್’ ಅಥವಾ ತಾಣಗಳನ್ನು ಸ್ಥಾಪಿಸುವಂತೆ ದೇಶದಲ್ಲಿಯ ಎಲ್ಲ ವಿವಿ ಮತ್ತು ಕಾಲೇಜುಗಳಿಗೆ ಸೂಚನೆ ನೀಡಿರುವುದಾಗಿ telegraphindia.com ವರದಿ ಮಾಡಿತ್ತು. ಈ ವರದಿಯು ದೇಶದಲ್ಲಿ ಸಂಚಲನ ಸೃಷ್ಟಿಸಿದ್ದು, ಯುಜಿಸಿಯ ಆದೇಶಕ್ಕೆ ವಿಪಕ್ಷಗಳಿ ಟೀಕಾ ಪ್ರಹಾರ ನಡೆಸಿದೆ.

ಟೆಲಿಗ್ರಾಫ್‌ನ ವರದಿಯನ್ನು ಹಂಚಿಕೊಂಡು ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್, ಸೆಲ್ಫಿ ಗೀಳಿನ ಪ್ರಧಾನಿ ಅವರು ಲೋಕಸಭೆ ಚುನಾವಣೆಯ ಸಮಯದಲ್ಲಿ ಎಷ್ಟು ಅಸುರಕ್ಷಿತರಾಗಿದ್ದಾರೆಂದರೆ ಅವರು ತಮ್ಮ ಅಬ್ಬರದ ಇಮೇಜ್ ಅನ್ನು ಉಳಿಸಲು ಯಾವ ಕಲ್ಲನ್ನು ಕೂಡ ಬಿಡುತ್ತಿಲ್ಲ ಎಂಬುದಕ್ಕೆ ಇದೇ ಸಾಕ್ಷಿ’ ಎಂದು ತಿಳಿಸಿದ್ದಾರೆ.

Advertisements

‘ಮೊದಲು ‘ಸೆಲ್ಫಿ ಪಾಯಿಂಟ್‌’ಗಳನ್ನು ಸ್ಥಾಪಿಸುವಂತೆ ಸೇನೆಗೆ ತಿಳಿಲಾಯಿತು. ನಂತರ, ಅವರು ಐಎಎಸ್ ಅಧಿಕಾರಿಗಳು ಮತ್ತು ಇತರ ಹಿರಿಯ ಸರ್ಕಾರಿ ಅಧಿಕಾರಿಗಳನ್ನು ‘ರಥಯಾತ್ರೆ’ ಕೈಗೊಳ್ಳುವಂತೆ ಹೇಳಿದರು. ಇದೀಗ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ‘ಸೆಲ್ಫಿ ಪಾಯಿಂಟ್‌’ ಸ್ಥಾಪಿಸುವಂತೆ ಯುಜಿಸಿಗೆ ಸೂಚಿಸಿದ್ದಾರೆ. ಚಂದ್ರಯಾನ-3ರ ಲ್ಯಾಂಡಿಂಗ್ ವೇಳೆ ನೇರಪ್ರಸಾರ ಸ್ಕ್ರೀನ್‌ನಲ್ಲಿ ಕಾಣಿಸಿಕೊಳ್ಳುವ ಮೂಲಕ ಲ್ಯಾಂಡಿಂಗ್ ಅನ್ನೇ ಹೈಜಾಕ್ ಮಾಡಿದರು. ಅದಕ್ಕೂ ಮೊದಲು ಕೋವಿಡ್ ಲಸಿಕೆ ಪ್ರಮಾಣಪತ್ರಗಳಿಗೆ ತಮ್ಮ ಫೋಟೋವನ್ನು ಅಂಟಿಸಿದರು. ಇವೆಲ್ಲವನ್ನು ನೋಡುವಾಗ ಮನುಷ್ಯನ ಪ್ರಚಂಡ ಅಭದ್ರತೆ ಮತ್ತು ಸಿಕೋಫಾನ್ಸಿ ಎಂಬ ಅನಾರೋಗ್ಯದ ಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಕಳೆದ 10 ವರ್ಷಗಳಲ್ಲಿ ಉತ್ತರ ಕೊರಿಯಾದ ಸರ್ವಾಧಿಕಾರಿಗಳನ್ನೂ ಮೀರಿಸಿರುವಂತಹ ಈ ನಡೆಯು ಅಸಹ್ಯಕರ ಸ್ವಯಂ ಪ್ರಚಾರ. ಇದರಿಂದಾಗಿ ದೇಶದ ಜನ ಬೇಸತ್ತಿದ್ದಾರೆ. ಶೀಘ್ರವೇ ಸೂಕ್ತ ಉತ್ತರ ನೀಡಲಿದ್ದಾರೆ’ ಎಂದು ಜೈರಾಮ್ ರಮೇಶ್ ಆಕ್ರೋಶ ಹೊರಹಾಕಿದ್ದಾರೆ.

ಇದನ್ನು ಓದಿದ್ದೀರಾ? ಸುರಂಗ ಘಟನೆ | ಕಾರ್ಮಿಕನ ಕುಟುಂಬದ ದುಸ್ಥಿತಿ ಬಗ್ಗೆ ವರದಿ ಮಾಡಿದ ಪತ್ರಕರ್ತರ ವಿರುದ್ಧ ಎಫ್ಐಆರ್!

ಈ ಬಗ್ಗೆ ಪ್ರಮುಖ ಶಿಕ್ಷಣ ಸಂಸ್ಥೆಯೊಂದರ ಅಧ್ಯಾಪಕರೋರ್ವರು ಮಾತನಾಡಿದ್ದು, ‘ಕೇಂದ್ರ ಸರಕಾರವು ಪ್ರತಿಯೊಂದೂ ಸಾಮಾನ್ಯ ಸಾಧನೆಯನ್ನು ಅದ್ಭುತವೆಂದು ಬಿಂಬಿಸುತ್ತಿದೆ ಮತ್ತು ಅದರ ಹೆಗ್ಗಳಿಕೆಯನ್ನು ಪ್ರಧಾನಿಯವರಿಗೆ ಸಲ್ಲಿಸುತ್ತಿದೆ. ಈಗ ನಡೆಯುತ್ತಿರುವುದು ಆರಾಧನಾ ವ್ಯಕ್ತಿತ್ವವನ್ನು ನಿರ್ಮಿಸುವ ಪೂರ್ಣ ಪ್ರಮಾಣದ ಪ್ರಚಾರ. ಇದಕ್ಕಾಗಿ ಸರಕಾರವು ಈ ಚಟುವಟಿಕೆಗಳಿಗೆ ಸಂಬಂಧವೇ ಇಲ್ಲದ ಸಾರ್ವಜನಿಕ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ. ಸರಕಾರ ಅಥವಾ ಯುಜಿಸಿ ಇಂತಹ ಪ್ರಚಾರವನ್ನು ಉತ್ತೇಜಿಸುವಂತೆ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಲು ಕಾನೂನಿನಲ್ಲಿ ಯಾವುದೇ ಅವಕಾಶವಿಲ್ಲ’ ಎಂದು ತಿಳಿಸಿದ್ದಾರೆ.

ಯುಜಿಸಿ ಆದೇಶದಲ್ಲಿ ಏನಿದೆ?
ಯುಜಿಸಿ ತನ್ನ ಪತ್ರದಲ್ಲಿ ಸೆಲ್ಪಿ ತಾಣಗಳನ್ನು ಸೃಷ್ಟಿಸಿ ಸೆಲ್ಫಿಗಳನ್ನು ಕ್ಲಿಕ್ಕಿಸಿಕೊಳ್ಳಲು ಮತ್ತು ಅವುಗಳನ್ನು ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಳ್ಳಲು ವಿದ್ಯಾರ್ಥಿಗಳು ಮತ್ತು ಸಂದರ್ಶಕರನ್ನು ಉತ್ತೇಜಿಸುವಂತೆ ಆಗ್ರಹಿಸಿದೆ.

ಯುಜಿಸಿ ಕಾರ್ಯದರ್ಶಿ ಮನೀಶ್ ಜೋಶಿ ಅವರು ಈ ಕುರಿತು ವಿಶ್ವವಿದ್ಯಾಲಯಗಳ ಉಪಕುಲಪತಿಗಳಿಗೆ ಪತ್ರ ಕಳುಹಿಸಿದ್ದು, ‘ವಿವಿಧ ಕ್ಷೇತ್ರಗಳಲ್ಲಿ ಯುವಕರ ಶಕ್ತಿ ಮತ್ತು ಉತ್ಸಾಹವನ್ನು ಬಳಸಿಕೊಳ್ಳಲು ಒಂದು ಅನನ್ಯ ಅವಕಾಶ’ ಎಂದು ಹೇಳಿದ್ದಾರೆ.

modi selfie point

‘ನಿಮ್ಮ ಸಂಸ್ಥೆಯೊಳಗೆ ಸೆಲ್ಫಿ ಪಾಯಿಂಟ್ ಸ್ಥಾಪಿಸುವ ಮೂಲಕ ನಮ್ಮ ದೇಶವು ಮಾಡಿದ ಅದ್ಭುತ ಪ್ರಗತಿಯನ್ನು ನಾವು ಆಚರಿಸೋಣ ಮತ್ತು ಪ್ರಸಾರ ಮಾಡೋಣ. ವಿವಿಧ ಕ್ಷೇತ್ರಗಳಲ್ಲಿ ಭಾರತದ ಸಾಧನೆಗಳ ಬಗ್ಗೆ ವಿಶೇಷವಾಗಿ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅಡಿಯಲ್ಲಿ ಹೊಸ ಉಪಕ್ರಮಗಳ ಬಗ್ಗೆ ಯುವಜನರಲ್ಲಿ ಜಾಗೃತಿ ಮೂಡಿಸುವುದು ಸೆಲ್ಫಿ ಪಾಯಿಂಟ್‌ನ ಉದ್ದೇಶವಾಗಿದೆ’ ಎಂದು ಪತ್ರದಲ್ಲಿ ಬರೆಯಲಾಗಿದೆ.

ಪ್ರತಿ ಸೆಲ್ಫಿ ಪಾಯಿಂಟ್‌ನ್ನು ಕ್ಯಾಂಪಸ್‌ನ ಆಯಕಟ್ಟಿನ ಸ್ಥಳದಲ್ಲಿ ಸ್ಥಾಪಿಸಬೇಕು ಮತ್ತು 3ಡಿ ಲೇಔಟ್ ಹೊಂದಿರಬೇಕು. ಇದು ಶಿಕ್ಷಣದ ಅಂತಾರಾಷ್ಟ್ರೀಕರಣ, ವೈವಿಧ್ಯತೆಯಲ್ಲಿ ಏಕತೆ, ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್, ಬಹುಭಾಷಾತೆಯಂತಹ ನಿರ್ದಿಷ್ಟ ವಿಷಯಕ್ಕೆ ಅನುಗುಣವಾಗಿ ರೂಪಿಸಿ ಎಂದು ಯುಜಿಸಿಯ ನಿರ್ದೇಶನ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X