ಕೊನೆ ಕ್ಷಣದಲ್ಲಿ ಬೆಂಗಳೂರು ಕೃಷಿ ವಿವಿ ಪರೀಕ್ಷೆ ಮುಂದೂಡಿಕೆ; ಕೃಷಿ ಸಚಿವರ ವಿರುದ್ಧ ಆಕ್ರೋಶ

Date:

Advertisements

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ 50 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಭಾನುವಾರ (ಫೆ.16) ನಡೆಯಬೇಕಿದ್ದ ಪರೀಕ್ಷೆಯನ್ನು ಶನಿವಾರ (ಫೆ.15) ಮುಂದೂಡಿಕೆ ಮಾಡಲಾಗಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಹಠಾತ್ ಪರೀಕ್ಷೆ ಮುಂದೂಡಲಾಗಿದೆ. ಇದರಿಂದ ಪರೀಕ್ಷೆಗಾಗಿ ದೂರದ ಊರುಗಳಿಂದ ಆಗಮಿಸಿದ್ದ ಅಭ್ಯರ್ಥಿಗಳಿಗೆ ತೀವ್ರ ತೊಂದರೆ ಉಂಟಾಗಿದೆ ಎಂದು ರಾಜ್ಯ ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಮತ್ತು ರೈತ ಸಂಘಟನೆಗಳ ಒಕ್ಕೂಟ ಬೆಂಗಳೂರು ಆಕ್ರೋಶ ವ್ಯಕ್ತಪಡಿಸಿದೆ.

ಪರೀಕ್ಷೆಗೆ 950 ಪಿಹೆಚ್‌ಡಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಅವರಲ್ಲಿ ಜಪಾನ್, ಜರ್ಮನಿ, ಚೀನಾ, ಕೊರಿಯಾ, ಯುರೋಪ್ ಮತ್ತು ದೇಶದ ಹಲವೆಡೆಯಿಂದ ಬಂದವರು ಇದ್ದಾರೆ. ಹಲವಾರು ಅಭ್ಯರ್ಥಿಗಳು ತಮ್ಮ ಪೋಷಕರೊಂದಿಗೆ ರೈಲು ಮತ್ತು ವಿಮಾನದ ಮೂಲಕ ಬೆಂಗಳೂರು ತಲುಪಿದ್ದಾರೆ. ಒಂದು ದಿನ ಮೊದಲು ಪರೀಕ್ಷೆ ಮುಂದೂಡುವ ಮೂಲಕ ಈ ಪ್ರತಿಭಾವಂತ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಲಾಗಿದೆ ಎಂದಿದೆ.

Advertisements

ಸರ್ಕಾರದ ನೇಮಕಾತಿ ಮತ್ತು ಮೀಸಲಾತಿ ಆದೇಶಗಳ ಅನುಸಾರ ನ್ಯಾಯ ಸಮ್ಮತವಾಗಿ ನೇಮಕಾತಿಗಳನ್ನು ನಡೆಸಲು ತೀರ್ಮಾನಿಸಿದ್ದು, ಅದಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ತನ್ನ ಸ್ವಪ್ರತಿಷ್ಠೆಗೆ ಮತ್ತು ವಿಶ್ರಾಂತ ಕುಲಪತಿ ರಾಜೇಂದ್ರ ಪ್ರಸಾದ್, ನೂತನ ಮಂಡ್ಯ ಕೃಷಿ ವಿಶ್ವವಿದ್ಯಾಲಯದ ವಿಶೇಷ ಅಧಿಕಾರಿ ಅರುಣಿಕುಮಾರ್ ಅವರ ಕುತಂತ್ರಗಳಿಗೆ ಕಿವಿಗೊಟ್ಟು ತಡೆಯಾಜ್ಞೆ ನೀಡಿರುವುದು ಸಂವಿಧಾನಬಾಹಿರ ಮತ್ತು ನಿರಂಕುಶವಾದ. ಈ ನಿರ್ಧಾರಗಳು ದಲಿತ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಾಮಾಜಿಕ ನ್ಯಾಯ ಮತ್ತು ಉದ್ಯೋಗವಕಾಶಗಳಲ್ಲಿ ತೀವ್ರ ಅನ್ಯಾಯ ಉಂಟು ಮಾಡಿವೆ ಎಂದು ಒಕ್ಕೂಟ ಆರೋಪಿಸಿದೆ.

ಈಗಾಗಲೇ ನಾಳೆ ನಡೆಯಬೇಕಿದ್ದ ಪರೀಕ್ಷೆಗೆ ದೇಶ-ವಿದೇಶಗಳಿಂದ ಆಗಮಿಸಿರುವ ಅಭ್ಯರ್ಥಿಗಳಿಗೆ ಒಂದೇ ವಾರದೊಳಗೆ ಪರೀಕ್ಷೆಯ ದಿನಾಂಕ ನಿಗದಿಪಡಿಸಿ ಪರೀಕ್ಷೆಯನ್ನು ನಡೆಸಬೇಕು. ಇಲ್ಲವಾದಲ್ಲಿ, ರಾಜ್ಯದ ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ರೈತ ಸಂಘಟನೆಗಳ ಒಕ್ಕೂಟದಿಂದ ಸರ್ಕಾರದ ವಿರುದ್ಧ ಹಾಗೂ ಸೂತ್ರದಾರರಾದ ಕೃಷಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಹೋರಾಟ ನಡೆಸಲಾಗುವುದು ಮತ್ತು ಅವರ ರಾಜೀನಾಮೆಗೆ ಆಗ್ರಹಿಸಲಾಗುವುದು ಎಂದು ಒಕ್ಕೂಟ ಎಚ್ಚರಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X