10 ಎಕರೆ ಪ್ರದೇಶದಲ್ಲಿ ನಿರ್ಗತಿಕರಿಗೆ ಆಶ್ರಯ ಕೊಠಡಿಗಳ ನಿರ್ಮಾಣಕ್ಕೆ ಗುದ್ದಲಿ ಪೂಜೆ

Date:

ಕೆಜಿಎಫ್: ನಿರ್ಗತಿಕ,ಅನಾಥರಿಗೆ, ಸೂಕ್ತ ಮೂಲಭೂತ ಸೌಕರ್ಯ ಹಾಗೂ ಮಧ್ಯ ವ್ಯಸನಿಗಳಿಗೆ ಕೌನ್ಸೆಲಿಂಗ್ ಮೂಲಕ ಪರಿಹಾರ ನೀಡುವ ಮೂಲಕ ಅವರ ಜೀವನ ಮಟ್ಟದ ಸುಧಾರಿಸಲು ಆಶ್ರಯ ಕಲ್ಪಿಸಲು ಕೆಬಿಸಿ ಟ್ರಸ್ಟ್ ಸ್ಥಾಪಕ ಜಾವೀದ್ ಮುಂದಾಗಿರುವುದು ಶ್ಲಾಘನೀಯ ಎಂದು ಇಸ್ಲಾಮಿಕ್ ಚಿಂತಕ ಉಮರ್ ಷರೀಫ್ ಹೇಳಿದರು.

- Advertisement -

ಪಟ್ಟಣದ ಹೊರವಲಯದ ಕೃಷ್ಣಾವರಂ ಟೋಲ್ ಪ್ಲಾಜಾ ಬಳಿ ಸುಮಾರು 10 ಎಕರೆ ಪ್ರದೇಶದಲ್ಲಿ ಹಿರಿಯ ನಿರ್ಗತಿಕ ಮತ್ತು ಅನಾಥರಿಗೆ ಆರಂಭಗೊಂಡ ನೂತನ ಕೊಠಡಿ ಕಾಮಗಾರಿಗೆ ಗುದ್ದಲಿ ಪೂಜೆ ಸಲ್ಲಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಅನೇಕ ಶ್ರೀಮಂತರ ಬಳಿ ಸಾವಿರಾರು ಕೋಟಿ ಹಣ ಇರುತ್ತದೆ ಆದರೆ ಯಾರಿಗೂ ಬಡವರ ಸೇವೆ ಮಾಡಬೇಕೆಂದು ಮುಂದೆ ಬರುವುದಿಲ್ಲ ಆದರೆ ಇಸ್ರೋ ಜಾವಿದ್ ಮುಂದಾಗಿರುವುದು ಪ್ರಶಂಸನೀಯ ಎಂದು ಅಭಿನಂದಿಸಿದರು.

ಇತ್ತೀಚಿನ ದಿನಗಳಲ್ಲಿ ಒಡ ಹುಟ್ಟಿದ ಮಕ್ಕಳೇ ತಂದೆ ತಾಯಿ ಅವರನ್ನು ಸಾಕಲು ಮೀನಾ ಮೇಷ ಎನಿಸುತ್ತಿದ್ದಾರೆ.

ಆದರೆ ಇಂತಹ ಬಡ ಮತ್ತು ನಿರ್ಗತಿಕರಿಗಾಗಿ ಕೋಟ್ಯಾಂತರ ಜಮೀನನ್ನು ಖರೀದಿಸಿ ಸುಸಜ್ಜಿತ ಕೊಠಡಿಗಳನ್ನು ನಿರ್ಮಿಸಿ ನುರಿತ ರಿಂದ ಅವರಿಗೆ ಕೌನ್ಸಿಲಿಂಗ್ ಹಾಗೂ ಶಿಕ್ಷಣವನ್ನು ಸಹ ಒದಗಿಸಿ ಆಶ್ರಯ ನೀಡಲು ಮುಂದಾಗಿರುವುದು ಶ್ಲಾಘನೀಯ ಎಂದರು.

ಕೆಲವರು ಪೋಷಕರನ್ನು ಪೋಷಣೆ ಮಾಡಲು ಅನೇಕ ರೀತಿಯಲ್ಲಿ ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ ಹಾಗೂ ಇತ್ತೀಚಿಗೆ ಯುವ ಸಮುದಾಯ ಮಧ್ಯ ಹಾಗೂ ತಂಬಾಕು ಸೇವನೆಯ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಜೀವನವನ್ನೇ ಕಳೆದುಕೊಂಡಿರುತ್ತಾರೆ.

ಇಂತಹ ವ್ಯಕ್ತಿಗಳಿಗೆ ಕೆಬಿಸಿ ಟ್ರಸ್ಟ್ ಮೊದಲ ಬಾರಿಗೆ ಕೌನ್ಸಿಲಿಂಗ್ ಮೂಲಕ ತಮ್ಮ ಜೀವನವನ್ನು ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ನಂತರ ಅವರ ಜೀವನ ಸುಧಾರಿಸದೆ ಇದ್ದಲ್ಲಿ ಇದಕ್ಕಾಗಿ ಮೀಸಲಿಟ್ಟಿರುವ ಹತ್ತು ಎಕರೆ ಪ್ರದೇಶದಲ್ಲಿ ಸುಸಜ್ಜಿತ ಕೊಠಡಿ ಗಳನ್ನು ನಿರ್ಮಿಸಿ ಅವರ ಆರೋಗ್ಯ ಊಟ ವಸತಿ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಉತ್ತಮ ಜೀವನವನ್ನು ಕಲ್ಪಿಸಿಕೊಡಲು ಕೆಬಿಸಿ ಟ್ರಸ್ಟ್ ಮುಂದಾಗಿದೆ ಎಂದು ಅವರ ಸೇವಾ ಕಾರ್ಯವನ್ನು ಸಲ್ಲಿಸಿದರು.

ಕೆಬಿಸಿ ಟ್ರಸ್ಟ್ ಸ್ಥಾಪಕ ಜಾವಿದ್ ಮಾತನಾಡಿ, ತಾವು ಇಸ್ರೋ ಕಂಪನಿಯಲ್ಲಿ ಕೆಲಸ ಮಾಡಿ ಇದೀಗ ನಿವೃತ್ತರಾಗಿ ಏಳು ವರ್ಷಗಳಾಗಿದ್ದು ತಮ್ಮ ಬಾಲ್ಯದಿಂದ ಸಂಪಾದನೆ ಮಾಡಿದ ಹಣದಲ್ಲಿ ನಿರ್ಗತಿಕ ಬಡವ ಅನಾಥರಿಗೆ ಸೇವೆ ಮಾಡಬೇಕು ಎಂಬ ದೃಷ್ಟಿಯಿಂದ ತಮ್ಮ ಸ್ವಂತ ಹಣ ಹಾಗೂ ದಾನಿಗಳ ಸಹಕಾರದಿಂದ ಕೆಬಿಸಿ ಟ್ರಸ್ಟ್ ಆರಂಭಿಸಿದ್ದು ಸುಮಾರು 3 ಕೋಟಿ ಹಣದಲ್ಲಿ ಜಮೀನನ್ನು ಕರೆಗ್ಸಿದ್ದು ಕಾಂಪೌಂಡ್ ನಿರ್ಮಿಸಲಾಗಿದೆ ಈ ಜಮೀನಿನಲ್ಲಿ ತೆಂಗಿನ ಗಿಡ, ಮಾವಿನ ಗಿಡ ಇತರೆ ಬೆಳೆಗಳನ್ನು ಬೆಳೆಯುತ್ತಿದ್ದು, ಇದೆ ಪ್ರದೇಶದಲ್ಲಿ ಸುಸಜ್ಜಿತ ಕೊಠಡಿಗಳು, ಶಾಲಾ ಕೊಠಡಿಗಳನ್ನು ಸಹ ನಿರ್ಮಿಸಿ ಅನಾಥ ಮಕ್ಕಳಿಗೆ ಶಿಕ್ಷಣವನ್ನು ಸಹ ಕಲ್ಪಿಸಿ ಅವರ ಸ್ವಂತ ಕಾಲಿನ ಮೇಲೆ ನಿಲ್ಲಲು ಪ್ರೇರೇಪಿಸುತ್ತೇನೆ ಎಂದರು.

ಇದನ್ನು ಓದಿದ್ದೀರಾ..? ರಸ್ತೆಯಲ್ಲಿ ನಡೆಯುತ್ತಿರುವ ಅವರೆಕಾಯಿ ವ್ಯಾಪಾರದಿಂದ ಸಾರ್ವಜನಿಕರಿಗೆ ಹಾಗೂ ಟ್ರಾಫಿಕ್‌ಗೆ ತೀವ್ರ ತೊಂದರೆಯಾಗುತ್ತಿದೆ

ಈ ಸಂದರ್ಭದಲ್ಲಿ ಇಸ್ಲಾಮಿಕ್ ಚಿಂತಕ ಉಮರ್ ಷರೀಫ್, ಮುಸ್ಲೀಂ ಕಮಿಟಿ ಕೋಲಾರ ಜಿಲ್ಲಾ ಅಧ್ಯಕ್ಷ ಜಮಾಲ್, , ಮೊಹ್ಮದ್ ಉಮ್ರಿ, ಮಾದಿಗ ದಂಡೋರ ರಾಜ್ಯಾಧ್ಯಕ್ಷ ವೇಣು, ವೆಂಕಟೇಶ್, ಶಿವ ಕುಮಾರ್, ಬಾಬು, ಅಮೀರ್ ಜಾನ್, ರೆಹಮಾನ್ ಖಾನ್ ಉಮ್ರಿ, ಅಬ್ದುಲ್ ಕದೀರ್, ಮಥೀನ್, ಮುಜಾಹಿದೀನ್, ಹಾಗೂ ಅನೇಕ ಮುಖಂಡರು ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು: ಇಬ್ಬರು ಸಾವು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟಿದ್ದು,...

ಹಾವೇರಿ | ರದ್ದು ಪಡಿಸಿದ ಎಂಟು ಕೊರ್ಸಗಳನ್ನು  ಮುಂದುವರೆಸುವಂತೆ ಅತಿಥಿ ಉಪನ್ಯಾಸಕರ ಧರಣಿಗೆ ಡಿವೈಎಫ್ಐ-ಎಸ್ಎಫ್ಐ ಬೆಂಬಲಿಸಿ ಪ್ರತಿಭಟನೆ

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರದ್ದುಪಡಿಸಿದ ಎಂಟು ಕೋರ್ಸ್ ಗಳು ಮುಚ್ಚದೇ ಮುಂದುವರೆಸುವಂತೆ...

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...

ಕಲಬುರಗಿ | ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಗೈರು ಆರೋಪ: ಕರ್ತವ್ಯಲೋಪದ ವಿರುದ್ಧ ಕ್ರಮಕ್ಕೆ ಆಗ್ರಹ

ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ...