ಶೇ.5 ರಿಯಾಯಿತಿ ಆಸ್ತಿ ತೆರಿಗೆ ಅವಧಿ ವಿಸ್ತರಣೆ: ಬಿಬಿಎಂಪಿ

Date:

  • ಬೆಂಗಳೂರಿನ ನಾಗರಿಕರಿಗೆ “ಉಡುಗೊರೆ” ಎಂದ ಉಪಮುಖ್ಯಮಂತ್ರಿ ಡಿಕೆಶಿ
  • ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ರಿಯಾಯಿತಿ ಅವಧಿ ವಿಸ್ತರಣೆ ಮಾಡಿರಲಿಲ್ಲ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿನ ಆಸ್ತಿ ತೆರಿಗೆ ಪಾವತಿದಾರರು ಜೂನ್ ಅಂತ್ಯದ ಅವಧಿವರೆಗೆ ಶೇ. 5ರಷ್ಟು ರಿಯಾಯಿತಿಯೊಂದಿಗೆ ತೆರಿಗೆ ಪಾವತಿಸಬಹುದು ಎಂದು ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಅವರ ಆದೇಶದ ಮೇರೆಗೆ ಆಸ್ತಿ ತೆರಿಗೆ ರಿಯಾಯಿತಿ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಪಾಲಿಕೆ ಹೇಳಿದೆ.

ಶೇ. 5ರಷ್ಟು ರಿಯಾಯಿತಿ ಆಸ್ತಿ ತೆರಿಗೆ ಏಪ್ರಿಲ್ ಅಂತ್ಯಕ್ಕೆ ಅವಧಿ ಮುಗಿದಿದೆ. ಈ ರಿಯಾಯಿತಿಯನ್ನು ಜೂನ್ ಪೂರ್ಣ ತಿಂಗಳಿಗೆ ವಿಸ್ತರಿಸಲಾಗಿದೆ. ಜೂನ್ 30 ಅಥವಾ ಅದಕ್ಕಿಂತ ಮೊದಲು ಆಸ್ತಿ ತೆರಿಗೆ ಪಾವತಿಸುವ ಮಾಲೀಕರಿಗೆ ರಿಯಾಯಿತಿ ಅನ್ವಯಿಸುತ್ತದೆ. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಈ ಕ್ರಮವನ್ನು ಬೆಂಗಳೂರಿನ ನಾಗರಿಕರಿಗೆ “ಉಡುಗೊರೆ” ಎಂದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಿಬಿಎಂಪಿ ಆರ್ಥಿಕ ವರ್ಷದ ಮೊದಲ ತಿಂಗಳಲ್ಲಿ ಆಸ್ತಿ ತೆರಿಗೆಯ ಮೇಲೆ ಶೇ. 5ರಷ್ಟು ರಿಯಾಯಿತಿಯನ್ನು ನೀಡುತ್ತದೆ. ಒಂದು ತಿಂಗಳವರೆಗೆ ಅವಧಿ ವಿಸ್ತರಿಸಲಾಗುತ್ತದೆ. ಈ ವರ್ಷ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಅವಧಿ ವಿಸ್ತರಣೆ ಮಾಡಿರಲಿಲ್ಲ. ರಿಯಾಯಿತಿಯು ಆಸ್ತಿ ಮಾಲೀಕರಿಗೆ ಸಹಾಯ ಮಾಡುತ್ತದೆ. ಇದು ಬಾಕಿ ಉಳಿದಿರುವ ಬಿಲ್‌ಗಳನ್ನು ತೆರವುಗೊಳಿಸಲು ಸಹಾಯಕವಾಗುತ್ತದೆ.

ಗುರುವಾರ ಬೆಂಗಳೂರು ಅಭಿವೃದ್ಧಿ ಸಚಿವರನ್ನು ಭೇಟಿ ಮಾಡಿದ ಮಾಜಿ ಮೇಯರ್‌ಗಳು ಆಸ್ತಿ ತೆರಿಗೆ ಮೇಲಿನ ಶೇ. 5ರಷ್ಟು ರಿಯಾಯಿತಿಯನ್ನು ವಿಸ್ತರಿಸುವಂತೆ ಮನವಿ ಮಾಡಿದ್ದರು. ಮೇ ತಿಂಗಳಲ್ಲಿ ಪಾವತಿ ಮಾಡಿದವರು ಮುಂದಿನ ವರ್ಷ ಪಾವತಿಸಿದಾಗ ಅವರ ಆಸ್ತಿ ತೆರಿಗೆಗೆ ಅನುಗುಣವಾಗಿ ಶೇಕಡಾ 5 ರಷ್ಟು ರಿಯಾಯಿತಿಯನ್ನು ಪಡೆಯುತ್ತಾರೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಚಿನ್ನಕ್ಕಾಗಿ ಅಜ್ಜಿಯ ಕೊಲೆ : ಮೂವರ ಬಂಧನ

2023-24ರ ಬಜೆಟ್‌ನಲ್ಲಿ ಬಿಬಿಎಂಪಿಯು ಆಸ್ತಿ ತೆರಿಗೆಯಿಂದ ₹4,690 ಕೋಟಿ ಸಂಗ್ರಹಿಸುವ ಗುರಿ ಹೊಂದಿದೆ. ಕಳೆದ ವರ್ಷ ಆಸ್ತಿ ತೆರಿಗೆಯಿಂದ ₹3,332 ಕೋಟಿ ಸಂಗ್ರಹಿಸಿತ್ತು. ಮಹದೇವಪುರ ಮತ್ತು ಬಿಬಿಎಂಪಿಯ ಪೂರ್ವ ವಲಯಗಳಿಂದ ಹೆಚ್ಚಿನ ತೆರಿಗೆ ಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ಬೆಂಗಳೂರು | ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯ: ಸರಣಿ ಅಪಘಾತ

ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ...

ಲೋಕಸಭಾ ಚುನಾವಣೆ | ಮೊದಲ ಹಂತದ ಮತದಾನ ದಿನ 2,172 ಪ್ರಕರಣ ದಾಖಲು

ಲೋಕಸಭಾ ಚುನಾವಣೆ ಹಿನ್ನೆಲೆ, ಏ.26 ರಂದು ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...

ಬೆಂಗಳೂರು | ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ತೇಜಸ್ವಿ ಸೂರ್ಯ: ಪ್ರಕರಣ ದಾಖಲು

ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ...