ಬೆಂಗಳೂರು ಕಟ್ಟಡ ದುರಂತ: ಸಾವಿನ ಸಂಖ್ಯೆ 5ಕ್ಕೆ ಏರಿಕೆ

Date:

ಬೆಂಗಳೂರಿನ ಹೆಣ್ಣೂರಿನ ಬಾಬುಸಾಪಾಳ್ಯದಲ್ಲಿ ಮಂಗಳವಾರ ನಿರ್ಮಾಣ ಹಂತದ 6 ಅಂತಸ್ತಿನ ಕಟ್ಟಡವೊಂದು ದಿಢೀರ್ ಕುಸಿದುಬಿದ್ದ ಅವಘಡದಲ್ಲಿ ಅವಶೇಷಗಳಡಿಯಲ್ಲಿ ಸಿಲುಕಿ ಒಟ್ಟು ಐವರು ಮೃತಪಟ್ಟಿದ್ದಾರೆ.

- Advertisement -

ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಇಂದು(ಬುಧವಾರ) ಬೆಳಗ್ಗೆ ಓರ್ವ ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಒಟ್ಟು ಐದು ಮಂದಿ ಮೃತಪಟ್ಟಿರುವುದು ದೃಢ ಪಟ್ಟಿದೆ. ಇದೇ ವೇಳೆ ಕಟ್ಟಡ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಉಳಿದ ಕಾರ್ಮಿಕರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ,...

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು ಈ ಸಂತ್ರಸ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಪ್ರಜಾಪ್ರಭುತ್ವದ ಅತ್ಯುನ್ನತ ಪೀಠದಲ್ಲಿರುವ ಅವರು, ತಮ್ಮ ಸ್ವಕ್ಷೇತ್ರದ ಈ ದಶಕದ ಸಮಸ್ಯೆಗೆ ತಕ್ಷಣ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ರಾತ್ರಿಯಿಡೀ ಅವಶೇಷಗಳಡಿ ಸಿಲುಕಿದವರ ಪತ್ತೆಕಾರ್ಯ ನಡೆಯಿತು. ಮಧ್ಯರಾತ್ರಿ ಮೂವರ ಮೃತದೇಹಗಳು ಪತ್ತೆಯಾಗಿದ್ದು, ಇನ್ನು ಕೆಲವರು ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಹೊರ ತೆಗೆಯಲು ಜೆಸಿಬಿ, ಹಿಟಾಚಿಗಳ ಮೂಲಕ ಕುಸಿದ ಕಟ್ಟಡದ ಅವಶೇಷಗಳನ್ನು ತೆರವು ಮಾಡುವ ಕಾರ್ಯಾಚರಣೆ ನಡೆಯುತ್ತಿದೆ.

ಕಾಮಗಾರಿಯ ವೇಳೆಗೆ 16 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಕೂಲಿ ಕಾರ್ಮಿಕರು ಕಟ್ಟಡದ ಅವಶೇಷಗಳಲ್ಲಿ ಸಿಲುಕಿದ್ದು ಸ್ಥಳಕ್ಕೆ ರಕ್ಷಣಾ ಕಾರ್ಯಾಚರಣೆ ತಂಡ ಭೇಟಿ ನೀಡಿ ಅವಶೇಷಗಳನ್ನು ತೆಗೆಯುವ ಕೆಲಸ ನಡೆಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವ್ಯಕ್ತಿ, ಕುಟುಂಬ, ಜಾತಿ ಪ್ರತಿಷ್ಠೆಯ ಕಣ ಚನ್ನಪಟ್ಟಣ

ಮಂಗಳವಾರವೇ ಬಿಹಾರದ ಅರ್ಮಾನ್(26) ಎಂಬ ಕಾರ್ಮಿಕ ಮೃತಪಟ್ಟಿದ್ದರು. ಇನ್ನೂ ಕೆಲವರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು ಅವರ ರಕ್ಷಣೆ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆಂಧ್ರಪ್ರದೇಶದ ಮುನಿರಾಜು ರೆಡ್ಡಿ ಎಂಬವರು ಹೆಣ್ಣೂರಿನ ಬಾಬುಸಾಪಾಳ್ಯದಲ್ಲಿ 6 ಅಂತಸ್ತಿನ ಕಟ್ಟಡ ನಿರ್ಮಿಸುತ್ತಿದ್ದಾರೆ. ಯಾದಗಿರಿ, ಬಿಹಾರ, ಆಂಧ್ರಪ್ರದೇಶದ 21 ಮಂದಿ ಕಾರ್ಮಿಕರು ಈ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದರು. ಹಗಲಿನಲ್ಲಿ ಕೆಲಸ ಮಾಡಿ, ರಾತ್ರಿ ವೇಳೆ ಕಟ್ಟಡದಲ್ಲಿಯೇ ಮಲಗುತ್ತಿದ್ದರು.

ಮಂಗಳವಾರ ಬೆಳಗ್ಗೆಯೇ ಎಲ್ಲ ಕಾರ್ಮಿಕರು ಕಟ್ಟಡ ಒಳಭಾಗದಲ್ಲಿ ಟೈಲ್ಸ್ ಸೇರಿ ಇತರ ಕೆಲಸ ಮಾಡುತ್ತಿದ್ದರು. ಆದರೆ, ಸಂಜೆ 4 ಗಂಟೆ ಸುಮಾರಿಗೆ ಏಕಾಏಕಿ ಕಟ್ಟಡದ ಪಿಲ್ಲರ್‌ಗಳಲ್ಲಿ ಬಿರುಕು ಕಾಣಿಸಿಕೊಂಡು ಇಡೀ ಕಟ್ಟಡ ಬಲಭಾಗಕ್ಕೆ ಬಿದ್ದಿದೆ. ಈ ವೇಳೆ ಒಂದಿಬ್ಬರು ಕಾರ್ಮಿಕರು ಕಟ್ಟಡದಿಂದ ಮರಳಿನ ಮೇಲೆ ಜಿಗಿದು ಪ್ರಾಣ ಉಳಿಸಿಕೊಂಡರೆ, ಇನ್ನು ಕೆಲವರು ಒಳಗಡೆಯೇ ಸಿಲುಕಿಕೊಂಡಿದ್ದಾರೆ ಎಂದು ರಕ್ಷಣಾ ತಂಡ ಮಾಹಿತಿ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಒಂದೇ ಮತಗಟ್ಟೆಯಲ್ಲಿ ಶೇ. 62ರಷ್ಟು ಮತದಾರರ ಹೆಸರು ಡಿಲೀಟ್: ಚುನಾವಣಾ ಆಯೋಗಕ್ಕೆ ರಮೇಶ್ ಬಾಬು ದೂರು

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ಬರಗಾಲದಿಂದ ನಾಡಿಗೆ ಮುಕ್ತಿ ಸಿಗಲಿ: ಗಾಣಗಾಪುರ ದತ್ತಾತ್ರೇಯನ ಮೊರೆ ಹೋದ ಸಿಎಂ ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದಿಂದ ಜನತೆಗೆ ಶೀಘ್ರವೇ ಮುಕ್ತಿ ಸಿಗಲಿ ಹಾಗೂ...

ಪಡಿತರ ಚೀಟಿ ಇ-ಕೆವೈಸಿ ಗಡುವು ವಿಸ್ತರಣೆ: ಸರ್ಕಾರ ಆದೇಶ

ಕರ್ನಾಟಕದಲ್ಲಿ ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿದಾರರು ರೇಷನ್ ಕಾರ್ಡ್ ಇ-ಕೆವೈಸಿ...