ಕಾಂಗ್ರೆಸ್‌ ಪರ ಪ್ರಚಾರ ಮಾಡುತ್ತಿರುವ ಆಟೋ ಚಾಲಕರಿಗೆ ₹5,000 ದಂಡ ; ಡಿಕೆಶಿ ಆರೋಪ

Date:

  • ಸಮಾಜಕ್ಕೆ ಸೇವೆ ಸಲ್ಲಿಸುತ್ತಿರುವ ಆಟೋ ಚಾಲಕರ ಪರ ಕಾಂಗ್ರೆಸ್‌ ನಿಲ್ಲಲಿದೆ
  • ಆಟೋ ಚಾಲಕರನ್ನು ಬಳಸಿಕೊಳ್ಳುತ್ತಿರುವ ಬೇರೆ ಪಕ್ಷದವರು ಅವರ ರಕ್ಷಣೆಗೆ ಬರುತ್ತಿಲ್ಲ

“ಚುನಾವಣೆ ಸಮಯದಲ್ಲಿ ಆಟೋ ಚಾಲಕರು ತಮಗೆ ಬೇಕಾದ ಪಕ್ಷದ ಪರ ಪ್ರಚಾರ ಮಾಡುತ್ತಿದ್ದಾರೆ. ಆದರೆ, ಕಾಂಗ್ರೆಸ್‌ ಪರ ಪ್ರಚಾರ ಮಾಡುತ್ತಿರುವ ಆಟೋ ಚಾಲಕರ ಮೇಲೆ ₹5,000 ದಂಡ ಹಾಕಲಾಗುತ್ತಿದೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಆರೋಪಿಸಿದರು.

ಸದಾಶಿವನಗರ ನಿವಾಸದ ಬಳಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪಕ್ಷದ ಪರ ಪ್ರಚಾರಕ್ಕೆ ಆಟೋಗಳ ಮೇಲೆ ಫೋಟೋ ಹಾಕಿಕೊಳ್ಳಬಾರದು ಎಂದು ಯಾವ ಕಾನೂನಿನಲ್ಲಿದೆ? ಚುನಾವಣಾ ಆಯೋಗದವರು ಆಟೋ ಚಾಲಕರಿಗೆ ಬಾಯಿ ಮಾತಲ್ಲಿ ತಿಳುವಳಿಕೆ ಹೇಳಲಿ. ಆದರೆ, ಮೂರು ನಾಲ್ಕು ದಿನಗಳವರೆಗೆ ಆಟೋವನ್ನು ಮುಟ್ಟುಗೋಲು ಹಾಕಿಕೊಳ್ಳುವುದು ಏಕೆ? ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಬೆಲೆ ಏರಿಕೆಯಿಂದ ಅವರ ಬದುಕಿನ ಮೇಲೆ ಈಗಾಗಲೇ ಬರೆ ಬಿದ್ದಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕರಗಕ್ಕೆ ಕರಗಿದ ಬಿಬಿಎಂಪಿ ಅನುದಾನ

“ಆಟೋ ಚಾಲಕರನ್ನು ಬಳಸಿಕೊಳ್ಳುತ್ತಿರುವ ಬೇರೆ ಪಕ್ಷದವರು ಅವರ ರಕ್ಷಣೆಗೆ ಬರುತ್ತಿಲ್ಲ. ಆಟೋ ಚಾಲಕರು ಯಾವುದೇ ಪಕ್ಷದ ಪರವಾಗಿ ಬೇಕಾದರೂ ಪ್ರಚಾರ ಮಾಡಲಿ. ಅವರಿಗೆ ಈ ರೀತಿ ಕಿರುಕುಳ ನೀಡಿದರೆ, ಅವರ ಪರವಾಗಿ ನಾವು ನಿಲ್ಲುತ್ತೇವೆ. ನಮ್ಮ ಸಮಾಜಕ್ಕೆ ಸೇವೆ ಸಲ್ಲಿಸುತ್ತಿರುವ ಆಟೋ ಚಾಲಕರು ಧೈರ್ಯವಾಗಿರಬೇಕು. ತಮ್ಮ ಹಕ್ಕು, ವಿಚಾರವನ್ನು ಅವರು ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ಪೊಲೀಸ್ ಆಯುಕ್ತರು ಹಾಗೂ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಇದಕ್ಕೆ ನಿರ್ಬಂಧ ಹೇರುವ ಕಾನೂನು ಇಲ್ಲ, ಹೀಗಾಗಿ, ಆಟೋ ಚಾಲಕರಿಗೆ ಕಿರುಕುಳ ನೀಡಬಾರದು” ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

3ನೇ ಕಂತಿಗಾಗಿ ಮತ್ತೆ ಬಂದ ಸುರ್ಜೇವಾಲ: ಸಿ ಟಿ ರವಿ ಆರೋಪ

ಕಾಂಗ್ರೆಸ್ ಯಾವಾಗಲೂ ಚುನಾವಣೆ ನಡೆಸುವುದೇ ಕಡೇ 3 ದಿನದಲ್ಲಿ ...

ಜನತಾ ದರ್ಶನದ ಮೂಲಕ ರಾಜ್ಯದ ‘ಆಡಳಿತ’ ಸಿಎಂಗೆ ಮನವರಿಕೆಯಾಗಿರಬಹುದು: ಕುಮಾರಸ್ವಾಮಿ

ಎಲ್ಲದಕ್ಕೂ ಸರ್ಕಾರವನ್ನು ಟೀಕಿಸಲ್ಲ ಎಂದ ಜೆಡಿಎಸ್ ರಾಜ್ಯಾಧ್ಯಕ್ಷ ನಮ್ಮ ಶಕ್ತಿ...

ಜೀವ ಪ್ರಮಾಣ ಪತ್ರ ಸಲ್ಲಿಸಲು ಪಿಂಚಣಿದಾರರಿಗೆ ಎರಡೇ ದಿನ ಬಾಕಿ

ಕೇಂದ್ರ ಸರ್ಕಾರ ಹಾಗೂ ನಾನಾ ರಾಜ್ಯಗಳಲ್ಲಿ ಉದ್ಯೋಗ ಮಾಡಿ ನಿವೃತ್ತಿ ಹೊಂದಿ...