ಏ. 1ರವರೆಗೆ ಮೈಸೂರು ರಸ್ತೆ ಮೂಲಕ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಚಾರ ಬಂದ್‌

Date:

  • ಏ. 1ರ ಬೆಳಗ್ಗೆ 10 ಗಂಟೆಯವರೆಗೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳು ಸೇರಿದಂತೆ ಎಲ್ಲ ವಾಹನಗಳಿಗೆ ನಿರ್ಬಂಧ
  • ಸಾರ್ವಜನಿಕ ವಾಹನಗಳ ಸುಗಮ ಸಂಚಾರದ ಹಿತದೃಷ್ಟಿಯಿಂದ ಬದಲಿ ರಸ್ತೆಯಲ್ಲಿ ಸಂಚರಿಸಲು ಮನವಿ

ಬೆಂಗಳೂರಿನ ಬ್ಯಾಟರಾಯನಪುರ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯ ಮೈಸೂರು ರಸ್ತೆಯಲ್ಲಿರುವ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ರಾಮವೇಣುಗೋಪಾಲ ಸ್ವಾಮಿ ರಥೋತ್ಸವ ನಡೆಯಲಿದೆ. ಈ ಹಿನ್ನಲೆ, ಮೈಸೂರು ರಸ್ತೆ ಮೂಲಕ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಚಾರ ಬಂದ್‌ ಮಾಡಲಾಗಿದೆ ಎಂದು ಬೆಂಗಳೂರು ನಗರ ಸಂಚಾರ ಪೊಲೀಸ್ ಪ್ರಕಟಣೆ ಹೊರಡಿಸಿದೆ.

- Advertisement -

ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನಡೆಯುತ್ತಿರುವ ರಾಮವೇಣುಗೋಪಾಲ ಸ್ವಾಮಿ ರಥೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಾರೆ. ಈ ಹಿನ್ನಲೆ, ಸಾರ್ವಜನಿಕ ವಾಹನಗಳ ಸುಗಮ ಸಂಚಾರದ ಹಿತದೃಷ್ಟಿಯಿಂದ ಏಪ್ರಿಲ್ 1 ರವರೆಗೆ ಸಂಚಾರಕ್ಕಾಗಿ ಬದಲಿ ರಸ್ತೆಯಲ್ಲಿ ಸಂಚರಿಸಲು ಪೊಲೀಸ್ ಇಲಾಖೆ ಮನವಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಮಾ. 31ರ ಬೆಳಗ್ಗೆ 8 ಗಂಟೆಯಿಂದ ಏ. 1ರ ಬೆಳಗ್ಗೆ 10 ಗಂಟೆಯವರೆಗೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳು ಸೇರಿದಂತೆ ಎಲ್ಲ ವಾಹನಗಳು ಮೈಸೂರು ರಸ್ತೆ ಮೂಲಕ ಬೆಂಗಳೂರು ನಗರ ಪ್ರವೇಶಿಸುವುದು ಮತ್ತು ನಿರ್ಗಮಿಸುವುದನ್ನು ನಿಷೇಧಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಚಲಿಸುತ್ತಿದ್ದ ಕಾರಿನಲ್ಲಿ ಯುವತಿ ಮೇಲೆ ನಾಲ್ವರು ದುಷ್ಕರ್ಮಿಗಳಿಂದ ಅತ್ಯಾಚಾರ; ಬಂಧನ

ಬದಲಿ ಸಂಪರ್ಕ ರಸ್ತೆಗಳು

ಮೈಸೂರು ರಸ್ತೆಯ ಹೊಸ ಗುಡ್ಡದಹಳ್ಳಿ ಜಂಕ್ಷನ್‌ನಲ್ಲಿ ಎಡಕ್ಕೆ ಹೋಗಿ ಟಿಂಬರ್ ಯಾರ್ಡ್ ಮೂಲಕ ಮುನೇಶ್ವರ ಬ್ಲಾಕ್‌ನ 50 ಅಡಿ ರಸ್ತೆಯಲ್ಲಿ ಹೊಸಕೆರೆಹಳ್ಳಿ ಮೂಲಕ ದೇವೇಗೌಡ ವೃತ್ತಕ್ಕೆ ಬಂದು ನಾಯಂಡಹಳ್ಳಿ ಜಂಕ್ಷನ್ ಬಳಿ ಮೈಸೂರು ರಸ್ತೆಯನ್ನು ಸೇರಬಹುದಾಗಿದೆ.

ಪಶ್ಚಿಮ ಕಾರ್ಡ್ ರಸ್ತೆಯಲ್ಲಿ ವಿಜಯನಗರದಿಂದ ಮೈಸೂರು ರಸ್ತೆ ಕಡೆಗೆ ಹೋಗುವ ವಾಹನಗಳು ಮತ್ತು ಬಿಎಚ್‌ಇಎಲ್ ಜಂಕ್ಷನ್‌ನಿಂದ ನಗರಕ್ಕೆ ಹೋಗುವ ವಾಹನಗಳು ಬಾಪೂಜಿ ನಗರ ಜಂಕ್ಷನ್ ಮತ್ತು ಕೆಎಸ್‌ಆರ್‌ಟಿಸಿ ಜಂಕ್ಷನ್‌ನಲ್ಲಿ ತಿರುವು ತೆಗೆದುಕೊಳ್ಳಲು ಅನುಮತಿಯಿಲ್ಲ. ಬದಲಾಗಿ ಅವರು ಮೈಸೂರು ರಸ್ತೆಗೆ ಸಂಪರ್ಕಿಸಲು ಬಾಪೂಜಿ ನಗರದ ಮೇಲ್ಸೇತುವೆಯ ಮೂಲಕ ಹೋಗಬಹುದು ಮತ್ತು ಹೊಸಕೆರೆಹಳ್ಳಿ, ಬನಶಂಕರಿ, ಬ್ಯಾಟರಾಯನಪುರ ಕಡೆಯಿಂದ ಮೈಸೂರು ರಸ್ತೆ ಕಡೆಗೆ ಹೋಗುವ ವಾಹನಗಳು ಹೊಸ ಗುಡ್ಡದಹಳ್ಳಿ ಜಂಕ್ಷನ್‌ನಲ್ಲಿ ಬಲಕ್ಕೆ ತೆಗೆದುಕೊಂಡು 50 ಅಡಿ ರಸ್ತೆ ಮತ್ತು ದೇವೇಗೌಡ ವೃತ್ತದ ಮೂಲಕ ನಾಯಂಡಹಳ್ಳಿ ಜಂಕ್ಷನ್‌ಗೆ ತಲುಪಬಹುದು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...

ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಕೋಮು ಸೌಹಾರ್ದತೆಗೆ ಕನ್ನಡಿ: ಕಗ್ಗಲೀಪುರದಲ್ಲಿ ಮಹಿಳೆಯರಿಗೆ ಬಾಗಿನ ಅರ್ಪಿಸಿದ ಮುಸ್ಲಿಂ ದಂಪತಿ

ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರದಲ್ಲಿ ಮುಸ್ಲಿಂ...