ಏ. 1ರವರೆಗೆ ಮೈಸೂರು ರಸ್ತೆ ಮೂಲಕ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಚಾರ ಬಂದ್‌

Date:

  • ಏ. 1ರ ಬೆಳಗ್ಗೆ 10 ಗಂಟೆಯವರೆಗೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳು ಸೇರಿದಂತೆ ಎಲ್ಲ ವಾಹನಗಳಿಗೆ ನಿರ್ಬಂಧ
  • ಸಾರ್ವಜನಿಕ ವಾಹನಗಳ ಸುಗಮ ಸಂಚಾರದ ಹಿತದೃಷ್ಟಿಯಿಂದ ಬದಲಿ ರಸ್ತೆಯಲ್ಲಿ ಸಂಚರಿಸಲು ಮನವಿ

ಬೆಂಗಳೂರಿನ ಬ್ಯಾಟರಾಯನಪುರ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯ ಮೈಸೂರು ರಸ್ತೆಯಲ್ಲಿರುವ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ರಾಮವೇಣುಗೋಪಾಲ ಸ್ವಾಮಿ ರಥೋತ್ಸವ ನಡೆಯಲಿದೆ. ಈ ಹಿನ್ನಲೆ, ಮೈಸೂರು ರಸ್ತೆ ಮೂಲಕ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಚಾರ ಬಂದ್‌ ಮಾಡಲಾಗಿದೆ ಎಂದು ಬೆಂಗಳೂರು ನಗರ ಸಂಚಾರ ಪೊಲೀಸ್ ಪ್ರಕಟಣೆ ಹೊರಡಿಸಿದೆ.

ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನಡೆಯುತ್ತಿರುವ ರಾಮವೇಣುಗೋಪಾಲ ಸ್ವಾಮಿ ರಥೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಾರೆ. ಈ ಹಿನ್ನಲೆ, ಸಾರ್ವಜನಿಕ ವಾಹನಗಳ ಸುಗಮ ಸಂಚಾರದ ಹಿತದೃಷ್ಟಿಯಿಂದ ಏಪ್ರಿಲ್ 1 ರವರೆಗೆ ಸಂಚಾರಕ್ಕಾಗಿ ಬದಲಿ ರಸ್ತೆಯಲ್ಲಿ ಸಂಚರಿಸಲು ಪೊಲೀಸ್ ಇಲಾಖೆ ಮನವಿ ಮಾಡಿದೆ.

ಮಾ. 31ರ ಬೆಳಗ್ಗೆ 8 ಗಂಟೆಯಿಂದ ಏ. 1ರ ಬೆಳಗ್ಗೆ 10 ಗಂಟೆಯವರೆಗೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳು ಸೇರಿದಂತೆ ಎಲ್ಲ ವಾಹನಗಳು ಮೈಸೂರು ರಸ್ತೆ ಮೂಲಕ ಬೆಂಗಳೂರು ನಗರ ಪ್ರವೇಶಿಸುವುದು ಮತ್ತು ನಿರ್ಗಮಿಸುವುದನ್ನು ನಿಷೇಧಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಚಲಿಸುತ್ತಿದ್ದ ಕಾರಿನಲ್ಲಿ ಯುವತಿ ಮೇಲೆ ನಾಲ್ವರು ದುಷ್ಕರ್ಮಿಗಳಿಂದ ಅತ್ಯಾಚಾರ; ಬಂಧನ

ಬದಲಿ ಸಂಪರ್ಕ ರಸ್ತೆಗಳು

ಮೈಸೂರು ರಸ್ತೆಯ ಹೊಸ ಗುಡ್ಡದಹಳ್ಳಿ ಜಂಕ್ಷನ್‌ನಲ್ಲಿ ಎಡಕ್ಕೆ ಹೋಗಿ ಟಿಂಬರ್ ಯಾರ್ಡ್ ಮೂಲಕ ಮುನೇಶ್ವರ ಬ್ಲಾಕ್‌ನ 50 ಅಡಿ ರಸ್ತೆಯಲ್ಲಿ ಹೊಸಕೆರೆಹಳ್ಳಿ ಮೂಲಕ ದೇವೇಗೌಡ ವೃತ್ತಕ್ಕೆ ಬಂದು ನಾಯಂಡಹಳ್ಳಿ ಜಂಕ್ಷನ್ ಬಳಿ ಮೈಸೂರು ರಸ್ತೆಯನ್ನು ಸೇರಬಹುದಾಗಿದೆ.

ಪಶ್ಚಿಮ ಕಾರ್ಡ್ ರಸ್ತೆಯಲ್ಲಿ ವಿಜಯನಗರದಿಂದ ಮೈಸೂರು ರಸ್ತೆ ಕಡೆಗೆ ಹೋಗುವ ವಾಹನಗಳು ಮತ್ತು ಬಿಎಚ್‌ಇಎಲ್ ಜಂಕ್ಷನ್‌ನಿಂದ ನಗರಕ್ಕೆ ಹೋಗುವ ವಾಹನಗಳು ಬಾಪೂಜಿ ನಗರ ಜಂಕ್ಷನ್ ಮತ್ತು ಕೆಎಸ್‌ಆರ್‌ಟಿಸಿ ಜಂಕ್ಷನ್‌ನಲ್ಲಿ ತಿರುವು ತೆಗೆದುಕೊಳ್ಳಲು ಅನುಮತಿಯಿಲ್ಲ. ಬದಲಾಗಿ ಅವರು ಮೈಸೂರು ರಸ್ತೆಗೆ ಸಂಪರ್ಕಿಸಲು ಬಾಪೂಜಿ ನಗರದ ಮೇಲ್ಸೇತುವೆಯ ಮೂಲಕ ಹೋಗಬಹುದು ಮತ್ತು ಹೊಸಕೆರೆಹಳ್ಳಿ, ಬನಶಂಕರಿ, ಬ್ಯಾಟರಾಯನಪುರ ಕಡೆಯಿಂದ ಮೈಸೂರು ರಸ್ತೆ ಕಡೆಗೆ ಹೋಗುವ ವಾಹನಗಳು ಹೊಸ ಗುಡ್ಡದಹಳ್ಳಿ ಜಂಕ್ಷನ್‌ನಲ್ಲಿ ಬಲಕ್ಕೆ ತೆಗೆದುಕೊಂಡು 50 ಅಡಿ ರಸ್ತೆ ಮತ್ತು ದೇವೇಗೌಡ ವೃತ್ತದ ಮೂಲಕ ನಾಯಂಡಹಳ್ಳಿ ಜಂಕ್ಷನ್‌ಗೆ ತಲುಪಬಹುದು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಸಾಂಪ್ರದಾಯಿಕ ಗರಡಿ ಮನೆಗೆ ಹೂಡಿಕೆ ಮಾಡಿದ ಕ್ರಿಕೆಟಿಗ ಧೋನಿ

ಕ್ರಿಕೆಟ್‌ ಇತಿಹಾಸದಲ್ಲಿ ಶ್ರೇಷ್ಠ ನಾಯಕ ಎಂದೆನಿಸಿಕೊಂಡಿದ್ದ ಮಹೇಂದ್ರ ಸಿಂಗ್ ಧೋನಿ ಅವರು...

ಮಹಾಧರಣಿ | ದುಡಿವ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಿಎಂ ಸಭೆ: ಸಚಿವ ಕೃಷ್ಣ ಬೈರೇಗೌಡ

ಧರಣಿನಿರತರ ಹಕ್ಕೊತ್ತಾಯಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚಿಸಲು ಒಪ್ಪಿದ್ದಾರೆ. ಶೀಘ್ರದಲ್ಲೇ...

ಬೆಂಗಳೂರು | ನಕಲಿ ಟಿಕೆಟ್ ತೋರಿಸಿ ವಿಮಾನ ನಿಲ್ದಾಣದ ಟರ್ಮಿನಲ್ ಒಳಗೆ ಪ್ರವೇಶಿಸಿದ ಮಹಿಳೆ

ನಕಲಿ ಟಿಕೆಟ್ ತೋರಿಸಿ ವಿಮಾನ ನಿಲ್ದಾಣದ ಟರ್ಮಿನಲ್ ಒಳಗೆ ಪ್ರವೇಶ ಪಡೆದಿದ್ದ...

ಬೆಂಗಳೂರು ವಿಮಾನ ನಿಲ್ದಾಣದ ಭದ್ರತಾ ತಪಾಸಣೆಗೆ ನೂತನ ತಂತ್ರಜ್ಞಾನ ಅಳವಡಿಕೆ

ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ...