ಬಾಲನಟಿ ವಂಶಿಕಾ ಹೆಸರು ಹೇಳಿ ವಂಚನೆ ಮಾಡಿದ್ದ ಆರೋಪಿ ವಿರುದ್ಧ ಮತ್ತಷ್ಟು ದೂರು ದಾಖಲು

Date:

Advertisements
  • ₹35 ಲಕ್ಷ ವಂಚನೆ ಮಾಡಿರುವ ಆರೋಪದಡಿ ದೂರು ದಾಖಲು
  • ಇವೆಂಟ್‌ ಮ್ಯಾನೇಜ್‌ಮೆಂಟ್‌ ಹೆಸರಿನಲ್ಲಿ ₹20 ಲಕ್ಷ ವಂಚನೆ

ನಟ, ನಿರ್ದೇಶಕ ಮಾಸ್ಟರ್‌ ಆನಂದ ಪುತ್ರಿ ಹಾಗೂ ಬಾಲನಟಿ ವಂಶಿಕಾ ಹೆಸರು ಬಳಸಿ ಲಕ್ಷಾಂತರ ರೂಪಾಯಿ ಮೋಸ ಮಾಡಿರುವ ಆರೋಪದ ಮೇಲೆ ಬಂಧಿತಳಾಗಿರುವ ನಿಶಾ ನರಸಪ್ಪಳನ್ನು ಪೊಲೀಸರು ತೀವೃ ವಿಚಾರಣೆ ನಡೆಸುತ್ತಿದ್ದಾರೆ. ಇದೇ ವೇಳೆ ಹಲವಾರು ಮಂದಿ ಈಕೆಯ ವಿರುದ್ಧ ದೂರು ನೀಡಲು ಸದಾಶಿವನಗರ ಪೊಲೀಸ್‌ ಠಾಣೆಗೆ ಬರುತ್ತಿದ್ದಾರೆ.

ನಿಶಾ ನರಸಪ್ಪ ವಿರುದ್ಧ ನಗರದ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ₹35 ಲಕ್ಷ ವಂಚನೆ ಮಾಡಿರುವ ಆರೋಪದಡಿ ದೂರು ದಾಖಲಾಗಿದೆ.

ಹಣವನ್ನು ಇನ್ವೆಸ್ಟ್‌ ಮಾಡಿದರೆ ಹೆಚ್ಚಿನ ಲಾಭಾಂಶ ಬರುತ್ತದೆ ಎಂದು ಜನರಿಗೆ ಹೇಳಿ ನಿಶಾ ನರಸಪ್ಪ ನಂಬಿಸುತ್ತಿದ್ದಳು. ಮೊದಲು ಲಾಭಾಂಶದ ಹಣವನ್ನು ನೀಡಿ ಎರಡರಷ್ಟು ಹಣವನ್ನು ಪಡೆದು ವಂಚನೆ ಮಾಡುತ್ತಿದ್ದಳು.

Advertisements

ಇವೆಂಟ್‌ ಮ್ಯಾನೇಜ್‌ಮೆಂಟ್‌ ಹೆಸರಿನಲ್ಲಿ ತಾರಾ ಎಂಬುವವರಿಗೆ ನಿಶಾ ನರಸಪ್ಪ ₹20 ಲಕ್ಷ ವಂಚನೆ ಮಾಡಿರುವ ಆರೋಪದ ಮೇಲೆ ಕಳೆದ ತಿಂಗಳು ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ವಂಚನೆ ಆರೋಪದಡಿ ಈಕೆಯ ವಿರುದ್ಧ ಕೋಣನಕುಂಟೆ ಹಾಗೂ ಜ್ಞಾನಭಾರತಿ ಪೊಲೀಸ್‌ ಠಾಣೆಯಲ್ಲಿ ವಂಚನೆ ದೂರುಗಳು ದಾಖಲಾಗಿವೆ.

ಈ ಸುದ್ದಿ ಓದಿದ್ದೀರಾ? ಕಳ್ಳತನ ಮಾಡಿ ಶೋಕಿ ಜೀವನ ನಡೆಸುತ್ತಿದ್ದ ನಾಲ್ವರ ಬಂಧನ

ನಿಶಾ ಮೂಲತಃ ರಾಮನಗರದವರು. ಬೆಂಗಳೂರಿನ ದೊಡ್ಡ ಮಾಲ್‌ಗಳಲ್ಲಿ ಇವೆಂಟ್‌ ಮ್ಯಾನೆಜ್‌ಮೆಂಟ್‌ ಮಾಡುತ್ತಿದ್ದಳು. ನಗರದ ಹೊರವಲಯದಲ್ಲಿನ ರೆಸಾರ್ಟ್‌ಗಳಲ್ಲಿ ಫೋಟೋ ಶೂಟ್‌ ಮಾಡುವ ಮೂಲಕ ಪೋಷಕರಿಗೆ ವಂಚನೆ ಎಸಗುತ್ತಿದ್ದಳು. ಮಕ್ಕಳಷ್ಟೇ ಅಲ್ಲದೇ ಹಲವಾರು ಜನರಿಗೆ ಇವೆಂಟ್‌ ಮ್ಯಾನೇಜ್‌ಮೆಂಟ್‌ ಹೆಸರಿನಲ್ಲಿ ಲಕ್ಷಾಂತರ ಹಣ ವಂಚನೆ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X