ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಾಮುಕನಿಗೆ 3 ವರ್ಷ ಕಠಿಣ‌ ಜೈಲು ಶಿಕ್ಷೆ

Date:

  • ಸಂತ್ರಸ್ತೆಗೆ ₹50,000 ಪರಿಹಾರ ನೀಡುವಂತೆ ತಿಳಿಸಿದ ವಿಶೇಷ ನ್ಯಾಯಾಲಯ
  • ಕಾಮುಕ ಅದಕ್‌ನನ್ನು ಬಂಧಿಸಿ, ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದ ಪೊಲೀಸರು

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಾಮುಕನಿಗೆ ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ₹25,000 ದಂಡ ವಿಧಿಸಿ ಬೆಂಗಳೂರಿನ 1ನೇ ಹೆಚ್ಚುವರಿ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

2017ರ ಆಗಸ್ಟ್ ತಿಂಗಳಿನಲ್ಲಿ ಸಂತ್ರಸ್ತೆಯ ಮನೆಯಲ್ಲಿ ಕಾರ್ಪೆಂಟಿಂಗ್ ಕೆಲಸಕ್ಕಾಗಿ ಅಪರಾಧಿ ಪ್ರಬೀರ್ ಅದಕ್ ತೆರಳಿದ್ದನು. ಈ ವೇಳೆ, ಮಲಗುವ ಕೋಣೆಯಲ್ಲಿ ಪೆನ್‌ಸ್ಟ್ಯಾಂಡ್ ಅಳವಡಿಸಲು ಅಪ್ರಾಪ್ತೆಯ ಸಹಾಯ ಕೇಳಿದ್ದ. ಆಕೆ ಸ್ಟಾಂಡ್ಅನ್ನು ಹಿಡಿದುಕೊಂಡು ನಿಂತಿದ್ದಾಗ, ಆಕೆಯನ್ನು ಹಿಂದಿನಿಂದ ಅಪ್ಪಿ, ಖಾಸಗಿ ಭಾಗಗಳನ್ನು ಮುಟ್ಟಿ, ಲೈಂಗಿಕ ದೌರ್ಜನ್ಯ ಎಸಗಿ, ಕಾಮವಾಂಛೆ ತೀರಿಸಿಕೊಂಡಿದ್ದ ಎಂದು ಆರೋಪಿಸಲಾಗಿತ್ತು.

ಅದಕ್ ವಿರುದ್ಧ ಸಂತ್ರಸ್ತೆಯ ತಾಯಿ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರು ಕಾಮುಕ ಅದಕ್‌ನನ್ನು ಬಂಧಿಸಿ, ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಫೇಸ್‌ಬುಕ್ ಯುವತಿ ಬಲೆಗೆ ಬಿದ್ದು ₹37 ಲಕ್ಷ ಕಳೆದುಕೊಂಡ ಕಂಬಾಳು ಸ್ವಾಮೀಜಿ

ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಕೆ.ಎನ್ ರೂಪಾ ಅವರು ಅದಕ್‌ನನ್ನು ಅಪರಾಧಿ ಎಂದು ಘೋಷಿಸಿದ್ದರು. ಮೂರು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ, ₹25,000 ದಂಡ ವಿಧಿಸಿದ್ದಾರೆ. ಅಲ್ಲದೆ, ಸಂತ್ರಸ್ತೆಗೆ ₹50,000 ಪರಿಹಾರ ನೀಡುವಂತೆ ನಿರ್ದೇಶಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖ್ಯಾತ ನಿರ್ದೇಶಕ ಶ್ರೀಪಾದ ಭಟ್‌ಗೆ ‘ರಂಗ ಭೂಪತಿ’ ಪ್ರಶಸ್ತಿ

ಖ್ಯಾತ ನಾಟಕಕಾರ ದಿ. ಗೋಪಾಲ ವಾಜಪೇಯಿ ಅವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ 'ರಂಗ...

ಜಲಮಂಡಳಿ ವತಿಯಿಂದ ಕಮ್ಯೂನಿಟಿ ರೈನ್‌ ಹಾರ್ವೆಸ್ಟಿಂಗ್‌ – ಕೆರೆಗಳಿಗೆ ಮಳೆ ನೀರು

ಅಂತರ್ಜಲ ಕುಸಿತದಿಂದ ನೀರಿನ ಅಭಾವಕ್ಕೆ ತುತ್ತಾಗಿರುವ ಬೆಂಗಳೂರು ನಗರದಲ್ಲಿ ಅಂತರ್ಜಲ ವೃದ್ಧಿಸುವ...

‘ಬೆಂಗಳೂರು ಕೇಂದ್ರ’ ಮರಳಿ ಕಾಂಗ್ರೆಸ್ ವಶಕ್ಕೆ : ಸಚಿವ ಜಮೀರ್ ವಿಶ್ವಾಸ

ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರ ಯಾವಾಗಲೂ ಕಾಂಗ್ರೆಸ್ ಭದ್ರಕೋಟೆ. ಈಗ ಅದನ್ನು...

ಸಮಾಜದ ಪ್ರತಿಯೊಬ್ಬರು ಮತ ಚಲಾಯಿಸಬೇಕು; ಇದು ಚುನಾವಣಾ ಆಯೋಗದ ಗುರಿ: ತುಷಾರ್ ಗಿರಿನಾಥ್

"ಲೋಕಸಭಾ ಚುನಾವಣೆ ಹಿನ್ನೆಲೆ, ಮತದಾರರು ತಪ್ಪದೆ ಮತದಾನ ಮಾಡುವ ನಿಟ್ಟಿನಲ್ಲಿ ವಿಶೇಷ...