ತನ್ನ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾನೆಂಬ ಕಾರಣಕ್ಕೆ ವ್ಯಕ್ತಿಯೊಬ್ಬನ ಕತ್ತು ಕೊಯ್ದು ಕೊಲೆ

Date:

Advertisements

ತನ್ನ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾನೆಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಪರಿಚಿತನನ್ನು ಕತ್ತು ಕೊಯ್ದು ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಫಾರೂಕ್ ಖಾನ್ ಕೊಲೆಯಾದ ವ್ಯಕ್ತಿ. ಸುಹೇಲ್, ಮುಬಾರಕ್, ಅಲಿ ಅಕ್ರಮ್ ಆರೋಪಿಗಳನ್ನು ಸಂಪಿಗೆಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹತ್ಯೆಯಾದ ವ್ಯಕ್ತಿ ಮತ್ತು ಆರೋಪಿಗಳು ಪರಿಚಿತರು.

ಸೋಮವಾರ ಬೆಳಗ್ಗೆ ಫಾರೂಕ್ ಖಾನ್ ಅವರನ್ನು ಆರೋಪಿಗಳು ಆಟೋದಲ್ಲಿ ಕಿಡ್ನಾಪ್ ಮಾಡಿ, ಅರ್ಕಾವತಿ ಲೇಔಟ್​​​​ ರಸ್ತೆಯಲ್ಲಿ ಚಾಕುವಿನಿಂದ ಖಾನ್‌ನ ಕುತ್ತಿಗೆಯನ್ನು ಕೊಯ್ದು ಕೊಲೆ ಮಾಡಿದ್ದಾರೆ.

Advertisements

ಇತ್ತ ಫಾರೂಕ್ ಖಾನ್ ಕಾಣಿಸದೇ ಇರುವಾಗ ಆತನ ಕುಟುಂಬಸ್ಥರು ಸಂಪಿಗೆಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಇದೇ ವೇಳೆಗೆ ಕೊಲೆ ಮಾಡಿರುವ ಆರೋಪಿಗಳಾದ ಸುಹೇಲ್, ಮುಬಾರಕ್ ಹಾಗೂ ಅಲಿ ಅಕ್ರಮ್ ಅವರು ಠಾಣೆಗೆ ಬಂದು ದ್ವೇಷದ ಹಿನ್ನೆಲೆ, ಖಾನ್‌ನನ್ನು ಕೊಲೆ ಮಾಡಿರುವುದಾಗಿ ಹೇಳಿಕೆ ನೀಡಿದ್ದಾರೆ.

ಹತ್ಯೆಯಾದ ಫಾರೂಕ್ ಖಾನ್ ಆರೋಪಿ ಸಹೇಲ್‌ಗೆ, “ನೀನು ಗಾಂಜಾ ಮಾರಾಟ ಮಾಡುತ್ತೀಯಾ, ನೀನು ಕೆಟ್ಟದಾಗಿ ಮಾತನಾಡಿ, ನನ್ನನ್ನು ಕೆಟ್ಟದಾಗಿ ಬಿಂಬಿಸುತ್ತಿಯಾ ಈ ಬಗ್ಗೆ ನಾನು ಪೊಲೀಸರಿಗೆ ಮಾಹಿತಿ ನೀಡುತ್ತೇನೆ” ಎಂದು ಫಾರೂಕ್​ ಖಾನ್ ಹೇಳಿದ್ದರು ಎಂದು ಬಂಧಿತ ಆರೋಪಿ ಹೇಳಿದ್ದಾನೆ.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | ಸೆ.18 ರಂದು 1,53,965 ಗಣೇಶ ಮೂರ್ತಿಗಳ ವಿಸರ್ಜನೆ

“ನಾನು ಗಾಂಜಾ ವ್ಯವಹಾರ ನಡೆಸುತ್ತಿಲ್ಲ. ಆದರೂ ಖಾನ್ ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದ. ಇದರಿಂದ ಕೋಪಗೊಂಡು ಸ್ನೇಹಿತರ ಜತೆಗೆ ಸೇರಿ ಹಲ್ಲೆ ಮಾಡಿ ಕೊಲೆ ಮಾಡಿದ್ದೇನೆ” ಎಂದು ಆರೋಪಿ ಹೇಳಿದ್ದಾನೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X