ಸೆ.11 ರಂದು ಬೆಂಗಳೂರು ಬಂದ್‌ಗೆ ಕರೆ ನೀಡಿದ ಖಾಸಗಿ ಸಾರಿಗೆ ಒಕ್ಕೂಟ

Date:

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತನ್ನ ಐದು ಗ್ಯಾರಂಟಿಗಳ ಪೈಕಿ ಮೊದಲನೆಯದಾಗಿ ಶಕ್ತಿ ಯೋಜನೆಯನ್ನು ಜುಲೈ 11ರಂದು ಜಾರಿ ಮಾಡಿತ್ತು. ಈ ಯೋಜನೆ ಜಾರಿಯಾದ ಬಳಿಕ ಖಾಸಗಿ ವಾಹನ ಚಾಲಕರು ಮತ್ತು ಮಾಲೀಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ, ಖಾಸಗಿ ಸಾರಿಗೆ ಒಕ್ಕೂಟ ಸೆ.11 ರಂದು ಬೆಂಗಳೂರು ಬಂದ್‌ಗೆ ಕರೆ ನೀಡಿದೆ.  

- Advertisement -

32 ಖಾಸಗಿ ಸಾರಿಗೆ ಒಕ್ಕೂಟಗಳು ಬೆಂಗಳೂರು ಬಂದ್​ಗೆ ಕರೆ ನೀಡಿವೆ. ಸೆಪ್ಟೆಂಬರ್ 11ರಂದು ಭಾನುವಾರ ರಾತ್ರಿ 12 ಗಂಟೆಯಿಂದ ಸೋಮವಾರ ರಾತ್ರಿ 12 ಗಂಟೆವರೆಗೆ ಆಟೋ ಟ್ಯಾಕ್ಸಿ, ಖಾಸಗಿ ಬಸ್, ಶಾಲಾ ಬಸ್ ಬಂದ್ ಇರಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಒಕ್ಕೂಟ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಜತೆಗೆ ಮಾತುಕತೆ ನಡೆಸಿತ್ತು. ಆಗಸ್ಟ್‌ 31ರೊಳಗಾಗಿ ಸಮಸ್ಯೆ ಬಗೆಹರಿಸುವುದಾಗಿ ಸರ್ಕಾರ ಭರವಸೆ ನೀಡಿತ್ತು. ಇಷ್ಟು ದಿನ ಕಳೆದರೂ ಸರ್ಕಾರ ಭರವಸೆ ಈಡೇರಿಸದ ಹಿನ್ನೆಲೆ, ಸರ್ಕಾರದ ವಿರುದ್ಧ ಬಂದ್‌ ನಡೆಸಲು ಸಿದ್ಧತೆ ನಡೆಸಿದೆ.

32 ಸಂಘಟನೆಗಳಿರುವ ರಾಜ್ಯದ ಖಾಸಗಿ ಸಾರಿಗೆ ಒಕ್ಕೂಟ ಸುದ್ದಿಗೋಷ್ಠಿ ನಡೆಸಿ, “ಶಕ್ತಿ ಯೋಜನೆ ಜಾರಿಯಾದಾಗಿನಿಂದ ಖಾಸಗಿ ಸಾರಿಗೆ ಉದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ. ಈ ಸಮಸ್ಯೆಯನ್ನು ಸರ್ಕಾರ ಆದಷ್ಟು ಬೇಗ ಪರಿಹಾರ ಮಾಡಬೇಕು. ಇಲ್ಲದಿದ್ದರೆ, ಸೆಪ್ಟೆಂಬರ್ 11ರಂದು ಬೆಂಗಳೂರು ಬಂದ್ ಮಾಡಲಾಗುವುದು. ಸೋಮವಾರ ಆಟೋ, ಟ್ಯಾಕ್ಸಿ, ಏರ್ ಪೋರ್ಟ್ ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್, ಕಾರ್ಪೋರೇಟ್ ವಾಹನಗಳು, ಸ್ಕೂಲ್ ಬಸ್ ಚಾಲಕರು, ಫ್ಯಾಕ್ಟರಿ ವಾಹನ, ಸ್ಟೇಜ್ ಗ್ಯಾರೇಜ್ ಬಸ್‌ಗಳು ಇರುವುದಿಲ್ಲ. ಭಾನುವಾರ ಮಧ್ಯರಾತ್ರಿಯಿಂದಲೇ ಬೆಂಗಳೂರು ಬಂದ್ ಇರಲಿದೆ. ಸರ್ಕಾರ ಲಿಖಿತ ಆದೇಶ ನೀಡುವವರೆಗೂ ಬಂದ್ ಕೈ ಬಿಡಲ್ಲ” ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಎಸ್ಸಿ‌ಎಸ್ಪಿ ಮತ್ತು ಟಿ‌ಎಸ್ಪಿ ಕಲ್ಯಾಣ ಕಾರ್ಯಕ್ರಮ ತಕ್ಷಣವೇ ಜಾರಿಗೊಳಿಸಿ: ಆಡಳಿತಾಧಿಕಾರಿ ಸೂಚನೆ

ಚಾಲಕರಿಗೆ 10 ಸಾವಿರ ಮಾಸಿಕ ಪರಿಹಾರ ಧನ, ರ‍್ಯಾಪಿಡೋ ಬೈಕ್ ಟ್ಯಾಕ್ಸಿಗಳ ನಿಷೇಧ, ಅಸಂಘಟಿತ ವಾಣಿಜ್ಯ ಚಾಲಕರ ಮತ್ತು ಸಾರಿಗೆ ಅಭಿವೃದ್ಧಿ ನಿಗಮ ಸ್ಥಾಪನೆ, ಸೌಲಭ್ಯ ಯೋಜನೆಯಡಿ ಆಟೋ, ಟ್ಯಾಕ್ಸಿ ಚಾಲಕರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಬೇಕು, ವೈಟ್ ಬೋರ್ಡ್ ವಾಹನದಲ್ಲಿ ಬಾಡಿಗೆ ಮಾಡುವುದಕ್ಕೆ ಅನುಮತಿ ನೀಡಬಾರದು, ಚಾಲಕರ ಮಕ್ಕಳಿಗೆ ವಿದ್ಯಾರ್ಥಿವೇತನ, ಓಲಾ, ಊಬರ್ ಆಪ್ ಆಧಾರಿತ ಸೇವೆಗಳ ನಿರ್ಬಂಧ, ಖಾಸಗಿ ಬಸ್​ಗಳಿಗೂ ಶಕ್ತಿ ಯೋಜನೆ ಅಡಿ ಸೇವೆಗೆ ಅವಕಾಶ, ಖಾಸಗಿ ವಾಹನಗಳನ್ನ ಕಿ.ಮೀ ಆಧಾರದಲ್ಲಿ ಸರ್ಕಾರ ಬಾಡಿಗೆಗೆ ಪಡೆಯುವುದು ಹಾಗೂ ನಿಯಮಬಾಹಿರವಾಗಿ ವಾಹನ ವಶಕ್ಕೆ ಪಡೆಯುವ ಫೈನಾನ್ಸ್ ಕಂಪನಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂಬ ಬೇಡಿಕೆಗಳನ್ನು ಒಕ್ಕೂಟ ಸರ್ಕಾರದ ಮುಂದಿಟ್ಟಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಲೇಜಿಗೆ ಹೋದವಳು ಎಂಟು ತಿಂಗಳ ನಂತರ ಪತ್ತೆ: ಆಧಾರ್‌ ಒಟಿಪಿ ಆಧರಿಸಿ ರಹಸ್ಯ ಭೇದಿಸಿದ ಸಿಐಡಿ

ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿ, ಸುಮಾರು ಎಂಟು ತಿಂಗಳುಗಳಿಂದ ನಿಗೂಢವಾಗಿ...

ಶಾಸಕ ಮುನಿರತ್ನ ಸೇರಿ 8 ಜನರ ವಿರುದ್ಧ ಎಫ್‌ಐಆರ್

ಮಹಿಳೆಯೊಬ್ಬರನ್ನು ಗುರಿಯಾಗಿಸಿಕೊಂಡು ಪಿತೂರಿ ನಡೆಸಿ, ಅವರ ವಿರುದ್ಧ ಸುಳ್ಳು ಎಫ್‌ಐಆ‌ರ್ ದಾಖಲಿಸಿ...

ಕೆಪಿಎಸ್‌ಸಿಯಲ್ಲಿ ಸಮಗ್ರ ಸುಧಾರಣೆ ತರಲು ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಆಗ್ರಹ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ನಿರಂತರವಾಗಿ ನಡೆಯುತ್ತಿರುವ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ,...

​‘ಪ್ರೊ. ಸಿ.ಎನ್.ಆರ್. ರಾವ್‌ಗೆ ನೋಟಿಸ್ ನೀಡಿಲ್ಲ’: ಚುನಾವಣಾ ಆಯೋಗ

ಭಾರತ ರತ್ನ ಪುರಸ್ಕೃತ, ಹಿರಿಯ ವಿಜ್ಞಾನಿ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ...