ಕಳ್ಳತನ ಮಾಡಿ 20 ಮಕ್ಕಳ ಶಾಲಾ, ಕಾಲೇಜು ಶುಲ್ಕ ಕಟ್ಟಿದ್ದ ಮನೆಗಳ್ಳನನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಬೇಗೂರು ನಿವಾಸಿ ಶಿವು ಅಲಿಯಾಸ್ ಶಿವರಪ್ಪನ್ ಈ ಕಳ್ಳತನದ ಪ್ರಮುಖ ರೂವಾರಿ. ಈತ ತಾನು ವಾಸಿಸುತ್ತಿದ್ದ ಸ್ಥಳದಲ್ಲಿ ತನ್ನ ಸ್ನೇಹಿತರು ಅವರ ಮಕ್ಕಳಿಗಾಗಿ ಶಾಲಾ, ಕಾಲೇಜು ಶುಲ್ಕ ಕಟ್ಟಲು ಪರದಾಡುತ್ತಿರುವುದನ್ನು ನೋಡಿದ್ದ.
ಬಳಿಕ ಬ್ಯಾಡರಹಳ್ಳಿ ಸೇರಿದಂತೆ ಹಲವೆಡೆ ಮನೆಗಳಿಗೆ ಕನ್ನ ಹಾಕಿ ಚಿನ್ನಾಭರಣವನ್ನು ದೋಚಿ ಸ್ನೇಹಿತರಾದ ಅನಿಲ್ ಮತ್ತು ವಿವೇಕ್ ಸಹಾಯದಿಂದ ಮಾರಾಟ ಮಾಡಿದ್ದಾನೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರು-ತುಮಕೂರು ಮೆಟ್ರೊ ಯೋಜನೆ ಯಾರಿಗಾಗಿ?
ತಮಿಳುನಾಡಿನಲ್ಲಿ 22 ಲಕ್ಷಕ್ಕೆ ಚಿನ್ನ ಮಾರಾಟ ಮಾಡಿಸಿದ್ದ ಶಿವು ಬಂದ ಹಣದಲ್ಲಿ ವಿವೇಕ್ಗೆ 4 ಲಕ್ಷ, ಅನಿಲ್ಗೆ 4 ಲಕ್ಷ ರೂ. ಮೌಲ್ಯದ ಆಟೋ ಕೊಡಿಸಿದ್ದ.
ಉಳಿದ 14 ಲಕ್ಷ ರೂ. ಹಣದಲ್ಲಿ ಪ್ರದೇಶದ 20 ಮಕ್ಕಳಿಗೆ ಶಾಲಾ ಹಾಗೂ ಕಾಲೇಜು ಶುಲ್ಕ ಕಟ್ಟಿದ್ದಾನೆ. ಮನೆಗಳ್ಳರ ಬೆನ್ನತ್ತಿದ್ದ ಬ್ಯಾಡರಹಳ್ಳಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಪೊಲೀಸರು 24 ಲಕ್ಷ ಮೌಲ್ಯದ 260 ಗ್ರಾಂ ಚಿನ್ನದ ಗಟ್ಟಿಯನ್ನು ವಶಪಡಿಸಿಕೊಂಡಿದ್ದಾರೆ.