ಆಟೋಗಳಿಗೆ ಸೂಕ್ತ ಪರ್ಮಿಟ್ ನೀಡದೆ ಸರ್ಕಾರವೇ ದಂಡವನ್ನು ವಿಧಿಸುತ್ತಿರುವುದು ಸರಿಯಲ್ಲ: ಎಎಪಿ

Date:

Advertisements

ಕೋವಿಡ್‌ ಅವಧಿಯ 2019 / 2020 ರ ಎರಡು ವರ್ಷಗಳಲ್ಲಿ ಪ್ರಪಂಚದಾದ್ಯಂತ ಲಕ್ಷಾಂತರ ಸಾವು ನೋವುಗಳಿಂದ ತತ್ತರಿಸಿದ ಸಂದರ್ಭದಲ್ಲಿ ಸಂಚಾರಕ್ಕೆ ಬಿಡುಗಡೆಯಾದ ಸಾವಿರಾರು ಬಿಎಸ್ 6 ( BS 6 ) ಆಟೋಗಳಿಗೆ ರಾಜ್ಯ ಸಾರಿಗೆ ಇಲಾಖೆಯವರು ಇದುವರೆವಿಗೂ ಪರ್ಮಿಟ್‌ಗಳನ್ನು ನೀಡಿಲ್ಲ. ಆದರೆ ಈಗ ಏಕಾಏಕಿ ಆಟೋಗಳಿಗೆ ಎಲ್ಲೆಂದರಲ್ಲಿ ದಂಡವನ್ನು ವಿಧಿಸಿ ಜಪ್ತಿ ಮಾಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಆಮ್ ಆದ್ಮಿ ಪಕ್ಷವು ಇಂದು ಬೆಂಗಳೂರಿನಲ್ಲಿ ಕರೆದಿದ್ದ ಸಾರಿಗೆ ಇಲಾಖೆಯ ಸಭೆಯಲ್ಲಿ ಸಚಿವ ರಾಮಲಿಂಗ ರೆಡ್ಡಿ ಅವರನ್ನು ಪ್ರಶ್ನಿಸಿದೆ.

ಸಭೆಯ ನಂತರ ರಾಜ್ಯ ಆಟೋ ಘಟಕದ ಅಧ್ಯಕ್ಷ ಆಯುಬ್ ಖಾನ್ ಮಾತನಾಡಿ “ಏಕಾಏಕಿ ಬಿಎಸ್ 7 ( BS 7) ಆಟೋಗಳನ್ನು ಮುಕ್ತ ಮಾರುಕಟ್ಟೆಗೆ ಬಿಡುಗಡೆ ಮಾಡಲು ಅವಕಾಶ ನೀಡಿದ್ದೆ ಇದಕ್ಕೆ ಪ್ರಮುಖ ಕಾರಣ. ಕೊರೋನಾ ಸಂದರ್ಭದಲ್ಲಿ ಯಾವುದೇ ಸಾಲ ಸೌಲಭ್ಯಗಳು ಸಿಗದಿದ್ದ ದುಸ್ಥಿತಿಯ ಕಾಲದಲ್ಲಿ ತಮ್ಮ ಜೀವನವನ್ನು ನಡೆಸಲು ಬಿಎಸ್ 6 ಆಟೋಗಳನ್ನು ಖರೀದಿಸಿದ್ದ ಬೆಂಗಳೂರಿನ ಸಾವಿರಾರು ಆಟೋ ಚಾಲಕರುಗಳು ಸಾರಿಗೆ ಇಲಾಖೆಯಿಂದ ಕೇವಲ ನೋಂದಣಿ ಮಾತ್ರ ಮಾಡಿಕೊಂಡು ಪರ್ಮಿಟ್ ಭಾಗ್ಯವಿಲ್ಲದೆ ಇದುವರೆಗೂ ಸಾರಿಗೆ ಕಚೇರಿಗಳಿಗೆ ಅಲೆಯುತ್ತಿದ್ದಾರೆ” ಎಂದರು

“ಆದರೆ ಈಗ ಏಕಾಏಕಿ ತಮ್ಮ ಸಾರಿಗೆ ಇಲಾಖೆಯ ಅಧಿಕಾರಿಗಳು ರಸ್ತೆಗಳಲ್ಲಿ ಅಲ್ಲಲ್ಲಿ ಪರ್ಮಿಟ್ ಇಲ್ಲದ ಕಾರಣ ಬಿಎಸ್ 6 ಆಟೋಗಳನ್ನು ಜಪ್ತಿ ಮಾಡಿ ದುಬಾರಿ ದಂಡಗಳನ್ನು ವಿಧಿಸುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂಬುದು ಪ್ರಶ್ನೆಯಾಗಿದೆ” ಎಂದು ಆಯುಬ್ ಖಾನ್ ಅವಲತ್ತುಕೊಂಡರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಎಂ.ಬಿ.ಪಾಟೀಲರ ಹೇಳಿಕೆ ಉದ್ಧಟತನದ ಪರಮಾವಧಿ

“ಈ ಕೂಡಲೇ ಬಿಎಸ್ 6 ಆಟೋಗಳಿಗೆ ಪರ್ಮಿಟ್ ಭಾಗ್ಯವನ್ನು ನೀಡಿ ಜಪ್ತಿ ಹಾಗೂ ಇನ್ನಿತರ ಕಾನೂನು ಕ್ರಮಗಳಿಂದ ಮುಕ್ತಗೊಳಿಸಬೇಕು. ಇದಲ್ಲದೆ ಬಡ ಆಟೋ ಚಾಲಕರುಗಳು ತಮ್ಮ ಯೂನಿಫಾರಂ, ಎಮಿಷನ್ ಸರ್ಟಿಫಿಕೇಟ್, ವಿಮೆಗಳನ್ನು ಮಾಡಿಸಿಕೊಳ್ಳಲು ವಾರಗಟ್ಟಲೆ ಕಂಪನಿಗಳ ಮುಂದೆ ಸರಣಿ ಸಾಲಿನಲ್ಲಿ ನಿಲ್ಲುವ ದುಸ್ಥಿತಿ ಬಂದಿದೆ. ಕಾರಣವನ್ನು ಕೇಳಿದರೆ ಸರ್ವರ್ ಡೌನ್ ಎಂದು ಹೇಳುತ್ತಿದ್ದಾರೆ. ಮೀಟರ್ ತಯಾರಿ ಮಾಡಿಕೊಳ್ಳಲು ಅಂಗಡಿಗಳ ಮುಂದೆ ಕನಿಷ್ಠ 5 ದಿವಸಗಳ ಕಾಲ ಕಾಯಬೇಕಿದೆ. ಅಲ್ಲಿಯ ತನಕ ಬಡ ಆಟೋ ಚಾಲಕರುಗಳು ಹಾಗೂ ಅವರ ಕುಟುಂಬದವರಿಗೆ ಉಪವಾಸವೇ ಗಟ್ಟಿಯಾಗಿದೆ”

“ಈಗಾಗಲೇ ಆಟೋ ಚಾಲಕರುಗಳು ತಮ್ಮ ಮಕ್ಕಳ ಶಾಲಾ ಶುಲ್ಕಗಳು, ಆರೋಗ್ಯ ವೆಚ್ಚಗಳು ಹಾಗೂ ಹಬ್ಬ ಹರಿದಿನಗಳ ಸಲುವಾಗಿ ತಮ್ಮಲ್ಲಿದ್ದ ಹಣವನ್ನು ಖರ್ಚು ಮಾಡಿಕೊಂಡು ಈಗ ಸಾಲಗಾರರ ಸುಳಿಗೆ ಸಿಲುಕುವಂತಹ ಪರಿಸ್ಥಿತಿಗೆ ತಳ್ಳಲ್ಪಟ್ಟಿದ್ದಾರೆ. ಆಟೋ ಚಾಲಕರುಗಳಿಗೆ ಪರ್ಮಿಟ್ ಸೇರಿದಂತೆ ಎಲ್ಲ ತಮ್ಮಲ್ಲಿನ ದಾಖಲಾತಿಗಳನ್ನು ಸರಿಪಡಿಸಿಕೊಳ್ಳಲು ಮೂರು ತಿಂಗಳುಗಳ ಕಾಲಾವಕಾಶವನ್ನು ನೀಡಿ ಬಡ ಆಟೋ ಚಾಲಕರ ಕುಟುಂಬ ನಿರ್ವಹಣೆಗೆ ಸರ್ಕಾರ ಈ ಮೂಲಕ ನೆರವಾಗಬೇಕು” ಎಂದು ಪಕ್ಷದ ಪರವಾಗಿ ಸಚಿವರಲ್ಲಿ ಮನವಿಯನ್ನು ಮಾಡಿಕೊಂಡರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ವತಿಯಿಂದ ಅ.2ರಿಂದ ರಾಜ್ಯಾದ್ಯಂತ ʼಅರಿವು-ಮಾನವೀಯತೆʼ ಜಾಗೃತಿ ಅಭಿಯಾನ

ಕರ್ನಾಟಕ ರಾಜ್ಯ ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ (GIO) ವತಿಯಿಂದ ಅ.2ರಿಂದ ರಾಜ್ಯಾದ್ಯಂತ...

ವಿಪ್ರೋ ಕ್ಯಾಂಪಸ್‌ ಮೂಲಕ ವಾಹನ ಸಂಚಾರಕ್ಕೆ ಅವಕಾಶ; ಸಿಎಂ ಮನವಿ ತಿರಸ್ಕರಿಸಿದ ಅಜೀಂ ಪ್ರೇಮ್‌ಜಿ

ಬೆಂಗಳೂರಿನ ಹೊರ ವರ್ತುಲ ರಸ್ತೆಯಲ್ಲಿ (ಒಆರ್‌ಆರ್‌) ಉಂಟಾಗುವ ತೀವ್ರ ಸಂಚಾರ ದಟ್ಟಣೆಯನ್ನು...

ಬೆಂಗಳೂರು | ಆರ್ಥಿಕ ಅಭಿವೃದ್ಧಿಗೆ ಸಹಕಾರ; ಕರ್ನಾಟಕ-ನ್ಯೂಜೆರ್ಸಿ ಒಪ್ಪಂದ: ಪ್ರಿಯಾಂಕ್‌ ಖರ್ಗೆ

ತಂತ್ರಜ್ಞಾನ, ನಾವೀನ್ಯತೆ ಮತ್ತು ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರವನ್ನು ಬಲಪಡಿಸಲು ಕರ್ನಾಟಕ ಸರ್ಕಾರ...

ಬೆಂಗಳೂರು | ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು: ಅಧಿಕಾರಿಗಳಿಗೆ ಡಿ ಎಸ್ ರಮೇಶ್ ಎಚ್ಚರಿಕೆ

ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಇಬ್ಬಲೂರು ಜಂಕ್ಷನ್‌ನಿಂದ ಟಿನ್ ಫ್ಯಾಕ್ಟರಿವರೆಗೆ...

Download Eedina App Android / iOS

X