ಬಿಜೆಪಿ ಶಾಸಕ ರಘು ಬೆಂಬಲಿಗರಿಂದ ಎಎಪಿ ಕಾರ್ಯಕರ್ತರ ಮೇಲೆ ಹಲ್ಲೆ; ದೂರು ದಾಖಲು

Date:

Advertisements
  • ಚುನಾವಣೆ ಪ್ರಚಾರದ ವೇಳೆ ಮನೋಜ್ ಕುಮಾರ್ ಮತ್ತು ಶಶಿಕುಮಾರ್ ಎಂಬುವವರಿಂದ ಹಲ್ಲೆ
  • ವಿಡಿಯೋ ಮಾಡುವ ವೇಳೆ, ಮೊಬೈಲ್‌ ಕಿತ್ತುಕೊಂಡು ಹಲ್ಲೆ ಮಾಡಲಾಗಿದೆ: ಎಎಪಿ ಆರೋಪ

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ರಂಗೇರಿದೆ. ಈ ಹಿನ್ನಲೆ, ಬೆಂಗಳೂರಿನ ಸರ್ ಸಿವಿ ರಾಮನ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಪ್ರಚಾರ ನಡೆಸುವ ವೇಳೆ ಅವರ ಮೇಲೆ ಬಿಜೆಪಿ ಶಾಸಕ ರಘು ಬೆಂಬಲಿಗರು ಹಲ್ಲೆ ಮಾಡಿದ್ದಾರೆ ಎಂದು ಎಎಪಿ ಆರೋಪಿಸಿದೆ.

ಕೋವಿಡ್ ಸಮಯದಲ್ಲಿ ನಿಮ್ಮ ಪಕ್ಷದಿಂದ ಏನ್ ಮಾಡಿದ್ದೀರಿ. ನಮಗೆ ನಮ್ಮ ಶಾಸಕರೇ ಸಾಕು. ನೀವು ಇಲ್ಲಿಗೆ ಬರುವ ಅವಶ್ಯಕತೆ ಇಲ್ಲ ಎಂದು ಪ್ರಚಾರದ ವೇಳೆ ಬಿಜೆಪಿ ಶಾಸಕ ರಘು ಬೆಂಬಲಿಗರು ಬಂದು ಅಡ್ಡಿಪಡಿಸಿದ್ದಾರೆ. ವಿಡಿಯೋ ಮಾಡುವ ವೇಳೆ, ಮೊಬೈಲ್‌ ಕಿತ್ತುಕೊಂಡು ಹಲ್ಲೆ ಮಾಡಲಾಗಿದೆ ಎಂದು ಆಪ್ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೇ 10ರಂದು ತಪ್ಪದೆ ಮತದಾನ ಮಾಡಲು ಐಟಿ-ಬಿಟಿ ಉದ್ಯೋಗಿಗಳಿಗೆ ಸಂಬಳ ಸಹಿತ ರಜೆ

Advertisements

ಈ ಸಂಬಂಧ ಆಮ್ ಆದ್ಮಿ ಪಕ್ಷದ ಸರ್ ಸಿವಿ ರಾಮನ್ ನಗರ ಅಭ್ಯರ್ಥಿ ಮೋಹನ್ ದಾಸರಿ ಪ್ರತಿಕ್ರಿಯಿಸಿದ್ದು, “ಸಿವಿ ರಾಮನ್ ನಗರದ ಸುದ್ದಗುಂಟೆಪಾಳ್ಯದಲ್ಲಿ ಚುನಾವಣೆ ಪ್ರಚಾರದ ವೇಳೆ ಮನೋಜ್ ಕುಮಾರ್ ಮತ್ತು ಶಶಿಕುಮಾರ್ ಎನ್ನುವವರು ನಮ್ಮ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಮೋಹನ್ ಮತ್ತು ನಾಗರಾಜ್ ಸಂಗಡಿಗರು ಬಿಜೆಪಿಗೆ ಸೇರಿದವರಾಗಿದ್ದು, ಪ್ರಚಾರ ಆರಂಭಕ್ಕೂ ಮೊದಲೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾರೆ. ಹಾಗೆ ನಮ್ಮ ಕಾರ್ಯಕರ್ತರು ವಿಡಿಯೋ ತೆಗೆಯಲು ಹೋದಾಗ ಮೊಬೈಲ್‌ ಕಿತ್ತುಕೊಂಡು ಹಲ್ಲೆ ಮಾಡಿದ್ದಾರೆ ಎಂದು ಬೈಯಪ್ಪನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

Download Eedina App Android / iOS

X