ಬಿಜೆಪಿ ಮುಖಂಡ ತಮ್ಮೇಶ್ ಗೌಡ ವಿರುದ್ಧ ಬೆದರಿಕೆ ಆರೋಪ: ದೂರು ದಾಖಲು

Date:

Advertisements

ಸೈಟ್‌ ವಿಚಾರವಾಗಿ ಫೋನ್ ಮಾಡಿ ಬೆದರಿಕೆ ಹಾಕಿದ ಆರೋಪದ ಮೇಲೆ ಬಿಜೆಪಿ ಮುಖಂಡ ತಮ್ಮೇಶ್ ಗೌಡ ವಿರುದ್ಧ ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಗುತ್ತಿಗೆದಾರ ದಯಾನಂದ್ ಕುಮಾರ್​ ಎಂಬುವವರು ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ ತಮ್ಮೇಶ್‌ ಗೌಡ ವಿರುದ್ಧ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

ದೂರಿನಲ್ಲೇನಿದೆ?

Advertisements

ಅಮೃತಹಳ್ಳಿಯ ದಾಸರಹಳ್ಳಿಯಲ್ಲಿ ಅಶ್ವಿನ್ ಎಂಬುವವರಿಗೆ ಸೇರಿದ ಸೈಟ್‌ ಇದ್ದು, ಈ ಸೈಟ್‌ ಸುತ್ತಮುತ್ತ ಕಾಂಪೌಂಡ್ ನಿರ್ಮಾಣ ಮಾಡಲು ಗುತ್ತಿಗೆದಾರ ದಯಾನಂದ ಎಂಬುವವರಿಗೆ ಸೈಟ್‌ ಮಾಲೀಕ ಅಶ್ವಿನ್ ಅವರು ಕಾಂಟ್ರ್ಯಾಕ್ಟ್‌ ನೀಡಿದ್ದರು.

ಅದರಂತೆ ದಯಾನಂದ ಅವರು ಕೆಲಸ ನಡೆಸುವಾಗ ಡಿ. 18ರಂದು ಸುಮಾರು 12 ಗಂಟೆಗೆ ಸೈಟ್ ಬಳಿ ಸತೀಶ್, ಚಂದ್ರಪ್ಪ ಹಾಗೂ ಸಹಚರರು ಬಂದು ಈ ಸೈಟ್‌ ನಮಗೆ ಸೇರಿದ್ದು ಇಲ್ಲಿ ಕಾಂಪೌಂಡ್ ನಿರ್ಮಾಣ ಮಾಡಬೇಡಿ ಎಂದು ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಿದ್ದಾರೆ.

“ಈ ಬಗ್ಗೆ ನನಗೆ ಏನು ತಿಳಿದಿಲ್ಲ ಸೈಟ್ ಮಾಲೀಕ ಅಶ್ವಿನ್ ಅವರ ಬಳಿ ಈ ಬಗ್ಗೆ ಮಾತಾಡಿಕೊಳ್ಳಿ ಎಂದು ತಿಳಿಸಿದ್ದೇನೆ. ಆದರೂ ಸತೀಶ್ ಎಂಬಾತ ಬಿಜೆಪಿ ಮುಖಂಡ ತಮ್ಮೇಶ್ ಗೌಡ ಅವರ ಮನೆಗೆ ಬರುವಂತೆ ತಿಳಿಸಿದ್ದಾರೆ. ಆದರೆ, ನಾನು ಅವರ ಮನೆಗೆ ತೆರಳಲು ನಿರಾಕರಿಸಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಿರಿಯ ನಟಿ ಹೇಮಾ ಚೌಧುರಿಗೆ ತೀವ್ರ ಅನಾರೋಗ್ಯ : ಐಸಿಯುನಲ್ಲಿ ಚಿಕಿತ್ಸೆ

“ಬಳಿಕ, ನನಗೆ ತಮ್ಮೇಶ್‌ ಗೌಡ ಕರೆ ಮಾಡಿ ಕಾಂಪೌಂಡ್ ಕೆಲಸ ನಿಲ್ಲಿಸಿ, ವಾಪಸ್ ಹೋಗುವಂತೆ ಬೆದರಿಕೆ, ಧಮ್ಕಿ ಹಾಕಿದ್ದಾರೆ. ಕಾಂಪೌಂಡ್ ನಿರ್ಮಿಸಿದರೆ ಕಾಂಪೌಂಡನ್ನೇ ಕೆಡವುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸದ್ಯ ಈ ಘಟನೆ ಸಂಬಂಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಮ್ಮೇಶ್​ ಗೌಡ ವಿರುದ್ಧ ಈ ಹಿಂದೆ ಕಳ್ಳತನ ಆರೋಪ ಕೇಳಿ ಬಂದಿತ್ತು. ಇದೀಗ ಬೆದರಿಕೆ, ಧಮ್ಕಿ ಹಾಕಿದ ಆರೋಪ ಕೇಳಿ ಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X