ಬೆಂಗಳೂರು| ವೈವಾಹಿಕ ಕಲಹ ಆರೋಪ; ಟೆಕ್ಕಿ ಆತ್ಮಹತ್ಯೆ

Date:

Advertisements

ಬೆಂಗಳೂರು ನಗರದ ಅಪಾರ್ಟ್‌ವೊಂದರಲ್ಲಿ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ವೈವಾಹಿಕ ಕಲಹದ ಕಾರಣದಿಂದಾಗಿ ಸಾವಿಗೆ ಶರಣಾಗಿರುವ ಆರೋಪ ಕೇಳಿಬಂದಿದೆ. 40 ವರ್ಷದ ಟೆಕ್ಕಿ ಮೃತಪಟ್ಟಿದ್ದು ಪೊಲೀಸರು ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿದ್ದಾರೆ.

ಮೃತ ಪ್ರಶಾಂತ್ ನಾಯರ್, ಲೆನೊವೊದಲ್ಲಿ ಹಿರಿಯ ಮಾರ್ಕೆಟಿಂಗ್ ವ್ಯವಸ್ಥಾಪಕರಾಗಿದ್ದರು. ಬೆಂಗಳೂರು ನಗರದ ಚಿಕ್ಕಬಾಣಾವರದಲ್ಲಿ ತನ್ನ ಪತ್ನಿ ಮತ್ತು ಎಂಟು ವರ್ಷದ ಮಗಳೊಂದಿಗೆ ವಾಸಿಸುತ್ತಿದ್ದರು. ಪತ್ನಿ ಪೂಜಾ ನಾಯರ್ ಡೆಲ್‌ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದಾರೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಟೆಕ್ಕಿ ಆತ್ಮಹತ್ಯೆ | ಅತುಲ್ ಸುಭಾಷ್ ಪತ್ನಿ, ಆಕೆಯ ತಾಯಿ, ಸಹೋದರನ ಬಂಧನ

Advertisements

ದಂಪತಿಗಳು ಆಗಾಗ್ಗೆ ಜಗಳವಾಡುತ್ತಿದ್ದರು. ಇತ್ತೀಚೆಗೆ ವಿಚ್ಛೇದನದ ನಿರ್ಧಾರ ಮಾಡಿದ್ದರು. ಆದರೆ ಕುಟುಂಬಸ್ಥರು ಜೊತೆಯಾಗಿರುವಂತೆ, ಮಾತನಾಡಿ ಮನಸ್ತಾಪ ಸರಿ ಮಾಡಿಕೊಳ್ಳುವಂತೆ ಒತ್ತಾಯಿಸುತ್ತಿದ್ದರು ಎಂದು ವರದಿಯಾಗಿದೆ.

ಭಾನುವಾರ ಪ್ರಶಾಂತ್‌ಗೆ ಪದೇ ಪದೇ ಕರೆ ಮಾಡಿದರೂ ಯಾವುದೇ ಸ್ಪಂದನೆ ಇರಲಿಲ್ಲ. ಆದ್ದರಿಂದಾಗಿ ತಂದೆ ಫ್ಲಾಟ್‌ಗೆ ತೆರಳಿದ್ದು, ಪ್ರಶಾಂತ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸ್ಥಳದಿಂದ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ಸೋಲದೇವನಹಳ್ಳಿ ಪೊಲೀಸರು ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಈ ವರ್ಷದ ಜನವರಿಯಲ್ಲಿ ಉತ್ತರ ಪ್ರದೇಶದ 34 ವರ್ಷದ ಟೆಕ್ಕಿ ಅತುಲ್ ಸುಭಾಷ್ ಬೆಂಗಳೂರಿನಲ್ಲಿ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. 24 ಪುಟಗಳ ಡೆತ್ ನೋಟ್ ಮತ್ತು ಒಂದುವರೆ ಗಂಟೆಯ ವಿಡಿಯೋ ರೆಕಾರ್ಡಿಂಗ್ ಮಾಡಿಟ್ಟು ಸಾವಿಗೆ ಶರಣಾಗಿದ್ದರು. ಪತ್ನಿ ವಿರುದ್ಧ ಕಿರುಕುಳದ ಆರೋಪ ಮಾಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X