“ಅಮಿತ್ ಶಾ ಕೇಡಿ, ಹಾಕಿರಿ ಅವನಿಗೆ ಬೇಡಿ” ; ದಸಂಸ ಆಕ್ರೋಶ

Date:

Advertisements

ವಿಶ್ವರತ್ನ, ಸಂವಿಧಾನ ಪಿತಾಮಹ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಅಪಮಾನಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಕೂಡಲೇ ಮಂತ್ರಿಗಿರಿಯಿಂದ ಕೆಳಗಿಳಿಸಬೇಕು. ಹಾಗೆಯೇ ಈ ದೇಶದಿಂದ ಅವರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮಂಗಳವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದೆ.

ಪ್ರತಿಭಟನೆ ವೇಳೆ, ‘ಅಮಿತ್ ಶಾ ಕೇಡಿ – ಹಾಕರಿ ಅವನಿಗೆ ಬೇಡಿ’ ಎಂಬಿತ್ಯಾದಿ ಘೋಷಣೆ ಕೂಗಿದ ಪ್ರತಿಭಟನಾಕಾರರು, ಅಮಿತ್ ಶಾ ಅವರ ಪ್ರತಿಕೃತಿ ಜತೆಗೆ ಮನುಸ್ಮೃತಿಯನ್ನು ಸುಟ್ಟು ಆಕ್ರೋಶ ಹೊರಹಾಕಿದರು. ಗೃಹ ಸಚಿವ ಸ್ಥಾನದಿಂದ ಅಮಿತಾ ಶಾ ಅವರನ್ನ ಕೂಡಲೇ ವಜಾಗೊಳಿಸಿ ಗಡಿಪಾರು ಮಾಡುವಂತೆ ಆಗ್ರಹಿಸಿ ಬೆಂಗಳೂರು ಜಿಲ್ಲಾಧಿಕಾರಿ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಈ ವೇಳೆ ಮಾತನಾಡಿದ ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಶಂಕರ ಮಾವಳ್ಳಿ, “ಕೇಂದ್ರ ಗೃಹಮಂತ್ರಿ ಅಮಿತ್ ಶಾ ಅವರು ಅಂಬೇಡ್ಕರ್ ಅವರನ್ನ ಅಪಮಾನಿಸಿದರ ವಿರುದ್ದ ಇಡೀ ದೇಶದಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಸಂಸತ್‌ನಲ್ಲಿ ಸಂವಿಧಾನ ಆಶಯಗಳ ಬಗ್ಗೆ ಮಾತನಾಡುವಾಗ ಅಮಿತ್ ಶಾ ವಿಷಪೂರಿತವಾದ ಮಾತುಗಳನ್ನಾಡಿದ್ದಾರೆ. ಅಮಿತ್ ಶಾ ಜೈಲಿಗೆ ಹೋಗಿ ಬಂದವರು. ಹಾಗೆಯೇ ಅವರನ್ನು ಗುಜರಾತ್ ಸರ್ಕಾರ ಗಡಿಪಾರು ಮಾಡಿತ್ತು. ಇಂತಹ ವ್ಯಕ್ತಿಯೇ ಇದೀಗ ದೇಶದ ಗೃಹ ಮಂತ್ರಿ ಆಗಿರುವುದು ನಿಜಕ್ಕೂ ದುರಂತ. ಪ್ರಧಾನಿಗೆ ನಿಜವಾಗಿ ಸಂವಿಧಾನದ ಬಗ್ಗೆ ಗೌರವ ಇದ್ದರೆ, ಈ ಕೂಡಲೇ ಅಮಿತ್ ಶಾ ಅವರನ್ನು ಸಂಪುಟದಿಂದ ವಜಾ ಮಾಡಬೇಕು” ಎಂದು ಆಗ್ರಹಿಸಿದರು.

Advertisements

ದಸಂಸ ಮುಖಂಡೆ ಚಂದ್ರಿಕಾ ಮಾತನಾಡಿ, “ಸಂವಿಧಾನವನ್ನ ಜಾರಿಗೆ ತಂದವರಿಗೆ ಈಗ ಬೆಲೆ ಕೊಡುತ್ತಿಲ್ಲ. ಕೆಂದ್ರದ ಗೃಹ ಮಂತ್ರಿಯಾಗಿ ಈ ರೀತಿ ಮಾತನಾಡುವುದು ಎಷ್ಟು ಸರಿ? ನಮಗೆ ಎಲ್ಲಿ ಹಕ್ಕಿದೆ ನ್ಯಾಯ ಎಲ್ಲಿದೆ ಎಂದು ಇಂಥವರಿಗೆ ಮತ ಹಾಕಿರುವ ನಾವು ಪ್ರಶ್ನೆ ಮಾಡಿಕೊಳ್ಳಬೇಕಿದೆ. ಅಮಿತ್ ಶಾಗೆ ಮಾನ, ಮರ್ಯಾದೆ ಇದ್ದರೆ ಈ ಕೂಡಲೇ ಅವರು ರಾಜೀನಾಮೆ ನೀಡಬೇಕು” ಎಂದು ಹೇಳಿದರು.

ದಸಂಸದಸಂಸ ರಾಜ್ಯ ಪ್ರಧಾನ ಸಂಚಾಲಕಿ ನಿರ್ಮಲಾ ಮಾತನಾಡಿ, “ನಮ್ಮ ಸಂವಿಧಾನ ಕರ್ತೃ ಅಂಬೇಡ್ಕರ್ ಅವರಿಗೆ ಅಪಮಾನಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನ ಈ ಕೂಡಲೇ ಮಂತ್ರಿಗಿರಿಯಿಂದ ವಜಾಗೊಳಿಸಬೇಕು. ದೇಶದ ಉನ್ನತ ಸ್ಥಾನದಲ್ಲಿರುವ ಅಮಿತ್ ಶಾ ಅಂಬೇಡ್ಕರ್ ಅವರ ಬಗ್ಗೆ ಸಂಸತ್ ಕಲಾಪದ ಸಮಯದಲ್ಲಿ ಈ ರೀತಿ ಮಾತಾಡಿರುವುದು ನಿಜಕ್ಕೂ ಖಂಡನೀಯ. ಅಮಿತ್ ಶಾಗೆ ತಲೆಲಿ ಕೂದಲು ಇಲ್ಲ ಅಂತ ಗೊತ್ತಿತ್ತು. ಆದರೆ, ಆತನ ತಲೆಯಲ್ಲಿ ಮಿದುಳು ಕೂಡ ಇಲ್ಲ. ಬುದ್ದಿ ಇಲ್ಲದ ಅಮಿತ್ ಶಾ” ಎಂದು ವ್ಯಂಗ್ಯವಾಡಿದರು.

ಈ ಸುದ್ದಿ ಓದಿದ್ದೀರಾ? ಅಮಿತ್ ಶಾ ಹೇಳಿಕೆ ಖಂಡಿಸಿ ದೇಶಾದ್ಯಂತ ಕಾಂಗ್ರೆಸ್‌ನಿಂದ ‘ಅಂಬೇಡ್ಕರ್ ಸಮ್ಮಾನ್ ಮಾರ್ಚ್’

“ಅಂಬೇಡ್ಕರ್ ಅನ್ನೋದು ಒಂದು ವ್ಯಸನ ಅಂತ ಮುಟ್ಟಾಳ ಅಮಿತ್ ಶಾ ಹೇಳುತ್ತಾನೆ. ಆತನಿಗೆ ಅಂಬೇಡ್ಕರ್ ಅವರ ಬಗ್ಗೆ, ಸಂವಿಧಾನದ ಬಗ್ಗೆ ಏನು ಗೊತ್ತಿದೆ? ಅಮಿತ್ ಶಾಗೆ ನಿಜಕ್ಕೂ ಮಾನ ಮರ್ಯಾದೆ ಇದ್ದರೆ, ದಲಿತರ ಮಲ ಮೂತ್ರದಿಂದ ತನ್ನ ನಾಲಿಗೆಯನ್ನು ಶುದ್ದ ಮಾಡಿಕೊಳ್ಳಲಿ. ಗೋ ಮೂತ್ರದಿಂದ ಅವರ ನಾಲಿಗೆ ಶುಚಿಯಾಗುವುದಿಲ್ಲ. ಕಲಾಪದಲ್ಲಿ ಹೆಣ್ಣಿನ ಬಗ್ಗೆ ನೀಚವಾಗಿ ಮಾತಾಡುತ್ತಾರೆ. ಇಡೀ ಪ್ರಪಂಚ ಈ ವಿಚಾರವಾಗಿ ರೊಚ್ಚಿಗೇಳಬೇಕು. ಇನ್ನೊಂದು ಬಾರಿ ಸಂವಿಧಾನದ ಬಗ್ಗೆ, ಅಂಬೇಡ್ಕರ್ ಅವರ ಬಗ್ಗೆ ಮಾತಾಡಿದರೆ, ಅವರಿಗೆ ಚಪ್ಪಲಿ ಹಾರ ಹಾಕುತ್ತೀವಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X