- ಜನ ವಿರೋಧಿ ನೀತಿಯನ್ನು ವಿರೋಧಿಸಿ ಜೂನ್ 9ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ
- ಕಾಂಗ್ರೆಸ್ಗೆ ನೀಡಿರುವ ಬಹುಮತ 40% ಕಮಿಷನ್, ಜನ ವಿರೋಧಿ ಬಿಜೆಪಿ ವಿರುದ್ಧ ನೀಡಿದ ಮತ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ತನ್ನ 5 ಗ್ಯಾರಂಟಿಗಳನ್ನು ನೇರವಾಗಿ ನೀಡದೆ ಅನೇಕ ಷರತ್ತು ವಿಧಿಸಿ ಜನರ ಕಿವಿಗಳಿಗೆ ಹೂವು ಮುಡಿಸುವ ಮೂಲಕ ಪರಮ ಅನ್ಯಾಯ, ಮೋಸ ಮಾಡಲಾಗುತ್ತಿದೆ ಎಂದು ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಮೋಹನ್ ದಾಸರಿ ಆಕ್ರೋಶವನ್ನು ವ್ಯಕ್ತಪಡಿಸಿದರು.
ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ದೆಹಲಿ ಮಾದರಿಯಲ್ಲಿ ಯಾವುದೇ ಷರತ್ತುಗಳಿಲ್ಲದೆ 200 ಯೂನಿಟ್ ವಿದ್ಯುತ್ ನೀಡಲಾಗದೆ ಅನೇಕ ಷರತ್ತುಗಳನ್ನು ವಿಧಿಸಿ ಬಡವರು ಬಡವರಾಗಿ ಇರುವಂತಹ ಗ್ಯಾರಂಟಿ ನೀಡಿದ್ದಾರೆ. ಕಾಂಗ್ರೆಸ್ನ ಈ ಜನ ವಿರೋಧಿ ನೀತಿಯನ್ನು ವಿರೋಧಿಸಿ ಜೂನ್ 9ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಚೆಂಡು ಹೂವು ಮುಡಿದುಕೊಂಡು ಸರ್ಕಾರದ ವಿರುದ್ಧ ವಿನೂತನ ಪ್ರತಿಭಟನೆಯನ್ನು ಮಾಡಲಿದ್ದಾರೆ ಎಂದು ಹೇಳಿದರು.
ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಮಾತನಾಡಿ, “ಕಾಂಗ್ರೆಸ್ಗೆ ನೀಡಿರುವ ಬಹುಮತ 40% ಕಮಿಷನ್ ಹಾಗೂ ಜನ ವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ನೀಡಿದ ಮತವೆ ಹೊರತು ಕಾಂಗ್ರೆಸ್ಗೆ ನೀಡಿರುವ ಮತವಲ್ಲ. ಈ ಹಿಂದಿನ ಅಧಿಕಾರಾವಧಿಯಲ್ಲಿ ಮಾಡಿದ್ದಂತಹ ಅನೇಕ ಭ್ರಷ್ಟಾಚಾರ ಪ್ರಕರಣಗಳು ಹಾಗೂ ಜನ ವಿರೋಧಿ ನೀತಿಯನ್ನು ಮತ್ತೊಮ್ಮೆ ಮುಂದುವರಿಸಿದಲ್ಲಿ ಜನತೆ ತಕ್ಕ ಪಾಠವನ್ನು ಕಲಿಸಿಕೊಡುತ್ತದೆ ಎಂದು ಎಚ್ಚರಿಸಿದರು.
ಈ ಸುದ್ದಿ ಓದಿದ್ದೀರಾ? ಬೆಳ್ಳಂದೂರು ಕೆರೆಯ ನೊರೆಗೆ ಕಾರಣ ಕಂಡುಹಿಡಿದ ಐಐಎಸ್ಸಿಯ ಸಂಶೋಧಕರು
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ರಾಜ್ಯವು ಈಗಾಗಲೇ ಎಲ್ಲವನ್ನೂ ನೀಡಿದೆ. ಇವರು ರಾಜ್ಯದ ಜನತೆಗೆ ಮರಳಿ ನೀಡಿ ಋಣವನ್ನು ತೀರಿಸಿಕೊಳ್ಳುವಂತಹ ಅವಕಾಶವಿರುವಾಗ ಪ್ರಾಮಾಣಿಕವಾಗಿ ಯೋಜನೆಗಳನ್ನು ಜಾರಿಗೊಳಿಸಿ ಎಂದು ಆಗ್ರಹಿಸಿದರು.