ಜೂ. 12ರಿಂದ 200 ರೋಗಿಗಳಿಗೆ ಉಚಿತ ಆಂಜಿಯೋಪ್ಲಾಸ್ಟಿ ಕಾರ್ಯಾಗಾರ: ಜಯದೇವ ಆಸ್ಪತ್ರೆ

Date:

  • ಆಸಕ್ತರು ಜೂನ್‌ 8ರೊಳಗೆ ಅವರ ಹೆಸರು ನೋಂದಾಯಿಸಿಕೊಳ್ಳಬೇಕು
  • ಜೂನ್‌ 12 ರಿಂದ 18ವರೆಗೆ ಜಯದೇವ ಆಸ್ಪತ್ರೆಯಲ್ಲಿ ಕಾರ್ಯಾಗಾರ

ಬಡತನ ರೇಖೆಗಿಂತ ಕೆಳಗಿರುವ ಹಾಗೂ ಹಣಕಾಸಿನ ಮುಗ್ಗಟ್ಟಿನಿಂದ ಚಿಕಿತ್ಸೆ ಮಾಡಿಸಿಕೊಳ್ಳಲು ನಿಸ್ಸಾಹಯಕವಾಗಿರುವ 200 ಮಂದಿ ಹಿರಿಯ ನಾಗರಿಕರಿಗೆ ಉಚಿತವಾಗಿ ಸ್ಟಂಟ್‌ ಅಳವಡಿಸುವ ಆಂಜಿಯೋಪ್ಲಾಸ್ಟಿ ಮಾಡಲಾಗುವುದು ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ತಿಳಿಸಿದೆ. ​

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ಅಮೆರಿಕದ ಮೆಡ್‌ಟ್ರಾನಿಕ್ಸ್, ವಿಸ್ಕಿನ್‌ಸನ್ ಸಂಸ್ಥೆ ಹಾಗೂ ಡಾ. ಗೋವಿಂದರಾಜು ಸುಬ್ರಮಣಿ ಹಾರ್ಟ್‌ ಫೌಂಡೇಶನ್ ಸಹಯೋಗದೊಂದಿಗೆ 200 ರೋಗಿಗಳಿಗೆ ಆಂಜಿಯೋಪ್ಲಾಸ್ಟಿ ಕಾರ್ಯಾಗಾರ ಮಾಡಲಾಗುವುದು ಎಂದು ಹೇಳಿದೆ.

ಈ ಕಾರ್ಯಗಾರವೂ ಜೂನ್‌ 12 ರಿಂದ 18ವರೆಗೆ ಜಯದೇವ ಆಸ್ಪತ್ರೆಯಲ್ಲಿ ನಡೆಯಲಿದ್ದು, ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಜೂನ್ 12 ರಿಂದ 14ರವರೆಗೆ, ಮೈಸೂರು ಶಾಖೆಯ ಜಯದೇವ ಆಸ್ಪತ್ರೆಯಲ್ಲಿ ಜೂನ್ 15 ರಿಂದ 16 ರವರೆಗೆ, ಕಲಬುರಗಿ ಶಾಖೆಯ ಜಯದೇವ ಆಸ್ಪತ್ರೆಯಲ್ಲಿ ಜೂನ್ 17 ರಿಂದ 18ರವರೆಗೆ ಕಾರ್ಯಾಗಾರ ನಡೆಯಲಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಬಡ ರೋಗಿಗಳು ಹಾಗೂ ಬಡತನ ರೇಖೆಗಿಂತ ಕೆಳಗಿರುವ ಹಿರಿಯರ ನಾಗರಿಕರಿಗೆ ಈ ಕಾರ್ಯಾಗಾರ ಆಯೋಜಿಸಲಾಗಿದೆ. ಪ್ರತಿ ರೋಗಿಗೂ ಉನ್ನತ ಮಟ್ಟದ ಮೆಡಿಕೇಟೆಡ್ ಸ್ಟಂಟ್‌ಗಳನ್ನು ಅಳವಡಿಸಲಾಗುವುದು. ಈಗಾಗಲೇ ಆ್ಯಂಜಿಯೋಗ್ರಾಂ ತಪಾಸಣೆಗೆ ಒಳಪಟ್ಟ ರೋಗಿಗಳು ಈ ಸೌಲಭ್ಯ ಪಡೆಯಬಹುದು. ರೋಗಿಗಳು ದಾಖಲಾತಿ ಸಂದರ್ಭದಲ್ಲಿ ಬಿಪಿಎಲ್‌ ಕಾರ್ಡ್‌ ಅಥವಾ ಆದಾಯ ಪ್ರಮಾಣ ಪತ್ರ ಹೊಂದಿರಬೇಕು” ಎಂದು ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್‌ ಮಂಜುನಾಥ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತರು ಜೂನ್‌ 8ರೊಳಗೆ ಅವರ ಹೆಸರು ನೋಂದಾಯಿಸಿಕೊಳ್ಳಬೇಕು. ಬೆಳಗ್ಗೆ 10 ಗಂಟೆಯಿಂದ ಸಂಜೆ 4ಗಂಟೆಯವರೆಗೆ ಸಮಯಾವಕಾಶ ಇರಲಿದೆ ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ₹2,000 ನೋಟು ವಾಪಸ್; ಹವಾಲಾ ದಂಧೆ ಹೆಚ್ಚುವ ಬಗ್ಗೆ ಪೊಲೀಸರ ಶಂಕೆ

ಹೆಸರು ದಾಖಲಾತಿಗಾಗಿ ಇಲ್ಲಿ ಸಂಪರ್ಕಿಸಿ

ನಿರ್ದೇಶಕರ ಕಚೇರಿ, ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಬನ್ನೇರುಘಟ್ಟ ರಸ್ತೆ, ಜಯನಗರ 9ನೇ ಬ್ಲಾಕ್ ಬೆಂಗಳೂರು.

ಬೆಂಗಳೂರು ಶಾಖೆ: ಮೊ. 9480827888, 080-26944874

ಮೈಸೂರು ಶಾಖೆ: 8660105492, 0821-2263255

ಕಲಬುರಗಿ ಶಾಖೆ: 9482114611, 08472-230511

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಲೋಕಸಭಾ ಚುನಾವಣೆ : ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್...

ಬೆಂಗಳೂರು | ರೈಲಿಗೆ ಸಿಲುಕಿ ಮೂವರು ಯುವಕರು ದುರ್ಮರಣ

ರೈಲಿಗೆ ಸಿಲುಕಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು...

ಲೋಕಸಭಾ ಚುನಾವಣೆ | ಏ.26ರಂದು ಸರ್ಕಾರಿ ಮತ್ತು ಖಾಸಗಿ ಬಸ್‌ಗಳ ಸಂಚಾರ ವ್ಯತ್ಯಯ ಸಾಧ್ಯತೆ

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಈ...

ಲೋಕಸಭಾ ಚುನಾವಣೆ | ಏಪ್ರಿಲ್ 26 ರಂದು ನಮ್ಮ ಮೆಟ್ರೋ ಸೇವೆ ವಿಸ್ತರಣೆ

ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 26ರಂದು ನಮ್ಮ ಮೆಟ್ರೋ ಸೇವೆ ವಿಸ್ತರಣೆ...