‘ಎಕ್ಸ್‌’ ಖಾತೆಯಲ್ಲಿ ಇಂಧನ ಸಚಿವ ಜಾರ್ಜ್‌ ವಿರುದ್ಧ ದುರುದ್ದೇಶಪೂರಿತ ಪೋಸ್ಟ್‌ ಮಾಡಿದವನ ಬಂಧನ

Date:

Advertisements

ತೆಲಂಗಾಣ ವಿಧಾನಸಭೆ ಚುನಾವಣೆ ವೇಳೆ ಕರ್ನಾಟಕದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ವಿರುದ್ಧ ‘ಎಕ್ಸ್’ ಖಾತೆಯಲ್ಲಿ ದುರುದ್ದೇಶ ಪೂರಿತ ಪೋಸ್ಟ್‌ ಮಾಡಿದ್ದ ಭಾರತ್‌ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪಾರ್ಟಿಯ ಐಟಿ ಸೆಲ್‌ ಉದ್ಯೋಗಿಯನ್ನು ಶಿವಾಜಿನಗರ ಪೊಲೀಸ್ ಠಾಣೆಯ ಸೈಬರ್, ಆರ್ಥಿಕ ಅಪರಾಧಗಳು ಮತ್ತು ನಾರ್ಕೋಟಿಕ್ಸ್ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣ ಸಂಬಂಧ ಬಿಆರ್‌ಸ್ ಪಕ್ಷದ ಸಕ್ರಿಯ ಕಾರ್ಯಕರ್ತ, ಪಕ್ಷದ ಐಟಿ ಸೆಲ್‌ ಉದ್ಯೋಗಿ ಕರೀಂನಗರ ನಿವಾಸಿ ರವಿಕಾಂತಿ ಶರ್ಮಾ (33)ನನ್ನು ಶಿವಾಜಿನಗರ ಪೊಲೀಸರು ಬುಧವಾರ ಬಂಧಿಸಿದ್ದರು. ಆತನ ತಂದೆ, ತಾಯಿ ಕೂಡ ಬಿಆರ್‌ಎಸ್ ಪಕ್ಷದ ಮಾಜಿ ಕಾರ್ಪೋರೇಟರ್‌ಗಳು ಎಂದು ಶಿವಾಜಿನಗರ ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕದ ವಿದ್ಯುತ್ ಪರಿಸ್ಥಿತಿ ಮತ್ತು ಗೃಹ ಜ್ಯೋತಿ ಯೋಜನೆಯ ಅನುಷ್ಠಾನದ ಕುರಿತು ಆರೋಪಿಯು ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ನಲ್ಲಿ ಇಂಧನ ಸಚಿವರ ನಕಲಿ ಆಡಿಯೊ ಕ್ಲಿಪ್ ಪ್ರಸಾರ ಮಾಡಿದ್ದನು. ಈ ಬಗ್ಗೆ ‘ಎಕ್ಸ್’ನ ಕಾನೂನು ಜಾರಿ ವಿಭಾಗದಿಂದ ಮಾಹಿತಿ ಪಡೆದು ಪೊಲೀಸರು ತನಿಖೆಯನ್ನು ಆರಂಭಿಸಿದ್ದರು. ‘ಎಕ್ಸ್‌’ ಖಾತೆಗೆ ಬಳಸಲಾದ ಮೊಬೈಲ್ ಸಂಖ್ಯೆ ರವಿಕಾಂತಿ ಶರ್ಮಾ ಅವರ ತಂದೆಯ ಹೆಸರಿನಲ್ಲಿದೆ ಎಂದು ತಿಳಿದುಬಂದಿದೆ.

Advertisements

ಈ ಸುದ್ದಿ ಓದಿದ್ದೀರಾ? ಕೇರಳ ತಕರಾರು ಅರ್ಜಿ ವಜಾ : ‘ಕೆ‌ಎಸ್‌ಆರ್‌ಟಿಸಿ’ ಬಳಕೆಗೆ ಯಾವುದೇ ಅಭ್ಯಂತರವಿಲ್ಲ ಎಂದ ಮದ್ರಾಸ್ ಹೈಕೋರ್ಟ್‌

@TelaguScribe ಎಂಬ ‘ಎಕ್ಸ್‌’ ಖಾತೆಯಲ್ಲಿ ಇಂಧನ ಸಚಿವರ ವಿರುದ್ಧ ದುರುದ್ದೇಶಪೂರಿತ ವೀಡೀಯೋ ಪೋಸ್ಟ್‌ ಮಾಡಿದ್ದವರ ವಿರುದ್ಧ ಬೆಸ್ಕಾಂ ಜನರಲ್ ಮ್ಯಾನೇಜರ್ ಶಿವಾಜಿನಗರ ಸೈಬರ್ ಪೊಲೀಸ್ ಠಾಣೆಗೆ ನವೆಂಬರ್ 28ರಂದು ದೂರು ಸಲ್ಲಿಸಿದ್ದರು.

ಶಿವಾಜಿನಗರ ಸೈಬರ್ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಎಸ್.ಎಂ. ಉಮೇಶ್ ಕುಮಾರ್ ಮತ್ತು ತಂಡದವರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನಂತರ ಜಾಮೀನಿನ ಮೇಲೆ ಆರೋಪಿಯನ್ನು ಬಿಡುಗಡೆ ಮಾಡಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X