- ಪೊಲೀಸರ ಕೃತ್ಯಕ್ಕೆ ಬೇಸತ್ತು ಟ್ವೀಟರ್ನಲ್ಲಿ ಪೊಲೀಸ್ ಆಯುಕ್ತರಿಗೆ ದಯಾಮರಣ ಕೋರಿ ಪತ್ರ
- ಅತಿಯಾದ ನೋವಿನಿಂದ ಬಳಲುತ್ತಿರುವ ವ್ಯಕ್ತಿಯ ಇಚ್ಛೆಯ ಅನುಸಾರ ನೀಡುವ ಸಾವು
ಆಟೋ ಚಾಲಕನೊಬ್ಬನ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಸೂಕ್ತವಾಗಿ ತನಿಖೆ ಮಾಡದೆ ದೋಷಾರೋಪಣ ಪಟ್ಟಿ ಸಲ್ಲಿಸಿರುವ ಹಿನ್ನೆಲೆ, ದಯಾಮರಣ ಕೋರಿ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ಆಟೋ ಚಾಲಕ ಹರ್ಷ ಎಂಬುವವರು ಪೊಲೀಸರ ಕೃತ್ಯಕ್ಕೆ ಬೇಸತ್ತು ಟ್ವೀಟರ್ನಲ್ಲಿ ಪೊಲೀಸ್ ಆಯುಕ್ತರಿಗೆ ದಯಾಮರಣ ಕೋರಿ ಪತ್ರ ಬರೆದಿದ್ದಾನೆ.
ಏನಿದು ಘಟನೆ?
ಕಳೆದ ವರ್ಷ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಹರ್ಷ ಅವರ ವಿರುದ್ಧ ಅವರ ಪತ್ನಿ ವರದಕ್ಷಿಣೆ ಕಿರುಕುಳದಡಿ ಹರ್ಷ ಹಾಗೂ ಅವರ ತಾಯಿಯ ವಿರುದ್ಧ ದೂರು ದಾಖಲಿಸಿದ್ದರು.
ಆದರೆ, ಮಹಿಳಾ ಠಾಣೆಯ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಿಯಾಗಿ ತನಿಖೆ ಕೈಗೊಂಡಿಲ್ಲ. ಸೂಕ್ತವಾಗಿ ತನಿಖೆ ಮಾಡದೇ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ನನ್ನ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ ಎಂಬ ಬಗ್ಗೆ ಸಾಕ್ಷಿ ಇದೆ. ಬಡ್ಡಿಗೆ ಸಾಲ ಪಡೆದು ಪೊಲೀಸ್ ಕಚೇರಿಗೆ ಅಲೆದಾಡುತ್ತಿದ್ದೇನೆ. ನನ್ನ ಮೇಲೆ ನೀಡಿರುವ ದೂರನ್ನು ಮರು ತನಿಖೆ ಮಾಡಲು ಆದೇಶ ನೀಡಿ ಇಲ್ಲದಿದ್ದರೆ, ದಯಾಮರಣ ನೀಡಿ ಎಂದು ಆಟೋ ಚಾಲಕ ಹರ್ಷ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾನೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಚಲ್ಕೆರೆ ಕೆರೆಯಲ್ಲಿ ಮೀನುಗಳ ಮಾರಣಹೋಮ
ದಯಾಮರಣ ಎಂದರೇನು?
ಅತಿಯಾದ ನೋವಿನಿಂದ ಬಳಲುತ್ತಿರುವ ವ್ಯಕ್ತಿಯ ಇಚ್ಛೆಯ ಅನುಸಾರ ನೀಡುವ ಸಾವು. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ವ್ಯಕ್ತಿ ಇನ್ನು ಸಹಿಸಿಕೊಳ್ಳುವುದು ಸಾಧ್ಯವೇ ಇಲ್ಲ ಎನ್ನುವಂತಹ ಸಂದರ್ಭದಲ್ಲಿ ತನಗೆ ಮರಣದ ದಯೆಯನ್ನು ನೀಡಿ ಎಂದು ಅರ್ಜಿ ಸಲ್ಲಿಸುತ್ತಾರೆ. ಕಾನೂನಿನ ಅಡಿಯಲ್ಲಿ ಸಾವನ್ನು ಕರುಣಿಸಲಾಗುತ್ತದೆ.