ಬೆಂಗಳೂರು | ವರ್ಷಾಂತ್ಯಕ್ಕೆ ರಸ್ತೆಗಿಳಿಯಲಿವೆ 1,900 ಬಿಎಂಟಿಸಿ ಬಸ್‌ಗಳು

Date:

Advertisements
  • 1900 ಬಸ್‌ಗಳ ಪೈಕಿ 921 ಎಲೆಕ್ಟ್ರಿಕ್ ಬಸ್‌
  • ಅಧಿಕೃತ ನೋಂದಣಿ ಬಳಿಕ ಸಾರ್ವಜನಿಕ ಸೇವೆಗೆ ಬಸ್‌

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಈ ವರ್ಷದ ಅಂತ್ಯದ ವೇಳೆಗೆ ಸುಮಾರು 1,900 ಬಸ್‌ಗಳನ್ನು ರಸ್ತೆಗೆ ಇಳಿಸಲು ನಿರ್ಧರಿಸಿದೆ.

1900 ಬಸ್‌ಗಳ ಪೈಕಿ 921 ಎಲೆಕ್ಟ್ರಿಕ್ ಬಸ್‌ಗಳಾಗಿವೆ. ಪ್ರತಿ ತಿಂಗಳು 100 ಬಸ್‌ಗಳಂತೆ ಬಿಎಂಟಿಸಿಗೆ ಸೇರ್ಪಡೆಯಾಗಲಿವೆ. ಜುಲೈ ಅಂತ್ಯದ ವೇಳೆಗೆ ನೂರು ಹೊಸ ಬಸ್‌ಗಳು ನಗರದ ರಸ್ತೆಗೆ ಇಳಿಯಲಿವೆ.

ಈಗಾಗಲೇ ಟಾಟಾ ಮೋಟರ್ಸ್‌ ಸಬ್ಸಿಡರಿ ಸಂಸ್ಥೆಯಾದ ಟಿಎಂಎಲ್‌ ಸ್ಮಾರ್ಟ್‌ ಮೊಬಿಲಿಟಿ ಸಲ್ಯೂಷನ್ ಸಂಸ್ಥೆಯು 921 ಬಸ್‌ಗಳನ್ನು ಬಿಎಂಟಿಸಿಗೆ ನೀಡುವ ಗುತ್ತಿಗೆ ತೆಗೆದುಕೊಂಡಿದೆ.

Advertisements

921 ಬಸ್‌ಗಳ ಪೈಕಿ ಈಗಾಗಲೇ 1 ಬಸ್‌ ಬಿಎಂಟಿಸಿ ಬಳಿಯಿದೆ. ಇನ್ನೂ ಅಧಿಕೃತ ನೋಂದಣಿ ಕಾರ್ಯ ಮುಗಿದ ಬಳಿಕ ಈ ಬಸ್‌ಗಳು ಸಾರ್ವಜನಿಕ ಸೇವೆಗೆ ಲಭ್ಯವಾಗಲಿವೆ.

“ಇ-ಬಸ್‌ಗಳನ್ನು ಪ್ರತಿ ಕಿಲೋಮೀಟರ್‌ಗೆ ₹41 ವೆಚ್ಚದಲ್ಲಿ ಖರೀದಿಸಲಾಗಿದೆ. ಕಂಪನಿಯಿಂದ ಚಾಲಕರ ಜೊತೆಗೆ ಬಸ್‌ಗಳನ್ನು ಬಾಡಿಗೆಗೆ ತೆಗೆದುಕೊಳ್ಳುತ್ತಿದೆ. ಚಾಲಕರು ಮತ್ತು ಬಸ್‌ಗಳ ನಿರ್ವಹಣೆ ಗುತ್ತಿಗೆದಾರರ ಜವಾಬ್ದಾರಿಯಾಗಿದೆ. ಬಿಎಂಟಿಸಿ ಮಾರ್ಗಗಳನ್ನು ನೋಡಿಕೊಳ್ಳುತ್ತದೆ ಹಾಗೂ ನಿರ್ವಾಹಕರನ್ನು ಒದಗಿಸುತ್ತದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಿಸಿಬಿ ದಾಳಿ ಬಳಿಕ ಇ-ಸಿಗರೇಟ್ ಮಾರಾಟ ಮಳಿಗೆಗೆ ಸೀಲ್

“ಈ ಬಸ್‌ಗಳು ಪ್ರಯಾಣಿಕರಿಗೆ ಉತ್ತಮ ಅನುಭವ ನೀಡಲಿವೆ. ನೆಲ ಮಟ್ಟದಿಂದ ಸ್ವಲ್ಪ ಮೇಲೆ ಈ ಬಸ್‌ಗಳು ಇರಲಿದ್ದು, ಬಸ್‌ನ ಅಡಿ ದ್ವಿಚಕ್ರ ವಾಹನ ಸವಾರರು ಸೇರಿದಂತೆ ಪಾದಚಾರಿಗಳು ಸಿಲುಕಲು ಸಾಧ್ಯವಿಲ್ಲ. ಅಂಗವಿಕಲರು ಸೇರಿದಂತೆ ಪ್ರಯಾಣಿಕರು ಆರಾಮವಾಗಿ ಬಸ್‌ ಹತ್ತಿ ಇಳಿಯಬಹುದು” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X