- ಮೆಜೆಸ್ಟಿಕ್ನಲ್ಲಿರುವ ಸಿಟಿ ಸೆಂಟರ್ಗೆ ದಾಳಿ ನಡೆಸಿದ ವಿಚಕ್ಷಣಾ ದಳ
- ಅಕ್ರಮವಾಗಿ ಪತ್ತೆಯಾದ ಹಣವನ್ನು ಜಪ್ತಿ ಮಾಡಿದ ಅಧಿಕಾರಿಗಳು
ವಿಧಾನಸಭಾ ಚುನಾವಣೆ ಹಿನ್ನಲೆ, ಚುನಾವಣಾ ಅಧಿಕಾರಿಗಳು ಅಕ್ರಮವಾಗಿ ಹಣ ವರ್ಗಾವಣೆ ಮಾಡುತ್ತಿರುವವರಿಗೆ ಬಲೆ ಬೀಸಿದ್ದು, ಇದೀಗ ಬೆಂಗಳೂರಿನ ಮೆಜೆಸ್ಟಿಕ್ನಲ್ಲಿ ವಿಚಕ್ಷಣಾ ದಳ ದಾಳಿ ನಡೆಸಿ, ₹5.22 ಲಕ್ಷ ಹಣವನ್ನು ಜಪ್ತಿ ಮಾಡಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ, ಚುನಾವಣಾಧಿಕಾರಿಗಳು ರಾಜ್ಯದಲ್ಲಿ ಅಲ್ಲಲ್ಲಿ ದಾಳಿ ನಡೆಸಿ ದಾಖಲೆ ಇಲ್ಲದ ಹಣ, ವಸ್ತುಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ.
ಬೆಂಗಳೂರಿನ ಮೆಜೆಸ್ಟಿಕ್ನಲ್ಲಿರುವ ಸಿಟಿ ಸೆಂಟರ್ಗೆ ದಾಳಿ ನಡೆಸಿದ ವಿಚಕ್ಷಣಾ ದಳ ಶಾಪ್ವೊಂದರಲ್ಲಿ ಅಕ್ರಮವಾಗಿ ಪತ್ತೆಯಾದ ಹಣವನ್ನು ಜಪ್ತಿ ಮಾಡಿದ್ದಾರೆ. ದಾಖಲೆ ಇಲ್ಲದೇ ಇರುವುದು ತಿಳಿದುಬಂದ ಹಿನ್ನೆಲೆ ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು ಹಾಗೂ ಮೈಸೂರಿನ ಹಲವೆಡೆ ಐಟಿ ದಾಳಿ: ₹15 ಕೋಟಿ ವಶ
2023ರ ವಿಧಾನಸಭಾ ಚುನಾವಣೆ ಹಿನ್ನೆಲೆ, ರಾಜ್ಯದಲ್ಲಿ ಮತದಾರರಿಗೆ ಹಂಚಲು ತೆಗೆದುಕೊಂಡು ಹೋಗುತ್ತಿರುವ ಹಣ, ಚಿನ್ನಾಭರಣ, ಕುಕ್ಕರ್ ಸೇರಿದಂತೆ ಗೃಹ ಬಳಕೆಯ ಸಾಮಗ್ರಿಗಳನ್ನು ಅಧಿಕಾರಿಗಳು ವಶಪಡಿಸಿಕೊಳ್ಳುತ್ತಿದ್ದಾರೆ.