ಮೇಡಹಳ್ಳಿಯಲ್ಲಿ ಅಗ್ನಿ ಅವಘಡ : ಚಿಕಿತ್ಸೆ ಫಲಿಸದೆ 7 ಕಾರ್ಮಿಕರು ಸಾವು

Date:

  • ಮೇಡಹಳ್ಳಿ ಗ್ರಾಮದ ಮನೆಯೊಂದರಲ್ಲಿ ಮಾ. 26 ರಂದು ಅಗ್ನಿ ಅವಘಡ ಸಂಭವಿಸಿತ್ತು
  • ಹಾನಿಗೊಳಗಾದ ಪೈಪ್‌ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿದೆ

ಮಾರ್ಚ್ 26 ರಂದು ಹೊಸಕೋಟೆ ಸಮೀಪದ ಮೇಡಹಳ್ಳಿ ಗ್ರಾಮದ ಮನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಅವಘಡದಲ್ಲಿ ಸಿಲುಕಿದ ಎಂಟು ಕಾರ್ಮಿಕರ ಪೈಕಿ ಏಳು ಕಾರ್ಮಿಕರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಓರ್ವ ಕಾರ್ಮಿಕನ ಸ್ಥಿತಿ ಗಂಭೀರವಾಗಿದೆ.

- Advertisement -

ಸನೋಜ್ ಶರ್ಮಾ ಅಕಾ ಸನೋದ್, ಅಮಿತ್ ಕುಮಾರ್ ಮಂಡಲ್, ಚಂದ್ರಪಾಲ್, ತಿಲಕ್ ರಾಮ್, ನೀರಜ್ ಭಾರತಿ, ಲಕ್ಷ್ಮಣ ಮತ್ತು ಸುಮಯಾ ಗುಪ್ತಾ ಅಲಿಯಾಸ್ ಸುಮಯ್ ಮೃತರಾದ ಕಾರ್ಮಿಕರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಎಂಟು ಕಾರ್ಮಿಕರ ಪೈಕಿ ಏಳು ಜನ ಶುಕ್ರವಾರದವರೆಗೆ ಒಬ್ಬರ ನಂತರ ಒಬ್ಬರು ಸಾವನ್ನಪ್ಪಿದ್ದಾರೆ. ಎಂಟನೇ ವ್ಯಕ್ತಿ ನಿಕುನ್ ಅನ್ಸಾರಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಎಂಟು ಜನ ಕಾರ್ಮಿಕರು ಉತ್ತರ ಪ್ರದೇಶ, ಬಿಹಾರ ಸೇರಿದಂತೆ ನಾನಾ ರಾಜ್ಯಗಳಿಂದ ಬೆಂಗಳೂರಿಗೆ ಕೆಲಸಕ್ಕೆಂದು ಬಂದವರು. ಮೇಡಹಳ್ಳಿ ಗ್ರಾಮದ ಕೊಠಡಿಯೊಂದರಲ್ಲಿ ನೆಲೆಸಿದ್ದರು. ಇವರು ಕಟ್ಟಡ ಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿದ್ದು, ಇವರನ್ನು ಗುತ್ತಿಗೆದಾರ ಅರವಿಂದ್ ಗುಪ್ತಾ ಅವರು ಕೆಲಸಕ್ಕೆ ನೇಮಿಸಿಕೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಐಪಿಎಲ್ ಪಂದ್ಯ : ರಾತ್ರಿ 1ರವರೆಗೆ ಮೆಟ್ರೊ ಅವಧಿ ವಿಸ್ತರಣೆ

ಕೊಠಡಿಯಲ್ಲಿ ಇರಿಸಿದ್ದ ಹಾನಿಗೊಳಗಾದ ಸಿಲಿಂಡರ್‌ನ ಪೈಪ್‌ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿದೆ. ಅಪಘಾತವಾದ ದಿನ ಬೆಳಗ್ಗೆ 3.55ರ ಸುಮಾರಿಗೆ ಎಲ್ಲ ಎಂಟು ಮಂದಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿತ್ತು ಎಂದು ಬೆಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಲದಂಡಿ ತಿಳಿಸಿದ್ದಾರೆ.

“ಗುತ್ತಿಗೆದಾರ ಗುಪ್ತಾನನ್ನು ಬಂಧಿಸಿದ್ದೇವೆ. ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ಅನೇಕ ಕಾರ್ಮಿಕರನ್ನು ಸಣ್ಣ ಕೋಣೆಯಲ್ಲಿ ಉಳಿಯಲು ಅನುಮತಿಸಿದ ಕಟ್ಟಡದ ಮಾಲೀಕ ಭಾಸ್ಕರ್ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕೂಲಿ ಕಾರ್ಮಿಕರೊಬ್ಬರು ಕೊಠಡಿಯಲ್ಲಿ ಸಿಗರೇಟ್ ಅಥವಾ ಬೀಡಿ ಹಚ್ಚಿರಬಹುದು ಎಂದು ಅನುಗೊಂಡನಹಳ್ಳಿ ಪೊಲೀಸರು ಶಂಕಿಸಿದ್ದಾರೆ.

ಫೋರೆನ್ಸಿಕ್ ಸೈನ್ಸ್ ಲ್ಯಾಬೋರೇಟರಿ (ಎಫ್‌ಎಸ್‌ಎಲ್) ಹಾಗೂ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು, ಅಪಘಾತದ ನಿಖರವಾದ ಕಾರಣದ ಬಗ್ಗೆ ವರದಿ ಸಲ್ಲಿಸಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...

ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಕೋಮು ಸೌಹಾರ್ದತೆಗೆ ಕನ್ನಡಿ: ಕಗ್ಗಲೀಪುರದಲ್ಲಿ ಮಹಿಳೆಯರಿಗೆ ಬಾಗಿನ ಅರ್ಪಿಸಿದ ಮುಸ್ಲಿಂ ದಂಪತಿ

ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರದಲ್ಲಿ ಮುಸ್ಲಿಂ...