ಬೆಂಗಳೂರು | ಮಸೀದಿಯಲ್ಲಿ ಮಲಗಲು ಜಾಗ ನೀಡಿಲ್ಲವೆಂದು ಹುಸಿ ಬಾಂಬ್‌ ಕರೆ; ಬಿಎಸ್‌ಸಿ ಪದವೀಧರ ಬಂಧನ

Date:

  • ಬಿಎಸ್‌ಸಿ ಪದವಿಧರನಾಗಿದ್ದ ಆರೋಪಿ, ಉದ್ಯೋಗವಿಲ್ಲದೆ ಮಸೀದಿ ಬಳಿ ಚಂದಾ ಎತ್ತುತ್ತಿದ್ದ
  • ಬಸ್‌ ದೇವನಹಳ್ಳಿ ದಾಟುತ್ತಿದ್ದಂತೆ 112ಗೆ ಕರೆ ಮಾಡಿ ಬಾಂಬ್‌ ಇದೆ ಎಂದ ಆರೋಪಿ

ಮಸೀದಿಯಲ್ಲಿ ಮಲಗಲು ಜಾಗ ನೀಡಲಿಲ್ಲವೆಂಬ ಕೋಪಕ್ಕೆ ಬಾಂಬ್‌ ಇದೆ ಎಂದು ಹುಸಿ ಕರೆ ಮಾಡಿದ್ದ ನಿರುದ್ಯೋಗಿ ಬಿಎಸ್‌ಸಿ ಪದವೀಧರನನ್ನು ಬೆಂಗಳೂರಿನ ಶಿವಾಜಿನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

- Advertisement -

ಮಹಾರಾಷ್ಟ್ರ ಮೂಲದ ಸೈಯದ್​ ಮಹಮ್ಮದ್ ಅನ್ವರ್​(37) ಬಂಧಿತ ಆರೋಪಿ. ಆತ ಬಿಎಸ್‌ಸಿ ಪದವಿಧರನಾಗಿದ್ದಾರೆ. ಆದರೆ, ಉದ್ಯೋಗ ಸಿಕ್ಕಿರಲಿಲ್ಲ. ಹಾಗಾಗಿ, ಊರೂರು ಸುತ್ತಿ ​ಮಸೀದಿಗಳ ಬಳಿ ಚಂದಾ ಕೇಳುತ್ತಿದ್ದನು. ಬಂದ ಹಣದಲ್ಲೇ ಜೀವನ ಸಾಗಿಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ಸೈಯದ್‌ ಜುಲೈ 4ರಂದು ಬೆಂಗಳೂರಿಗೆ ಬಂದಿದ್ದನು. ಇತನು ಬೆಂಗಳೂರಿನ ಶಿವಾಜಿನಗರದ ರಸೆಲ್ ಮಾರ್ಕೆಟ್ ಹಿಂದಿರುವ ಆಜಾಂ ಮಸೀದಿ ಬಳಿ ಮದರಸಾ ಹೆಸರಿನಲ್ಲಿ ಚಂದಾ ಕೇಳುತ್ತಿದ್ದನು. ಇನ್ನೂ ರಾತ್ರಿ ವೇಳೆ ಮಸೀದಿಯಲ್ಲಿ ಮಲಗಲು ಅನುಮತಿ ಕೇಳಿದಾಗ ಮಸೀದಿ ಸಿಬ್ಬಂದಿ ಇಲ್ಲಿ ಮಲಗಲು ಅವಕಾಶವಿಲ್ಲ ಎಂದಿದ್ದಾರೆ.

ಸೈಯದ್‌ ಇದರಿಂದ ಬೇಸರಗೊಂಡು ಮೆಜೆಸ್ಟಿಕ್‌ನಿಂದ ಕರ್ನೂಲ್‌ ಬಸ್‌ ಹತ್ತಿದ್ದಾನೆ. ಈ ಬಸ್‌ ದೇವನಹಳ್ಳಿ ದಾಟುತ್ತಿದ್ದಂತೆ 112ಗೆ ಕರೆ ಮಾಡಿ ಆಜಾಂ ಮಸೀದಿಯಲ್ಲಿ ಬಾಂಬ್‌ ಇಟ್ಟಿದ್ದಾರೆಂದು ಹುಸಿ ಕರೆ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜ್ಯದ ಹಲವೆಡೆ ಭಾರೀ ಮಳೆ : ಜನಜೀವನ ಅಸ್ತವ್ಯಸ್ತ

ಬಳಿಕ, ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲಿಸಿದಾಗ ಮಸೀದಿಯಲ್ಲಿ ಬಾಂಬ್​ ಇರಲಿಲ್ಲ. ಬಳಿಕ ಇದು ಹುಸಿ ಬಾಂಬ್​ ಕರೆ ಎಂದು ಅರಿತ ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆಂಧ್ರಕ್ಕೆ ತೆರಳಿದ್ದ ಆರೋಪಿ ಸೈಯದ್​ನನ್ನು ಶಿವಾಜಿನಗರ ಪೊಲೀಸರು ಕರ್ನೂಲ್​ನಿಂದ ತೆಲಂಗಾಣದ ಮೆಹಬೂಬ್​ ನಗರಕ್ಕೆ ತೆರಳಿದ್ದಾಗ ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...

ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಕೋಮು ಸೌಹಾರ್ದತೆಗೆ ಕನ್ನಡಿ: ಕಗ್ಗಲೀಪುರದಲ್ಲಿ ಮಹಿಳೆಯರಿಗೆ ಬಾಗಿನ ಅರ್ಪಿಸಿದ ಮುಸ್ಲಿಂ ದಂಪತಿ

ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರದಲ್ಲಿ ಮುಸ್ಲಿಂ...