ಬೆಂಗಳೂರು | ಸ್ಯಾಂಕಿ ರಸ್ತೆಯಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ 70 ಜನರ ವಿರುದ್ಧ ಪ್ರಕರಣ ದಾಖಲು

Date:

Advertisements
  • ಅಕ್ರಮ ಬಂಧನ, ಕಾನೂನುಬಾಹಿರ ಸಭೆ, ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಪಡಿಸಲಾಗಿದೆ ಎಂದು ನೋಟಿಸ್
  • ಮೆರವಣಿಗೆಯಲ್ಲಿ ಭಾಗಿಯಾದವರ ಮೇಲೆ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು

ಬೆಂಗಳೂರಿನ ಹೃದಯ ಭಾಗದಲ್ಲಿರುವ ಸ್ಯಾಂಕಿ ರಸ್ತೆಯಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಧರಣಿ ನಡೆಸಿದ್ದ 70 ನಾಗರಿಕರ ವಿರುದ್ಧ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಈ ಕ್ರಮಕ್ಕೆ ನಾಗರಿಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಫೆ. 19ರಂದು, ಸ್ಥಳೀಯ ನಾಗರಿಕರು ಪ್ರತಿಭಟನೆಯ ಭಾಗವಾಗಿ ಸಂಚಾರಕ್ಕೆ ಅಡೆತಡೆಯಿಲ್ಲದೆ ಫುಟ್‌ಪಾತ್‌ನಲ್ಲಿ ಮೆರವಣಿಗೆ ನಡೆಸಿ, ಪ್ರತಿಭಟಿಸಿದ್ದರು. ಪ್ರತಿಭಟನಾ ಮೆರವಣಿಗೆಯ ಬಳಿಕ ಸದಾಶಿವನಗರ ಠಾಣೆ ಪೊಲೀಸರು 70 ಸ್ಥಳೀಯ ನಾಗರಿಕರ ವಿರುದ್ಧ ಪ್ರಕರಣ ದಾಖಲಿಸಿ, ಅವರಲ್ಲಿ ಒಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ.

ಮೆರವಣಿಗೆಯಲ್ಲಿ ಭಾಗಿಯಾದವರ ಮೇಲೆ ಐಪಿಸಿಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಆರೋಪಗಳನ್ನು ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್‌‌ 341, 141, 149 ಮತ್ತು 283 ಸೆಕ್ಷನ್‌ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಾನೂನುಬಾಹಿರ ಸಭೆ ಮತ್ತು ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಪಡಿಸಲಾಗಿದೆ ಎಂದು ನೋಟಿಸ್ ನೀಡಲಾಗಿದೆ.

“ಸಾರ್ವಜನಿಕ ಮಾರ್ಗಕ್ಕೆ ಯಾವುದೇ ಅಡ್ಡಿ ಮಾಡಿಲ್ಲ. ಕಾನೂನುಬಾಹಿರ ಸಭೆ ನಡೆಸಿಲ್ಲ. ಪ್ರತಿಭಟನೆಯನ್ನು ಶಾಂತಿಯುತವಾಗಿ ನಡೆಸಲಾಗಿದೆ. ಈ ಬಗ್ಗೆ ವಿಡಿಯೋ ದಾಖಲೆಗಳು ನಮ್ಮ ಬಳಿ ಇವೆ” ಎಂದು ಸ್ಯಾಂಕಿ ಕೆರೆ ತಂಡ ಟ್ವೀಟ್‌ ಮಾಡಿದೆ.

Advertisements
Bose Military School

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಾಜಕಾಲುವೆ ಒತ್ತುವರಿ ಮಾಡಿದ್ದ ಬಿಲ್ಡರ್‌ಗೆ ₹85 ಲಕ್ಷ ದಂಡ ವಿಧಿಸಿದ ಎನ್‌ಜಿಟಿ

“ಈ ಸುಳ್ಳು ಆರೋಪಗಳಿಗೆ ನಾವು ಹೆದರುವುದಿಲ್ಲ. ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಮಾಡಿದಂತೆಯೇ, ನಮ್ಮ ಪರಿಸರ ಮತ್ತು ಮಕ್ಕಳ ಆರೋಗ್ಯಕ್ಕಾಗಿ ಅನ್ಯಾಯದ ವಿರುದ್ಧ ಕೆಚ್ಚೆದೆಯ ನಿಲುವು ತೆಗೆದುಕೊಳ್ಳಲು ಇನ್ನೂ ಹೆಚ್ಚಿನ ಭಾರತೀಯರ ಅಗತ್ಯವಿದೆ”ಎಂದು ಅವಿಜಿತ್ ಮೈಕೆಲ್ ಹೇಳಿದರು.

“ನಿಸರ್ಗ ಮತ್ತು ಬೆಂಗಳೂರಿನ ನಾಗರಿಕರ ಆರೋಗ್ಯ ಮತ್ತು ನಮ್ಮ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ಹೊಂದಿರುವ ಕಾನೂನು ಪಾಲಿಸುವ ನಾಗರಿಕ. ನನ್ನ ವಿರುದ್ಧ ಹೊರಿಸಲಾದ ಯಾವುದೇ ಆರೋಪಗಳನ್ನು ನಾನು ಸ್ವೀಕರಿಸುವುದಿಲ್ಲ. ಏಕೆಂದರೆ ಅವುಗಳಿಗೆ ಯಾವುದೇ ಅರ್ಹತೆ ಇಲ್ಲ” ಎಂದರು.

“ಮುಖ್ಯಮಂತ್ರಿ ಬೊಮ್ಮಾಯಿ ಅವರೇ ನೀವು ಪರಿಸರವನ್ನು ರಕ್ಷಿಸುವುದಿಲ್ಲ, ಕಾನೂನನ್ನು ಅನುಸರಿಸುವುದಿಲ್ಲ. ನಾಗರಿಕರು ಇದನ್ನು ಮಾಡಲು ಮುಂದಾದಾಗ, ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸುತ್ತೀರಿ” ಎಂದು ವಕೀಲ್ ವಿನಯ್ ಕೂರಗಾಯಲ ಶ್ರೀನಿವಾಸ ಟ್ವೀಟ್‌ ಮಾಡಿದ್ದಾರೆ.

ಈ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಶಾಂತಿಯುತ ಪ್ರತಿಭಟನಾಕಾರರಿಗೆ ಪೊಲೀಸರು ಬೆದರಿಕೆ ಮತ್ತು ಕಿರುಕುಳ ನೀಡಿದ್ದಾರೆ ಎಂದು ಹಲವರು ಆರೋಪಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements
Advertisements
Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇವನಹಳ್ಳಿ ರೈತ ಹೋರಾಟ: ಜುಲೈ 4ರಂದು ಬೃಹತ್ ‘ನಾಡ ಉಳಿಸಿ ಸಮಾವೇಶ’

ದೇವನಹಳ್ಳಿ ರೈತರ ಭೂಮಿ ಸ್ವಾಧೀನ ಕೈಬಿಡುವಂತೆ ಒತ್ತಾಯಿಸಿ ಜುಲೈ 4ರಂದು ಬೆಂಗಳೂರಿನ...

ಬೈಕ್‌ ಟ್ಯಾಕ್ಸಿ ಚಾಲಕರಿಗೆ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ನಿರಾಕರಣೆ; ಆಕ್ರೋಶ

ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಿದ್ದ ಬೈಕ್ ಟ್ಯಾಕ್ಸಿ ವೆಲ್​ಫೇರ್​ ಅಸೋಸಿಯೇಷನ್...

ದುಪ್ಪಟ್ಟು ಹಣ ಕೀಳುವ ಆಟೋ ಚಾಲಕರ ಪರ್ಮಿಟ್‌ ರದ್ದಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ನಿಗದಿ ಪಡಿಸಿದ ದರಕ್ಕಿಂತ ಅಧಿಕ ದರ ವಸೂಲಿ ಮಾಡುತ್ತಿರುವ ಹಾಗೂ ಬಾಡಿಗೆಗೆ...

ಹೊಸ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್ ಕಡ್ಡಾಯ: ಏನಿದು, ಬೆಲೆ ಎಷ್ಟು, ಪ್ರಯೋಜನವೇನು?

ಬೆಸ್ಕಾಂ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿ ಜುಲೈ 1ರಿಂದ ಹೊಸ ಮತ್ತು ತಾತ್ಕಾಲಿಕ...

Download Eedina App Android / iOS

X