- ದಂಪತಿ ಆತ್ಮಹತ್ಯೆ ದಾಖಲಿಸಿ, ತನಿಖೆ ಕೈಗೊಂಡ ಪೊಲೀಸರು
- ಕೌಟುಂಬಿಕ ಕಲಹದಿಂದ ಆತ್ಮಹತ್ಯೆ, ತುಮಕೂರು ಮೂಲದವರು
ಬೆಂಗಳೂರಿನಲ್ಲಿ ಕೌಟುಂಬಿಕ ಕಲಹದ ಕಾರಣಕ್ಕಾಗಿ ಗಂಡ-ಹೆಂಡತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಪೀಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಚೊಕ್ಕಸಂದ್ರದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಜಗದೀಶ (37), ನಂದಿನಿ (40) ಆತ್ಮಹತ್ಯೆಗೆ ಶರಣಾದ ದಂಪತಿ.
ದಂಪತಿ ತುಮಕೂರು ಮೂಲದವರಾಗಿದ್ದು, ಮೂರು ವರ್ಷದ ಹಿಂದೆ ವಿವಾಹವಾಗಿದ್ದರು. ಇಬ್ಬರು ನಗರದ ಪೀಣ್ಯ ಚೊಕ್ಕಸಂದ್ರದ ಮನೆಯೊಂದರಲ್ಲಿ ವಾಸವಾಗಿದ್ದರು. ಜಗದೀಶ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದು, ನಂದಿನಿ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಶಬ್ದ ಕಡಿಮೆ ಮಾಡಿ ಎಂದಿದ್ದಕ್ಕೆ ಹಲ್ಲೆ : ಗಾಯಾಳು ಸಾವಿನ ನಂತರ ಆರೋಪಿಗಳ ಬಂಧನ
“ಕೌಟುಂಬಿಕ ಕಲಹದ ಕಾರಣ ದಂಪತಿ ಗುರುವಾರ ಸಂಜೆ 4 ಗಂಟೆಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಪೀಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿ, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ” ಎಂದು ಪೊಲೀಸ್ ಮೂಲಗಳು ತಿಳಿಸಿವೆ.