ಬೆಂಗಳೂರು | ಮಾರತ್ತಹಳ್ಳಿ ಬ್ರಿಡ್ಜ್ ಸಮೀಪ ಮೂರಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೇಲಿಂದ ಮೇಲೆ ಅಗ್ನಿ ಅವಘಡಗಳು ಸಂಭವಿಸುತ್ತಿದ್ದು, ಇದೀಗ ಮಾರತ್ತಹಳ್ಳಿ ಬ್ರಿಡ್ಜ್ ಸಮೀಪ ಮೂರಂತಸ್ತಿನ ಕಟ್ಟಡದಲ್ಲಿ ಸೋಮವಾರ ರಾತ್ರಿ 11.45ರ ಸುಮಾರಿಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ.

ಮಾರತ್ತಹಳ್ಳಿ ಬ್ರಿಡ್ಜ್ ಸಮೀಪ ಮೂರಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಲೂಯಿಸ್ ಫಿಲಿಪ್ ಬಟ್ಟೆ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಪಕ್ಕದ ಅಂಗಡಿಗಳು, ಕಟ್ಟಡದ ಮುಂದೆ ಇದ್ದ ತೆಂಗಿನ ಮರ, ಟ್ರಾನ್ಸ್​ಫಾರ್ಮರ್​​​ಗೆ ಹರಡಿದೆ. ಅಷ್ಟೇ ಅಲ್ಲದೇ ಪಕ್ಕದ ಕಟ್ಟಡಕ್ಕೂ ಬೆಂಕಿ ಆವರಿಸಿ ಮೂರ್ನಾಲ್ಕು ಅಂಗಡಿಗೂ ತಗುಲಿದೆ.

ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಐದಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು. ಸುಮಾರು ಎರಡೂವರೆ ಗಂಟೆ ಕಾರ್ಯಾಚರಣೆ ಬಳಿಕ ಬೆಂಕಿ ನಂದಿಸಿದ್ದಾರೆ.

Advertisements

ಅಗ್ನಿ ಅವಘಡ ಸಂಭವಿಸಿದ ವೇಳೆ ಕಟ್ಟಡದಲ್ಲಿದ್ದ ನಾಲ್ವರು ಪಕ್ಕದ ಕಟ್ಟಡಕ್ಕೆ ಹಾರಿದ್ದು, ಒಬ್ಬನನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಓರ್ವ ಅಗ್ನಿಶಾಮಕ ಸಿಬ್ಬಂದಿಗೆ ಗಾಯವಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರಿಯಕರನಿಂದ ಭ್ರೂಣ ಹತ್ಯೆ: ದೂರು ದಾಖಲಿಸಿದ ಯುವತಿ

ಬೆಂಕಿಯ ಕೆನ್ನಾಲಿಗೆಗೆ ಕಟ್ಟಡದಲ್ಲಿದ್ದ ಬಟ್ಟೆ ಅಂಗಡಿ ಸುಟ್ಟು ಕರಕಲಾಗಿ ಅಪಾರ ಮೌಲ್ಯದ ಬಟ್ಟೆ, ವಸ್ತುಗಳು ಬೆಂಕಿಗಾಹುತಿಯಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

ಬೆಂಕಿ ಅವಘಡಕ್ಕೆ ಸೂಕ್ತ ಕಾರಣ ತಿಳಿದುಬಂದಿಲ್ಲ. ಅಂಗಡಿ ಪಕ್ಕದಲ್ಲೇ ಇದ್ದ ಟ್ರಾನ್ಸ್​​ಫಾರ್ಮರ್ ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಬಿಎಂಟಿಸಿ ಬಸ್‌ ಚಾಲಕರಿಗೆ ಹೊಸ ನಿಯಮ: 2 ಬಾರಿ ಅಪಘಾತವೆಸಗಿದರೆ ಕೆಲಸದಿಂದ ವಜಾ

ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು...

Download Eedina App Android / iOS

X