ಬೆಂಗಳೂರು | ಕೆಐಎನಲ್ಲಿ ಚರಂಡಿ ಸ್ವಚ್ಛಗೊಳಿಸುತ್ತಿದ್ದ ಕಾರ್ಮಿಕ ಸಾವು

Date:

  • ಪಿಎಸ್‌ಎನ್ ಗ್ರೀನ್ ಕಂಪನಿಯಲ್ಲಿ ದಿನಗೂಲಿ ಕಾರ್ಮಿಕರಾಗಿದ್ದ ರಾಜೇಂದ್ರ ಸಿಂಗ್
  • ಅಧಿಕಾರಿಗಳ ನಿರ್ಲಕ್ಷವೇ ಕಾರ್ಮಿಕನ ಸಾವಿಗೆ ಕಾರಣ ; ದೂರು ದಾಖಲಿಸಿದ ಮಗ

ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಜೋರು ಮಳೆಯಾಗುತ್ತಿದ್ದು, ನಗರದಲ್ಲಿ 20ಕ್ಕೂ ಹೆಚ್ಚು ಮನೆಗಳಿಗೆ ಚರಂಡಿ ನೀರು ನುಗ್ಗಿದೆ. ಇಬ್ಬರು ಸಾವಿನ್ನಪ್ಪಿದ್ದಾರೆ. ಈ ಬೆನ್ನಲ್ಲೇ, ಕೆಂಪೇಗೌಡ ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್ (ಕೆಐಎ) ಆವರಣದಲ್ಲಿರುವ ಚರಂಡಿ ಸ್ವಚ್ಛಗೊಳಿಸುತ್ತಿದ್ದ 52 ವರ್ಷದ ಕಾರ್ಮಿಕನೊಬ್ಬ ಸಾವನ್ನಪ್ಪಿದ್ದಾರೆ.

ರಾಜೇಂದ್ರ ಸಿಂಗ್ ಮೃತ ದುರ್ದೈವಿ. ಇವರು ಮೂಲತಃ ಮಧ್ಯಪ್ರದೇಶದ ಮಂಡ್ಲಾದವರು. “ರಾಜೇಂದ್ರ ಸಿಂಗ್‌ಗೆ ಯಾವುದೇ ಸುರಕ್ಷತಾ ಕ್ರಮಗಳನ್ನು ಒದಗಿಸದ ಕಾರಣ ಅವರು ಚರಂಡಿಗೆ ಬಿದ್ದು ಸಾವನ್ನಪ್ಪಿದ್ದಾರೆ” ಎಂದು ಕೆಐಎಎಲ್ ಪೊಲೀಸ್‌ ಠಾಣೆಗೆ ರಾಜೇಂದ್ರ ಸಿಂಗ್‌ ಮಗ ರವೀಂದ್ರ ಸಿಂಗ್ ದೂರು ನೀಡಿದ್ದಾರೆ.

ರಾಜೇಂದ್ರ ಸಿಂಗ್ ಮತ್ತು ರವೀಂದ್ರ ಸಿಂಗ್ ಇಬ್ಬರು ಪಿಎಸ್‌ಎನ್ ಗ್ರೀನ್ ಎಂಬ ಕಂಪನಿಯಲ್ಲಿ ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಕಂಪನಿಯು ಇವರಿಬ್ಬರಿಗೆ ನಾನಾ ಸ್ಥಳಗಳಲ್ಲಿ ಕೆಲಸ ನಿಯೋಜಿಸುತ್ತಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರವೀಂದ್ರ, ಅವರ ತಂದೆ ಮತ್ತು ಇತರ ಕೆಲವರನ್ನು ವಿಮಾನ ನಿಲ್ದಾಣದ ಆವರಣದಲ್ಲಿರುವ ಚರಂಡಿ ಸ್ವಚ್ಛಗೊಳಿಸಲು ನಿಯೋಜಿಸಲಾಗಿತ್ತು. ಈ ಹಿನ್ನೆಲೆ, ತಂದೆ-ಮಗ ಮೇ 16 ರಂದು ಬೆಂಗಳೂರಿಗೆ ಬಂದಿದ್ದರು.

ಮೇ 19 ರಂದು ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಕೆಐಎಯ ಕಾರ್ಗೋ ರಸ್ತೆಯಲ್ಲಿರುವ ಬ್ರಾವೋ-1 ಮುಂಭಾಗದ ಚರಂಡಿ-8 ರಿಂದ ಮಣ್ಣು ಮತ್ತು ಮರದ ಎಲೆಗಗಳನ್ನು ತೆರವುಗೊಳಿಸಲು ಅವರಿಗೆ ಹೇಳಲಾಗಿತ್ತು. ಮಧ್ಯಾಹ್ನ 2.30ರ ಸುಮಾರಿಗೆ ರಾಜೇಂದ್ರ ಸಿಂಗ್ ಚರಂಡಿ ಒಳಗೆ ಇಳಿದಿದ್ದರು. ಮೇಲೆ ಬರಲಾಗದೆ ಸಹಾಯಕ್ಕಾಗಿ ಕಿರುಚಿಕೊಂಡಿದ್ದರು. ಈ ವೇಳೆ, ಮಗ ರವೀಂದ್ರ ತಂದೆಯ ಸಹಾಯಕ್ಕೆ ಧಾವಿಸಿ ಬಂದು ತಂದೆಯನ್ನು ಹೊರಗೆ ತೆಗೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೇ 24ರಂದು ವಿದ್ಯುತ್ ವ್ಯತ್ಯಯ; ಎಲ್ಲೆಲ್ಲಿ, ಇಲ್ಲಿದೆ ನೋಡಿ

ರಾಜೇಂದ್ರ ಅವರನ್ನು ಇತರ ಕಾರ್ಮಿಕರ ಸಹಾಯದಿಂದ ಮೈಲನಹಳ್ಳಿಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅವರಿಗೆ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ದೇವನಹಳ್ಳಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದರು.

ರವೀಂದ್ರ ಅವರ ದೂರಿನ ಆಧಾರದ ಮೇಲೆ ಕೆಐಎಎಲ್ ಪೊಲೀಸರು ಪಿಎಸ್‌ಎನ್ ಗ್ರೀನ್‌ನ ಎಂಡಿ ಪಿ.ಎಸ್ ನಾಯ್ಡು ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯವೇ ಕಾರ್ಮಿಕನ ಸಾವಿಗೆ ಕಾರಣ ಎಂದು ಪ್ರಕರಣದ ತನಿಖೆ ಕೈಗೆತ್ತಿಕೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಜೋಡಿ ಕೊಲೆ | ವಿವಾಹೇತರ ಸಂಬಂಧವೇ ಕೊಲೆಗೆ ಕಾರಣ?

ಬೆಂಗಳೂರಿನ ಸಾರಕ್ಕಿ ಪಾರ್ಕ್‌ನಲ್ಲಿ ನಡೆದಿದ್ದ ಜೋಡಿ ಕೊಲೆಗೆ ಸಂಬಂಧ ಕೆಲವು ಮಾಹಿತಿಗಳು...

ಬೆಂಗಳೂರು | ಹಾಡಹಗಲೇ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು...

ಬೆಂಗಳೂರು |ತಲಾ ₹1 ಲಕ್ಷ ದಂಡ ಬಾಕಿ ಉಳಿಸಿಕೊಂಡಿವೆ 123 ವಾಹನಗಳು

ಹಲವು ಬಾರಿ ಸಂಚಾರ ನಿಯಮ ಉಲ್ಲಂಘಿಸಿ, ಹೆಚ್ಚು ದಂಡಕ್ಕೆ ಗುರಿಯಾಗಿರುವ ವಾಹನಗಳನ್ನು...

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಡೀ ದಿನ ಕಳೆದೆ ಎಂದು ಸುಳ್ಳು ಹೇಳಿದ ಯೂಟ್ಯೂಬರ್‌ ಬಂಧನ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರವೇಶಿಸಿ ವಿಡಿಯೋ ರೆಕಾರ್ಡ್ ಮಾಡಿ...