ಬೆಂಗಳೂರು | ಮಾಲೀಕರ ಮನೆಗೆ ಕನ್ನ ಹಾಕಿದ ಲಿವಿಂಗ್ ಟುಗೆದರ್ ಜೋಡಿ

Date:

Advertisements
  • ನಗರದ ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ
  • ಕಳೆದ ನಾಲ್ಕು ತಿಂಗಳಿನಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಜೋಡಿ

ರಾಜಧಾನಿ ಬೆಂಗಳೂರಿನ ಎಜಿಎಸ್ ಲೇಔಟ್​​​ನಲ್ಲಿ ಸಹಜೀವನ ನಡೆಸುತ್ತಿದ್ದ ಜೋಡಿ ಬಾಡಿಗೆ ಮನೆಯಲ್ಲಿ ವಾಸವಾಗಿತ್ತು. ಈ ಜೋಡಿ ಮನೆಯ ಮಾಲೀಕರ ಮನೆಯಲ್ಲೇ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.

ನಗರದ ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸದ್ಯ ಪೊಲೀಸರು ಆರೋಪಿಗಳಾದ ಲಿಖಿತ ಹಾಗೂ ಸುಮಂತ ಎಂಬುವವರನ್ನು ಬಂಧಿಸಿದ್ದಾರೆ.

ಏನಿದು ಘಟನೆ?

Advertisements

ಬೆಂಗಳೂರಿನ ಎಜಿಎಸ್‌ ಲೇಔಟ್‌ನ ಪ್ರೇಮಲತ ಎಂಬುವವರ ಮನೆಯಲ್ಲಿ ಲಿಖಿತ ಹಾಗೂ ಸಮಂತ ಕಳೆದ ನಾಲ್ಕು ತಿಂಗಳಿನಿಂದ ಬಾಡಿಗೆಯ ಮನೆಯಲ್ಲಿದ್ದರು. ಈ ಇಬ್ಬರು ನಾಲ್ಕು ತಿಂಗಳು ಮನೆ ಮಾಲೀಕರ ಚಲನ-ವಲನ ಗಮನಿಸಿದ್ದರು.

ಸಹಜೀವನ ನಡೆಸುತ್ತಿದ್ದ ಈ ಜೋಡಿ ಇತ್ತೀಚೆಗೆ ಮನೆ ಖಾಲಿ ಮಾಡಿತ್ತು. ಇವರು ಮನೆ ಖಾಲಿ ಮಾಡಿದ ಕೆಲವೇ ದಿನಗಳಲ್ಲಿ ಮಾಲೀಕರ ಮನೆಯಲ್ಲಿ ಕಳ್ಳತನವಾಗಿದೆ. ಬಂಧಿತ ಆರೋಪಿಗಳು 4 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಕದ್ದ ಚಿನ್ನವನ್ನು ಮಾರಿ ಬಂದ ಹಣದಲ್ಲಿ ಶಿವಮೊಗ್ಗದಲ್ಲಿ ನೆಲೆಸಿದ್ದರು. ಈ ದುಡ್ಡು ಖಾಲಿ ಆದ ನಂತರ ಆರೋಪಿಗಳು ಮತ್ತೊಂದು ಕೃತ್ಯವೆಸಗಲು ಹೊಂಚು ಹಾಕಿದ್ದರು ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿಮಾನದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಬಂಧನ

ಇಬ್ಬರು ಆರೋಪಿಗಳು ಕಳ್ಳತನ ಮಾಡಿದ್ದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಸುಬ್ರಮಣ್ಯಪುರ ಠಾಣಾ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X