ಬೆಂಗಳೂರು | ಮಹಿಳೆಯ ಮೇಲೆ ಹರಿದ ಲಾರಿ : ಸ್ಥಳದಲ್ಲೇ ಸಾವು

Date:

  • ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ
  • ಪ್ರತಿಭಟನಾಕಾರರನ್ನು ಚದುರಿಸುವ ಸಲುವಾಗಿ ಪೊಲೀಸರು ಲಾಠಿ ಬೀಸಿದರು

ಬೆಂಗಳೂರಿನ ನಾಯಂಡಹಳ್ಳಿ ಬಳಿ ಭಾನುವಾರ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಅನುಷಾ ಮೃತ ದುರ್ದೈವಿ. ಮಂಡ್ಯ ಮೂಲದ ಇವರು ಬೆಂಗಳೂರಿನಲ್ಲಿ ನೆಲೆಸಿದ್ದರು. ಇವರು ತಮ್ಮ ತಾಯಿ ವನಜಾಕ್ಷಿ ಹಾಗೂ ಏಳು ವರ್ಷದ ಮಗ ಆರ್ಯನೊಂದಿಗೆ ದ್ವಿಚಕ್ರ ವಾಹನದಲ್ಲಿ ದೀಪಾಂಜಲಿನಗರದ ಕಡೆಯಿಂದ ನಾಯಂಡಹಳ್ಳಿ ಕಡೆಗೆ ಬರುತ್ತಿದ್ದರು. ಈ ವೇಳೆ, ಸಿಮೆಂಟ್ ತುಂಬಿದ್ದ ಲಾರಿಯೊಂದು ದ್ವಿಚಕ್ರ ವಾಹನದ ಮೇಲೆ ಹರಿದು ನಂತರ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ.

ಈ ವೇಳೆ, ಲಾರಿಯೂ ಅನುಷಾ ತಲೆ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರ ತಾಯಿ ಮತ್ತು ಮಗನಿಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಘಟನೆ ನೋಡಿದ ಸ್ಥಳೀಯರು ತೀವ್ರ ಆಕ್ರೋಶಗೊಂಡಿದ್ದು, ಲಾರಿಯೂ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅದು ನಿಂತಿದೆ. ಇಲ್ಲದಿದ್ದರೇ, ಸರಣಿ ಭೀಕರ ಅಪಘಾತಗಳು ಸಂಭವಿಸುತ್ತಿದ್ದವು. ಇದಕ್ಕೆ ಲಾರಿ ಚಾಲಕನ ನಿರ್ಲಕ್ಷವೇ ಕಾರಣ ಎಂದು ಸಾರ್ವಜನಿಕರು ಆಕ್ರೋಶಗೊಂಡು ಲಾರಿಗೆ ಕಲ್ಲು ತೂರಿದರು. ಪರಿಣಾಮ ಮುಂಭಾಗದ ಗಾಜುಗಳು ಒಡೆದುಹೋಗಿದೆ. ಸ್ಥಳೀಯರು ಸ್ಥಳದಲ್ಲೇ ಪ್ರತಿಭಟನೆ ನಡೆಸಿದರು.

ಈ ವೇಳೆ, ಸ್ಥಳಕ್ಕೆ ಬಂದ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸುವ ಸಲುವಾಗಿ ಪೊಲೀಸರು ಲಾಠಿ ಬೀಸಿದರು.

ಲಾರಿ ಚಾಲಕ ಪರಾರಿಯಾಗಿದ್ದು, ಈತ ಪರಾರಿಯಾಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಾರ್ವಜನಿಕರು ಚಾಲಕನ್ನು ಹಿಡಿಯಲು ಪ್ರಯತ್ನಿಸಿದರಾದರೂ ಸಾಧ್ಯವಾಗಿಲ್ಲ. ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರದಲ್ಲಿ ಪ್ರಜಾಸತ್ತಾತ್ಮಕ, ಜಾತ್ಯತೀತ ಸರ್ಕಾರ ರಚನೆಯಾಗಬೇಕು: ಸಂವಿಧಾನ ರಕ್ಷಣಾ ವೇದಿಕೆ

ಪ್ರಜಾಪ್ರಭುತ್ವ ಉಳಿಸಿ - ಸಂವಿಧಾನವನ್ನು ರಕ್ಷಿಸಲು, ಈ ಬಾರಿ ಕೇಂದ್ರದಲ್ಲಿ ಪ್ರಜಾಸತ್ತಾತ್ಮಕ...

ನೀತಿ ಸಂಹಿತೆ ಉಲ್ಲಂಘನೆ; ಇಬ್ಬರು ಪ್ರಭಾವಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ಜೋರಾಗಿದೆ. ಏ.26 ರಂದು ಕರ್ನಾಟಕದಲ್ಲಿ ಮೊದಲ...

ಬ್ಯಾರಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ʼಬ್ಯಾರಿ ಸೆಂಟ್ರಲ್‌ ಕಮಿಟಿ ಬೆಂಗಳೂರುʼ ರಚನೆ : ಅಧ್ಯಕ್ಷರಾಗಿ ಶಬೀರ್‌ ಬ್ರಿಗೇಡ್‌

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿರುವ ಕರಾವಳಿ ಕರ್ನಾಟಕದ ಬಹುಮುಖ್ಯ ಸಮುದಾಯವಾಗಿರುವ ಬ್ಯಾರಿ...

ಏ.20ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ

ರಾಜ್ಯದಲ್ಲಿ ವಾಡಿಕೆಯಂತೆ ಮಳೆಯಾಗದೆ. ಕರಾವಳಿ ಪ್ರದೇಶಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ,...