ಬೆಂಗಳೂರು | ಮಹಿಳೆಯ ಮೇಲೆ ಹರಿದ ಲಾರಿ : ಸ್ಥಳದಲ್ಲೇ ಸಾವು

Date:

Advertisements
  • ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ
  • ಪ್ರತಿಭಟನಾಕಾರರನ್ನು ಚದುರಿಸುವ ಸಲುವಾಗಿ ಪೊಲೀಸರು ಲಾಠಿ ಬೀಸಿದರು

ಬೆಂಗಳೂರಿನ ನಾಯಂಡಹಳ್ಳಿ ಬಳಿ ಭಾನುವಾರ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಅನುಷಾ ಮೃತ ದುರ್ದೈವಿ. ಮಂಡ್ಯ ಮೂಲದ ಇವರು ಬೆಂಗಳೂರಿನಲ್ಲಿ ನೆಲೆಸಿದ್ದರು. ಇವರು ತಮ್ಮ ತಾಯಿ ವನಜಾಕ್ಷಿ ಹಾಗೂ ಏಳು ವರ್ಷದ ಮಗ ಆರ್ಯನೊಂದಿಗೆ ದ್ವಿಚಕ್ರ ವಾಹನದಲ್ಲಿ ದೀಪಾಂಜಲಿನಗರದ ಕಡೆಯಿಂದ ನಾಯಂಡಹಳ್ಳಿ ಕಡೆಗೆ ಬರುತ್ತಿದ್ದರು. ಈ ವೇಳೆ, ಸಿಮೆಂಟ್ ತುಂಬಿದ್ದ ಲಾರಿಯೊಂದು ದ್ವಿಚಕ್ರ ವಾಹನದ ಮೇಲೆ ಹರಿದು ನಂತರ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ.

ಈ ವೇಳೆ, ಲಾರಿಯೂ ಅನುಷಾ ತಲೆ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರ ತಾಯಿ ಮತ್ತು ಮಗನಿಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

Advertisements

ಈ ಘಟನೆ ನೋಡಿದ ಸ್ಥಳೀಯರು ತೀವ್ರ ಆಕ್ರೋಶಗೊಂಡಿದ್ದು, ಲಾರಿಯೂ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅದು ನಿಂತಿದೆ. ಇಲ್ಲದಿದ್ದರೇ, ಸರಣಿ ಭೀಕರ ಅಪಘಾತಗಳು ಸಂಭವಿಸುತ್ತಿದ್ದವು. ಇದಕ್ಕೆ ಲಾರಿ ಚಾಲಕನ ನಿರ್ಲಕ್ಷವೇ ಕಾರಣ ಎಂದು ಸಾರ್ವಜನಿಕರು ಆಕ್ರೋಶಗೊಂಡು ಲಾರಿಗೆ ಕಲ್ಲು ತೂರಿದರು. ಪರಿಣಾಮ ಮುಂಭಾಗದ ಗಾಜುಗಳು ಒಡೆದುಹೋಗಿದೆ. ಸ್ಥಳೀಯರು ಸ್ಥಳದಲ್ಲೇ ಪ್ರತಿಭಟನೆ ನಡೆಸಿದರು.

ಈ ವೇಳೆ, ಸ್ಥಳಕ್ಕೆ ಬಂದ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸುವ ಸಲುವಾಗಿ ಪೊಲೀಸರು ಲಾಠಿ ಬೀಸಿದರು.

ಲಾರಿ ಚಾಲಕ ಪರಾರಿಯಾಗಿದ್ದು, ಈತ ಪರಾರಿಯಾಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಾರ್ವಜನಿಕರು ಚಾಲಕನ್ನು ಹಿಡಿಯಲು ಪ್ರಯತ್ನಿಸಿದರಾದರೂ ಸಾಧ್ಯವಾಗಿಲ್ಲ. ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X