ಬೆಂಗಳೂರು | ಡೆತ್‌ನೋಟ್‌ ಬರೆದಿಟ್ಟು, ಟವೆಲ್‌ನಿಂದ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Date:

Advertisements
  • ಬೆಂಗಳೂರಿನ ನೆಲಮಂಗಲದ ಸುಭಾಷ್‌ನಗರದಲ್ಲಿ ಈ ಘಟನೆ ನಡೆದಿದೆ
  • ವಿನೀಶ್ ಮೂಲತಃ ಕೇರಳದ ಕಣ್ಣೂರು ಜಿಲ್ಲೆಯ ಪೆರಂದಟ್ಟದವರು

ರಾಜಧಾನಿ ಬೆಂಗಳೂರಿನಲ್ಲಿ ಡೆತ್‌ನೋಟ್‌ ಬರೆದಿಟ್ಟು, ವ್ಯಕ್ತಿಯೊಬ್ಬ ಟವೆಲ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಘಟನೆ ಬೆಂಗಳೂರಿನ ನೆಲಮಂಗಲದ ಸುಭಾಷ್‌ನಗರದಲ್ಲಿ ನಡೆದಿದೆ. ಎ.ವಿ ವಿನೀಶ್ ಮೃತ ದುರ್ದೈವಿ. ಈತನಿಗೆ 37 ವರ್ಷ ವಯಸ್ಸಾಗಿತ್ತು. ವಿನೀಶ್ ಮೂಲತಃ ಕೇರಳದ ಕಣ್ಣೂರು ಜಿಲ್ಲೆಯ ಪೆರಂದಟ್ಟದವರು. ಇವರು ನಗರದ ನೆಲಮಂಗಲದಲ್ಲಿರುವ ಪವರಿಕ ಎಂಬ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ಅಪ್ಪ-ಅಮ್ಮ ದಯವಿಟ್ಟು ನನ್ನನ್ನು ಕ್ಷಮಿಸಿ ಎಂದು ವಿನೀಶ್ ಡೆತ್‌ನೋಟ್‌ ಬರೆದಿಟ್ಟು, ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಭಾಷನಗರದಲ್ಲಿ ಮನೆ ಮಾಡಿದ್ದರು. ಮನೆಯ ಮೇಲುಗಡೆ ಇವರು ವಾಸಿಸುತ್ತಿದ್ದರು. ವಿನೀಶ್‌ ನನ್ನು ಆತನ ಸ್ನೇಹಿತರು ಭೇಟಿ ಮಾಡಲು ಮನೆ ಬಳಿ ಬಂದಾಗ ವಿನೀಶ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

Advertisements

ಈ ಸುದ್ದಿ ಓದಿದ್ದೀರಾ? ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

ವಿನೀಶ್ ಆತ್ಮಹತ್ಯೆಗೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X