ಬೆಂಗಳೂರು | ಪೊಲೀಸರ ಬಂಧನದ ಭೀತಿ; ಮೇಲ್ಸೇತುವೆಯಿಂದ ಬಿದ್ದು ವ್ಯಕ್ತಿ ಸಾವು!

Date:

  • ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು
  • ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ

ಗಾಂಜಾ ಸೇದುತ್ತಿದ್ದ ಇಬ್ಬರು ವ್ಯಕ್ತಿಗಳೊಂದಿಗೆ ಇದ್ದ ವ್ಯಕ್ತಿ ಪೊಲೀಸರು ತನ್ನನ್ನು ಬಂಧಿಸುತ್ತಾರೆ ಎಂಬ ಆತಂಕದಿಂದ ತಪ್ಪಿಸಿಕೊಳ್ಳುವ ಧಾವಂತದಲ್ಲಿ ರೈಲ್ವೆ ಮೇಲ್ಸೇತುವೆಯಿಂದ ಬಿದ್ದು ಮೃತಪಟ್ಟಿದ್ದಾನೆ ಎಂಬ ಸಂಶಯ ವ್ಯಕ್ತವಾಗಿದೆ.

ಬೆಂಗಳೂರಿನ ರೈಲ್ವೆ ಮೇಲ್ಸೇತುವೆ ಬಳಿ ಈ ಘಟನೆ ನಡೆದಿದೆ. ಶ್ರೀರಾಂಪುರದ ಸ್ವತಂತ್ರಪಾಳ್ಯದ ನಿವಾಸಿ ಅಬ್ರಹಾಂ(30) ಮೃತ ವ್ಯಕ್ತಿ ಎಂದು ಪತ್ತೆ ಮಾಡಲಾಗಿದೆ.

ಬೆಂಗಳೂರಿನ ಖಾಸಗಿ ಅಪಾರ್ಟ್​ಮೆಂಟ್​ ಬಳಿ ನಿರ್ಜನ ಪ್ರದೇಶದಲ್ಲಿ ಗಾಂಜಾ ಸೇದುತ್ತಿದ್ದ ಇಬ್ಬರು ವ್ಯಕ್ತಿಗಳ ಜೊತೆ ಅಬ್ರಹಾಂ ಕೂಡ ಇದ್ದ ಎಂದು ತಿಳಿದುಬಂದಿದೆ.

ಗಾಂಜಾ ಸೇದುತ್ತಿದ್ದ ಇಬ್ಬರನ್ನು ಪೊಲೀಸರು ಸೆರೆ ಹಿಡಿದಿದ್ದು, ತನ್ನನ್ನು ಸೆರೆಹಿಡಿಯಬಹುದು ಎಂದು ತಿಳಿದು ಅಬ್ರಹಾಂ ಪೊಲೀಸರಿಂದ ತಪ್ಪಿಸಿಕೊಳ್ಳಲು ಓಡಿ ಹೋಗಿದ್ದಾನೆ. ಈ ವೇಳೆ, ಗಾಂಜಾ ಮತ್ತಿನಲ್ಲಿ ಓಡಿ ಹೋಗುವಾಗ ಅಬ್ರಹಾಂ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? Beautiful Bengaluru | ನಗರದ ಅಂದ ಹೆಚ್ಚಿಸಿದ ಟಬೆಬೂಯ ಬಂದದ್ದು ಎಲ್ಲಿಂದ? ಇಲ್ಲಿದೆ ನೋಡಿ

ಪೊಲೀಸರ ಹಲ್ಲೆಯಿಂದ ಸಾವು; ಮೃತನ ತಂದೆ ಆರೋಪ

“ಅಬ್ರಹಾಂಗೆ ಈ ಹಿಂದೆ ಗಾಂಜಾ ಸೇದುವ ಚಟವಿತ್ತು. ಆದರೆ, ಈಗ ಎಲ್ಲ ಚಟಗಳನ್ನು ಬಿಟ್ಟು ಒಳ್ಳೆಯವನಾಗಿದ್ದನು. ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿಕೊಂಡು ಕೆಲಸ ಇದ್ದ ಕಾರಣ ಹೊರಗಡೆ ಹೋಗಿದ್ದನು. ಅಬ್ರಹಾಂನನ್ನು ಸೆರೆ ಹಿಡಿದು ಬೆಂಗಳೂರಿನ ಮಲ್ಲೇಶ್ವರಂ ಠಾಣೆ ಪೊಲೀಸರೇ ಅವನ ಮೇಲೆ ಹಲ್ಲೆ ಮಾಡಿ ಕೊಂದಿದ್ದಾರೆ. ಅಬ್ರಹಾಂನ ದೇಹದ ಮೇಲೆ ಪೊಲೀಸರ ಬೂಟಿನ ಗುರುತುಗಳಿವೆ. ಮಗನ ಸಾವಿಗೆ ನ್ಯಾಯ ಬೇಕು” ಎಂದು ಅಬ್ರಹಾಂ ತಂದೆ ಶಂಕರ್​ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಕಾಲ್ತುಳಿತ ದುರಂತ | ಹೈಕೋರ್ಟ್‌ಗೆ ವರದಿ ಸಲ್ಲಿಸಲು ಒಂದು ವಾರ ಕಾಲಾವಕಾಶ ಕೋರಿದ ಸರ್ಕಾರ

ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ್ದ...

ಬೆಂಗಳೂರು | ಪದೇ-ಪದೇ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ; ಪತಿ ಆತ್ಮಹತ್ಯೆ

ಆಗ್ಗಾಗ್ಗೆ ಸಣ್ಣ-ಪುಟ್ಟ ಜಗಳಗಳಿಗೂ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿಯ ನಡೆಯಿಂದ ನೊಂದ...

ಕಟ್ಟಡ ನಕ್ಷೆ ಮಂಜೂರಾತಿ ನೀಡಲು ಜುಲೈ 1ರಿಂದ ಇ-ಖಾತಾ ಕಡ್ಡಾಯ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬಿಬಿಎಂಪಿ ವ್ಯಾಪ್ತಿಯಲ್ಲಿ ಈಗಾಗಲೇ ಇಒಡಿಬಿ-ಒಬಿಪಿಎಸ್ (EoDB-OBPS) ತಂತ್ರಾಂಶದ ಮೂಲಕ ಕಟ್ಟಡ ನಕ್ಷೆ...

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ʼಪಿನಾಕʼ ಸಿನೆಮಾ; ಅದ್ದೂರಿ ಸೆಟ್‌ನಲ್ಲಿ ಚಿತ್ರೀಕರಣ

ಪೀಪಲ್ ಮೀಡಿಯಾ ಫ್ಯಾಕ್ಟರಿ ಲಾಂಛನದಲ್ಲಿ ವಿಶ್ವಪ್ರಸಾದ್ ಅವರು ಅದ್ದೂರಿಯಾಗಿ ನಿರ್ಮಿಸುತ್ತಿರುವ, ನೃತ್ಯ...

Download Eedina App Android / iOS

X